ವಿಷಯಕ್ಕೆ ಹೋಗಿ

ಫೈಹ ತರ್ಬಿಯಾ ವೆಕೇಶನ್ ಕೋರ್ಸ್ ಗೆ ವಿದ್ಯುಕ್ತ ಚಾಲನೆ



ಉಪ್ಪಳ: ಪೈವಳಿಕೆ ಪಯ್ಯಕ್ಕಿ ಉಸ್ತಾದ್ ಇಸ್ಲಾಮಿಕ್ ಅಕಾಡೆಮಿಯ ಪೂರ್ವ ವಿದ್ಯಾರ್ಥಿ ಸಂಘ 'ಫೈಹಾ' ದ ವತಿಯಿಂದ ನಡೆಸಲ್ಪಡುವ 40 ದಿನಗಳ ತರ್ಬಿಯಾ ವೆಕೇಶನ್ ಸರ್ಟಿಫಿಕೇಟ್ ಕೋರ್ಸ್ ಗೆ ಸೋಮವಾರ ಉಪ್ಪಳದ ಬದ್ರಿಯಾ ಮದ್ರಸಾ ಸಭಾಂಗಣದಲ್ಲಿ ವಿದ್ಯುಕ್ತ ಚಾಲನೆ ನೀಡಲಾಯಿತು.

ಮುತವಲ್ಲಿ ಮುಹಮ್ಮದ್ ತುರುತ್ತಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭವನ್ನು ಪಯ್ಯಕ್ಕಿ ಉಸ್ತಾದ್ ಇಸ್ಲಾಮಿಕ್ ಅಕಾಡೆಮಿಯ ಅಧ್ಯಕ್ಷರಾದ ಅಬ್ದುಲ್ ಮಜೀದ್ ದಾರಿಮಿ ಪೈವಳಿಕೆ ಉದ್ಘಾಟಿಸಿದರು.



ಪೈವಳಿಕೆ ಅನ್ಸಾರಿಯಾ ದಅವಾ ಕಾಲೇಜಿನ ಅಧ್ಯಾಪಕರಾದ ರಫೀಕ್ ಬಾಖವಿ ಮಠ ಕಾರ್ಯಕ್ರಮದಲ್ಲಿ ತರ್ಬಿಯಾ ಕೋರ್ಸ್ ನ ಅನಿವಾರ್ಯತೆಯ ಬಗ್ಗೆ ವಿಷಯ ಮಂಡನೆ ನಡೆಸಿದರು.



ಕಾರ್ಯಕ್ರಮದಲ್ಲಿ ಪಯ್ಯಕ್ಕಿ ಉಸ್ತಾದ್ ಅಕಾಡೆಮಿಯ ಜ. ಸೆಕ್ರಟರಿ ಹನೀಫ್ ಹಾಜಿ ಪೈವಳಿಕೆ, ಟ್ರಶರರ್ ಅಝೀಝ್ ಹಾಜಿ ಮರಿಕ್ಕೆ,ಕಾರ್ಯದರ್ಶಿ ಸ್ವಾಲಿಹ್ ಹಾಜಿ ಕಳಾಯಿ ,ಪಯ್ಯಕ್ಕಿ ದರ್ಸ್ ಪೂರ್ವ ವಿದ್ಯಾರ್ಥಿಗಳ ಸಂಘ- ಓಸ್ಫೋಮಾಕ್ಸ್ ನ ಅಧ್ಯಕ್ಷರಾದ ಟಿ.ಎಚ್. ಅಬ್ದುಲ್ ಖಾದರ್ ಫೈಝಿ ಚೆಂಗಳ, ಪೈವಳಿಕೆ ಅನ್ಸಾರಿಯಾ ಕಾಲೇಜಿನ ಅಧ್ಯಾಪಕ ಲತೀಫ್ ದಾರಿಮಿ, ಕ್ಯಾಲಿಕಟ್ ಮುಹಮ್ಮದ್ ಹಾಜಿ,ಮುಹಮ್ಮದ್ ಕುಂಞಿ ಪೈವಳಿಕೆ, ಅಬ್ದುಲ್ ಜಬ್ಬಾರ್ ಉಪ್ಪಳ, ಹಮೀದ್ ಮಾಸಿಮಾರ್, ಹನೀಫ್ ಗೋಲ್ಡ್ ಕಿಂಗ್, ಉಪ್ಪಳ ಟೌನ್ ಖತೀಬ್ ಇಬ್ರಾಹಿಂ ಹನೀಫಿ, ಹನೀಫ್ ಮುಸ್ಲಿಯಾರ್ ತಹಾನಿ ಮುಂತಾದ ಗಣ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಪಯ್ಯಕ್ಕಿ ಅಕಾಡೆಮಿಯಿಂದ ಅನ್ಸಾರಿ ಬಿರುದು ಪಡೆದು, ಇತ್ತೀಚೆಗೆ ಮಂಗಳೂರಿನ ಶ್ರೀನಿವಾಸ್ ಯುನಿವರ್ಸಿಟಿಯಿಂದ ಬಿ.ಎಡ್ ಪದವೀಧರರಾಗಿ ಉತ್ತೀರ್ಣರಾದ ಅಬ್ದುಸ್ಸಮದ್ ಅನ್ಸಾರಿ ಹಾಗೂ ನಿಯಾಝ್ ಅನ್ಸಾರಿ, ಅಲ್ಲದೇ ಬೆಂಗಳೂರಿನ ಅಝೀಂ ಪ್ರೇಂಜಿ ಯುನಿವರ್ಸಿಟಿಯಲ್ಲಿ ಉನ್ನತ ವ್ಯಾಸಂಗಕ್ಕಾಗಿ ಪ್ರವೇಶಾತಿ ಪಡೆದ ಅದ್ನಾನ್ ಅನ್ಸಾರಿ ಇವರನ್ನು ಫೈಹಾ ದ ವತಿಯಿಂದ ಸ್ಮರಣಿಕೆ ನೀಡಿ ಅಭಿನಂದಿಸಲಾಯಿತು.







