ಶಿವರಾಮ ಕಾರಂತರ 'ಬತ್ತದ ತೊರೆ' ೧೯೫೩ ರಲ್ಲಿ ಮೂಡಿಬಂದ ಕೃತಿ. ಕನ್ನಡ ಸಾಹಿತ್ಯಕ್ಕೆ ಕಾರಂತರ ಕೊಡುಗೆ ಅಪಾರವಾದುದೆಂಬುವುದರಲ್ಲಿ ಎರಡು ಮಾತಿಲ್ಲ. ಕಡಲ ತೀರದ ಭಾರ್ಗವರೆಂದು ಖ್ಯಾತನಾಮರಾದ ಕಾರಂತರು ತಮ್ಮ ೫೦ ನೇಯ ವಯಸ್ಸಿನ ಆಸುಪಾಸಿನಲ್ಲಿ ಬರೆದ ಕೃತಿಯಿದು. ಅವರ ಸಮಕಾಲೀನರಾಗಿ ಹಲವು ಕಾದಂಬರಿಕಾರರು ಇದ್ದರೂ ಕೂಡಾ, ಅವರ ಕಾದಂಬರಿ ಪ್ರಕಾರದ ಸಾಧ್ಯತೆಗಳ ಅನಾವರಣ, ಅವುಗಳಲ್ಲಿನ ಹೊಸ ಪ್ರಯೋಗಗಳು ಇವುಗಳೆಲ್ಲಾ ಉಳಿದವರಿಗಿಂತಲೂ ಕಾರಂತರನ್ನು ಶ್ರೇಷ್ಠರನ್ನಾಗಿಸುತ್ತದೆ. ಇನ್ನು ಬತ್ತದ ತೊರೆ ಕಾದಂಬರಿಯಲ್ಲಿ ಐವರು ತರುಣಿಯರ ವಾಸ್ತವಿಕ ಜೀವನವನ್ನು ಮೂಲವಸ್ತುವನ್ನಾಗಿಸಿಕೊಂಡು ಮಂಜುಳೆ, ವಿನತೆ, ಅಂಜಲಿ ಈ ಮೂರು ಸ್ತ್ರೀ ಪಾತ್ರಗಳ ಮೂಲಕ ಚಿತ್ರಿಸಿದ್ದಾರೆ. ಸಹಜ ಪ್ರೇಮದಿಂದ ನಿರಾಶೆಗೊಂಡು ಮದುವೆ ಹುಳಿಯೆಂದು ತಿಳಿದವಳೊಬ್ಬಳಾದರೆ, ಮದುವೆ ಎಂಬುದು ಮೂರ್ಖತನ ಅಂದುಕೊಂಡೇ, ಜೀವನದ ಭಧ್ರತೆಗಾಗಿ ಮದುವೆಯಾದವಳೊಬ್ಬಳು, ತಾಯ್ತನವನ್ನು ಅದುಮಿ ಹಿಡಿದು ಕಣ್ಣೀರು ಕರೆದವಳೊಬ್ಬಳು, ವೇಶ್ಯೆಯಾಗಿ ಹುಟ್ಟಿ, ಮರ್ಯಾದಸ್ಥ ಬಾಳಿಗಾಗಿ ಊರು ಬಿಟ್ಟು ಓಡಿ ಹೋದವಳು, ಕಾದು ಕಾದು ಅಲೆದಾಡಿ, ಮದುವೆಯಾಗಿ ಗಂಡನನ್ನು ನಂಬಿ, ಅವನ ಸೆರೆಗೆ ಸಿಲುಕಿ ತಪ್ಪೇನೂ ಮಾಡದಿದ್ದರೂ, ತಾನು ಜಾರೆಯೆಂದು ಬರೆದು ಕೊಟ್ಟ ಸಹನಾಮಯಿಯೊಬ್ಬಳು, ಹೀಗೇ ಐವರು ಸ್ತ್ರೀಯರ ಜೀವನ ಇಲ್ಲಿ ಕಾದಂಬರಿಯಾಗಿದೆ. ಇಲ್ಲಿನ ಕೆಲವೊಂದು ಸನ್ನಿವೇಶಗಳು ಊಹೆಗೂ ಮೀರಿದ ಸತ್ಯಗಳಾಗಿವೆ ಎನ್ನುತ್...
ಕಾಮೆಂಟ್ಗಳು