ಈ ವೇಳೆ ತರ್ಬಿಯಾ ಕೋರ್ಸ್ ಗೆ ಪ್ರವೇಶಾತಿ ಪಡೆದ ವಿದ್ಯಾರ್ಥಿನಿಯರು ಮತ್ತು ಪೋಷಕರು ಹಾಗೂ ಸ್ಥಳೀಯರು ಮತ್ತು ಫೈಹಾದ ಸದಸ್ಯರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಅದ್ನಾನ್ ಅನ್ಸಾರಿ ಸ್ವಾಗತಿಸಿ, ಅರಫಾತ್ ಅನ್ಸಾರಿ ವಂದಿಸಿದರು.

ಪ್ರಸ್ತುತ ಫೈಹಾ ತರ್ಬಿಯಾ ಕೋರ್ಸ್ ನಲವತ್ತು ದಿನಗಳಲ್ಲಿ ನಡೆಯಲಿದ್ದು, ಒಂದು ತಿಂಗಳ ಹಿಂದೆಯೇ ಪ್ರವೇಶಾತಿ ಅಪೇಕ್ಷೆ ಕರೆಯಲಾಗಿದ್ದು, 35 ರಷ್ಟು ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಮತ್ತು ಆಫ್ ಲೈನ್ ಮೂಲಕವೂ ಅಪೇಕ್ಷೆ ಸಲ್ಲಿಸಿದ್ದರು. ಅವಧಿಕಾಲದಲ್ಲಿ ವಿದ್ಯಾರ್ಥಿನಿಯರಲ್ಲಿ ಧಾರ್ಮಿಕ ಪ್ರಜ್ಞೆಯನ್ನು ಮೂಡಿಸಿ, ಇಸ್ಲಾಮಿನ ಆಶಯಾದರ್ಶಗಳ ತಾತ್ವಿಕ ಹಾಗೂ ಪ್ರಾಯೋಗಿಕ ಕಲಿಕೆ ಒತ್ತು ನೀಡಿ. ಆಧುನಿಕತೆಯ ತಾಳಕ್ಕೆ ಗತಿಸಿ ಹೋಗುತ್ತಿರುವ ಧಾರ್ಮಿಕ ಮೌಲ್ಯಗಳ ಕುರಿತಾದ ಅರಿವು ಮೂಡಿಸಿ ಆ ಮೂಲಕ ಸಮರ್ಥರಾದ ಸ್ತ್ರೀ ಸಮುದಾಯವನ್ನು ಸಮಾಜಕ್ಕೆ ಸಮರ್ಪಿಸುವ ಮಹತ್ತರವಾದ ಉದ್ದೇಶವನ್ನು ಹೊಂದಿದೆ ಫೈಹಾ. ಅದಕ್ಕಾಗಿಯೇ ದಿನದ ನಾಲ್ಕು ಗಂಟೆಗಳಲ್ಲಿ ಮೂರು ಅಧ್ಯಾಪಕರನ್ನಿಟ್ಟುಕೊಂಡು ಪ್ರತ್ಯೇಕ ಸಿಲಬಸ್ ನ ಪ್ರಕಾರ ತರಗತಿಯನ್ನು ನಡೆಸಲಾಗುತ್ತಿದೆ. ಪ್ರಸ್ತುತ ಕೋರ್ಸ್ ನ ಕೊಆಡಿನೇಟರಾಗಿ ಜಾಬಿರ್ ಅನ್ಸಾರಿ ಕಾರ್ಯನಿರ್ವಹಿಸುತ್ತಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಅಳಿವಿನಂಚಿನಲ್ಲಿರುವ ಸಾಂಪ್ರದಾಯಿಕ ಕೃಷಿ ಪರಂಪರೆ-* ನಿಝಾಮ್ ಅನ್ಸಾರಿ

ಭಾರತವು ಕೃಷಿ ಅವಲಂಬಿತ ಹಳ್ಳಿಗಳನ್ನೊಳಗೊಂಡ ಸಮೃದ್ಧ ದೇಶ. ದೇಶದ ಬೆಳವಣಿಗೆಯಲ್ಲಿ ವ್ಯವಸಾಯದ ಪಾತ್ರ ಬಹುಮುಖ್ಯವಾದುದು. ತಂತ್ರಜ್ಞಾನವು ದೇಶಕ್ಕೆ ಯಾವ ರೀತಿಯಲ್ಲಿ ಕೊಡುಗೆಗಳನ್ನು ನೀಡುತ್ತವೆಯೋ ಅದೇ ರೀತಿಯಲ್ಲಿ ಕೃಷಿಯ ಕೊಡುಗೆಯೂ ಕೂಡಾ ಅಪಾರವಾದುದು. ಆದರೆ ಇತ್ತೀಚಿನ ದಿನಗಳಲ್ಲಿ ಹಳ್ಳಿಗಳಲ್ಲಿ ವ್ಯವಸಾಯವು ಇಳಿಮುಖವಾಗುತ್ತಿದೆ. ಕೇವಲ ಬೆರಳೆಣಿಕೆಯಷ್ಟು ಮಂದಿ ಮಾತ್ರ ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವವರನ್ನು ಕಾಣಬಹುದಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿನ ಜನರು ವಿದ್ಯಾವಂತರಾಗುತ್ತಲೇ ತಮ್ಮ ಪಾರಂಪರಿಕ ಕುಲ ಕಸುಬನ್ನು ನಿರ್ಲಕ್ಷಿಸಿ ನಗರಗಳತ್ತ ವಲಸೆ ಹೋಗುತ್ತಿದ್ದಾರೆ.ಕೈ ಕೆಸರು ಮಾಡಿಕೊಂಡು ದುಡಿಯುವವರ ಕೊರತೆ ಅಗಾಧವಾಗಿ ಎದ್ದು ಕಾಣುತ್ತಿದೆ. ಇಂದಿನ ನವ ತಲೆಮಾರು ಹಳ್ಳಿಗಳು ಕೇವಲ ವೃದ್ಧರಿಗೆ ಮಾತ್ರ ಯೋಗ್ಯವಾದುದು ಎಂದು ತಿಳಿದಂತಿದೆ. `ನೇಗಿಲಾ ಹಿಡಿದಾ ಹೊಲದಲಿ ಹಾಡುತ ಉಳುವಾ ಯೋಗಿಯ ನೋಡಲ್ಲಿ’ ಎಂದು ಕುವೆಂಪುರಂತಹ ಖ್ಯಾತ ಕವಿಗಳಿಂದ ಕೊಂಡಾಡಲ್ಪಟ್ಟ ಕೃಷಿ ಚಟುವಟಿಕೆಗಳಿಂದು ಕಣ್ಮರೆಯಾಗಿದೆ. ನೇಗಿಲಿನಂತಹ ಕೃಷಿ ಸಲಕರಣೆಗಳು ಇಂದು ಮ್ಯೂಸಿಯಂ ಸೇರಿಬಿಟ್ಟಿವೆ. ಇದರೊಂದಿಗೆ ಅತ್ಯಂತ ಸುಂದರವಾದ ಕೃಷಿ ಪರಂಪರೆ ಮೂಲೆಗುಂಪಾಗುತ್ತಿದೆ. ಹಳೆಯ ಕಾಲದ ಸಾಂಪ್ರದಾಯಿಕ ಬೇಸಾಯಕ್ಕೆ ಉಪಯೋಗವಾಗುತ್ತಿದ್ದ ಪರಿಕರಗಳ ಸ್ಥಾನವನ್ನು ಟ್ರಾಕ್ಟರ್,ಟಿಲ್ಲರ್ ಗಳಂತಹ ಯಂತ್ರಗಳು ಆಕ್ರಮಿಸಿಕೊಂಡಿವೆ. ಭತ್ತ ನಾಟಿ ಮಾಡುವ ಮಹಿಳೆಯರಿಂದ ಕೇಳಿ ಬರು...

ಅರಬಿ ಭಾಷೆ : ಇತಿಹಾಸ ಮತ್ತು ವರ್ತಮಾನ

✒ ನಿಝಾಮ್ ಅನ್ಸಾರಿ ಭಾಷೆ ಮನುಷ್ಯನ ಸವಿಶೇಷತೆಗಳಲ್ಲೊಂದು. ಚಿಂತನೆಗಳು ಮತ್ತು ಅಭಿರುಚಿಗಳ ಆಶಯವನ್ನು ಅಭಿವ್ಯಕ್ತಿಗೊಳಿಸುವ ಅಥವಾ ಹೊರ ಹಾಕುವ ಶಬ್ದಗಳ ಒಂದು ಸಮೂಹವಾಗಿದೆ ಇದು. ಪ್ರಪಂಚದಲ್ಲಿ ಇಂದು ಹಲವು ಅಧಿಕೃತವಾಗಿರುವ ಭಾಷೆಗಳು ಅಸ್ತಿತ್ವದಲ್ಲಿವೆ.ಅದರಲ್ಲೂ ಪ್ರಾದೇಶಿಕ ಭಾಷೆಗಳು ಬೇರೇನೆ. ಆದರೆ ಈ ಎಲ್ಲಾ ಭಾಷೆಗಳ ಪೈಕಿ ರಾಜನಂತೆ ಇರೋದು ಅರಬಿ ಭಾಷೆ ಮಾತ್ರ . ಒಂದು ಕಾಲದಲ್ಲಿ ಇಡೀ ಜಗತ್ತನ್ನೇ ನಿಯಂತ್ರಿಸುವ ತಾಕತ್ತಿದ್ದ ಭಾಷೆಯಾಗಿತ್ತು ಅರಬಿ. ಯಾವ ರೀತಿಯಲ್ಲಿ ಈಗ ಆಂಗ್ಲ ಭಾಷೆಗೆ ಪ್ರಾಧಾನ್ಯತೆ, ಜಾಗತಿಕ ಅಂಗೀಕಾರ ಇದೆಯೋ ಅದೇ ರೀತಿಯಲ್ಲಿ ಅಂದು ಅರಬಿ ಭಾಷೆ ಸ್ಥಾನ ಪಡೆದಿತ್ತು. ಬಲದಿಂದ ಎಡಕ್ಕೆ ಇರುವ ಕೆಲವೊಂದು ಭಾಷೆಗಳಲ್ಲಿ ಅರಬೀ ಕೂಡಾ ಒಂದು. ಸೈಮಟಿಕ್ ಭಾಷೆಗಳಲ್ಲೊಂದಾದ ಅರಬಿ ಜಗತ್ತಿನ ಅತ್ಯಂತ ಪುರಾತನ ಭಾಷೆಗಳ ಪೈಕಿ ಒಂದು ಕೂಡಾ . ಐಕ್ಯ ರಾಷ್ಟ್ರ ಸಂಘದ ಅಂಗೀಕೃತ ಭಾಷೆಯಾದ ಅರಬಿ, 26 ದೇಶಗಳ ಅಧಿಕೃತ ಭಾಷೆಯಾಗಿದೆ‌. ಆಫ್ರಿಕನ್ ಯೂನಿಯನ್ ಆರ್ಗನೈಸೇಷನ್ ಇಸ್ಲಾಮಿಕ್ ಕಾನ್ಫೆರನ್ಸ್ ನಂತಹ ಹಲವು ಅಂತಾರಾಷ್ಟ್ರೀಯ ಸಂಸ್ಥೆಗಳು ಅರಬಿ ಭಾಷೆಯನ್ನು ಅಧಿಕೃತ ಭಾಷೆಯಾಗಿ ಅಂಗೀಕರಿಸಿದೆ. ಅರಬಿ ಭಾಷೆ: ಹುಟ್ಟು ಮತ್ತು ಬೆಳವಣಿಗೆ ಬಿ.ಸಿ 1900 ರಲ್ಲಿ ಜೀವಿಸಿದ್ದ 'ಯಅರೂಬ್ ಇಬ್ನ್ ಖಹ್ತಾನ್' ಎಂಬವರನ್ನು ಅರಬಿ ಭಾಷೆಯ ಪಿತಾಮಹ ಎಂದು ಕರೆಯಲಾಗುತ್ತದೆ. ಇವರ ನಾಮಕ್ಕೆ ಹೊಂದಿಕೊಂಡು 'ಅರಬಿ' ಎಂಬ ಹೆಸರು...

ಕೋವಿಡ್ ಕಾಲದ ಓದು: ಚಂದ್ರನ ಚೂರು

'ಚಂದ್ರನ ಚೂರು' ಕೃತಿಯ ಹೆಸರು ಕೇಳಿದಾಗ ನಿಜವಾಗಿಯೂ ಅದೊಂದು ಕಾದಂಬರಿಯಾಗಿರಬಹುದು ಎಂದು ಭಾವಿಸಿದ್ದೆ. ಆದರೆ, ಪುಸ್ತಕ ಕೈಗೆ ತಲುಪಿದಾಗಲೇ ಗೊತ್ತಾಗಿದ್ದು, ಅದೊಂದು ಚಂದ್ರಲೋಕಕ್ಕೆ ಕೊಂಡೊಯ್ಯುವ ಅದ್ಭುತ ಕೃತಿ ಅಂತ. ತಂದೆ ಕುವೆಂಪು ಅವರ ಸಾಹಿತ್ಯದ ಹಾದಿಯಲ್ಲೇ ನಡೆದರೂ, ತೇಜಸ್ವಿಯವರ ಸಾಹಿತ್ಯವು ನಿಸರ್ಗ ವಿಸ್ಮಯ, ಭೂಗೋಳ, ಜೀವಶಾಸ್ತ್ರ, ಭತಶಾಸ್ತ್ರ, ಇತಿಹಾಸ ಹೀಗೇ ಎಲ್ಲಾ ಶಾಸ್ತ್ರಗಳ ಮಿಶ್ರಣ ರಸಾಯನ ಎಂದೇ ಹೇಳಬಹುದು. ಚಂದ್ರನ ಚೂರು ಚಂದ್ರ ಲೋಕದ ವಿಸ್ಮಯ ದೃಶ್ಯಗಳನ್ನು ಕಟ್ಟಿಕೊಡುವ ಚೊಚ್ಚಲ ಕೃತಿ. ಬಾಹ್ಯಾಕಾಶ, ಖಗೋಳ ಶಾಸ್ತ್ರ ವಿಷಯದಲ್ಲಿ ಆಸಕ್ತಿ ಇಲ್ಲದ ನನ್ನಂತವರನ್ನೂ ಇದು ಸರಾಗವಾಗಿ ಓದಿಸಿಕೊಂಡು ಹೋಗುವಂತೆ ಮಾಡುತ್ತದೆ, ಅದಕ್ಕೆ ಕಾರಣ, ತೇಜಸ್ವಿ ಅವರ ಬರವಣಿಗೆ ಹಾಗೂ ವಿವರಣೆಯ ಶೈಲಿ.. ಜಗತ್ತಿನಲ್ಲಿ ಮನುಷ್ಯನು ಚಂದ್ರನಲ್ಲಿಗೆ ಕಾಲಿಡುವುದಕ್ಕೂ ಮುನ್ನ, ಯಾವುದೆಲ್ಲಾ ರೀತಿಯ ಪರಿಶ್ರಮಗಳು ನಡೆದಿದ್ದವು ಹಾಗೂ ಭೂಮಂಡಲ ಮತ್ತು ಚಂದ್ರನ ಕುರಿತಾಘಿ ಯಾವುದೆಲ್ಲಾ ಆಯಾಮಗಳಲ್ಲಿ ಅಧ್ಯಯನಗಳಾಗಿದ್ದುವು ಎಂಬುದರ ಸಂಪೂರ್ಣ ವಿಷಯಗಳಿವೆ. ಚಂದ್ರನಲ್ಲಿ ತಲುಪಿದ ಮನುಷ್ಯನಿಗೆ ಆದ ಅನುಭವಗಳೇನು? ನೀಲ್ ಆಮ್Fಸ್ಟ್ರಾಂಗ್ ತಂಡದ ಚಂದ್ರಯಾನದ ರಸವತ್ತಾದ ಅನುಭವಗಳು, ಚಂದಿರನ ಮಣ್ಣಲ್ಲಿ ಅಮೇರಿಕದ ಫ್ಲಾಗ್ ಮತ್ತು ಬೋಡ್F ಸ್ಥಾಪಿಸಿ ಬಂದ ಆ ಧೀರ ತಂಡದ ಬೆರಗಾಗಿಸುವ ಕ್ಷಣ ಕ್ಷಣದ ವರದಿಗಳು ಈ ಕೃತಿಯ ಲೇಖನಗಳಲ್ಲಿ ಅಡಗಿದೆ. ಒಟ್ಟಿನಲ...