ವಿಷಯಕ್ಕೆ ಹೋಗಿ

ರಂಝಾನ್ ನೀಡುವ ಒಳಿತಿನ ಸಂದೇಶ...

-ನಿಝಾಮ್ ಅನ್ಸಾರಿ



ಮತ್ತೆ ರಂಝಾನ್ ತಿಂಗಳ ಆಗಮನವಾಗಿದೆ. ಪ್ರತಿ ವರ್ಷವೂ ರಂಝಾನ್ ಬಗ್ಗೆ ಬರೆಯುವಾಗ ಅದರ ಶ್ರೇಷ್ಟತೆ, ವ್ರತಾನುಷ್ಟಾನದ ಪ್ರಾಧಾನ್ಯತೆಯನ್ನೇ ಹೆಚ್ಚಿನವರೂ ಬರೆಯುತ್ತಾರೆ. ಅದನ್ನೇ ಮಸೀದಿಗಳಲ್ಲೂ ಹೇಳುವುದಿದೆ. ಒಳ್ಳೆಯದೇ. ಕಾರಣ ಆಧುನಿಕ ಜನರು ಧರ್ಮದ ಪ್ರತಿಯೊಂದು ವಿಷಯಗಳಲ್ಲೂ ಸಡಿಲಿಕೆ ಬಯಸುತ್ತಾರೆ. ಅಂದರೆ ಅವರವರ ಜೀವನಕ್ರಮಗಳಿಗನುಸಾರವಾಗಿ ಧರ್ಮದ ನಿಯಮಗಳನ್ನು ಗಾಳಿಗೆ ತೂರುವಂತಹ ಕಾರ್ಯಗಳು ಎಲ್ಲಾ ಕಡೆ ನಡೆಯುತ್ತಲಿದೆ. ಹಾಗಿರುವಾಗ ರಂಝಾನ್ ವ್ರತಾಚರಣೆಯ ಮಹತ್ವವನ್ನು ಪ್ರತಿ ಬಾರಿಯೂ ಪ್ರಭಾಷಣ ವೇದಿಕೆಗಳಲ್ಲಿ, ಮಸೀದಿಗಳಲ್ಲಿ ಜನ ಸಾಮಾನ್ಯರಿಗೆ ನೆನಪಿಸುತ್ತಲಿರುವುದು ಸ್ವಾಗತಾರ್ಹವಾದುದು. ಮತ್ತು ಪ್ರಯೋಜನಕಾರಿಯೂ ಕೂಡಾ.

ಯಾಕೆ ಈ ರೀತಿ ಬರೆದೆ ಅಂತ ಕೇಳಿದರೆ, ಇತ್ತೀಚೆಗೆ ವಾಟ್ಸಾಪ್ ನೊಳಗೆ ಕಣ್ಣಾಡಿಸಿದಾಗ ಕಂಡ ಕೆಲವೊಂದು ಸಂದೇಶಗಳು ಧರ್ಮದ ಬಗ್ಗೆ ಕೀಳರಿಮೆಯ ಭಾವ ತೋರುವವರಿಗೆ ತಕ್ಕ ಉತ್ತರ ನೀಡುವಂತಿತ್ತು.
ಬಡ ಕುಟುಂಬಕ್ಕೆ ಮನೆ ಕಟ್ಟುವ ಸಹಾಯಾರ್ಥ ಕಲೆಕ್ಷನ್, ರಂಝಾನ್ ನಂತರದ ಬಡ ಹೆಣ್ಮಕ್ಕಳ ಮದುವೆಗಾಗಿ, ಮುಅಲ್ಲಿಂಗಳಿಗಾಗಿ ಹೀಗೇ ಹಲವು ರೀತಿಯಲ್ಲಿ ಯುವ-ವಯಸ್ಕರು ಸೇರಿ ಸಮುದಾಯದೊಂದಿಗಿನ ಸಾಮಾಜಿಕ ಕಾಳಜಿಗಾಗಿ ರಂಝಾನ್ ಅನ್ನು ಉಪಯೋಗಿಸುತ್ತಿದ್ದಾರೆನ್ನುವಾಗ ಧರ್ಮದ ಮನದಲ್ಲಿ ಅಭಿಮಾನ ಮೂಡುತ್ತಿದೆ.

ಬುರ್ಖಾದ ವಿಚಾರದಲ್ಲಿ ಬಲತ್ಕಾರ ಮಾಡಲಾಗುತ್ತದೆ ಎಂದು ಆರೋಪಿಸುತ್ತಿರುವಾಗ, ಆ ವಾದವನ್ನು ವಿರೋಧಿಸಿ , ಯಾರ ಒತ್ತಡ , ಬಲ ಪ್ರಯೋಗಗಳಿಲ್ಲದೆ ನಾವು ಬುರ್ಖಾ ಧರಿಸುತ್ತಿದ್ದೇವೆ. ಆರೋಪಗಳೆಲ್ಲ ಸುಳ್ಳೆಂದು ಒಂದು ಸ್ತ್ರೀ ಸಮುದಾಯ ಪ್ರತಿಭಟಿಸಿದಾಗ ಅಲ್ಲೂ ಕೂಡ ಧರ್ಮದ ,ಅಥವಾ ಇಸ್ಲಾಂನ ಕಾಳಜಿ ಬಹಳ ವ್ಯಕ್ತವಾಗಿ ಇತರರಲ್ಲಿ ಅಭಿವ್ಯಕ್ತಿಗೊಂಡಿತ್ತು.
ಧರ್ಮ ನಿಯಮಗಳನ್ನು ಸ್ಥಾಪಿಸಿದ್ದು ಅದರ ನೈಜ ಅನುಯಾಯಿಗಳಿಗೇ ಹೊರತು ನಾಮಧಾರಿ ಧರ್ಮ ರಕ್ಷಕರಿಗಲ್ಲ ಅನ್ನೋದನ್ನ ನಾವು ಮೊದಲು ಮನದಟ್ಟು ಮಾಡಬೇಕಿದೆ.

ಒಂದೆಡೆ ತಡೆಯಲಾಗಂತಹ ಸುಡು ಬಿಸಿಲು. ಈ ವೇಳೆಯಲ್ಲಿನ ವ್ರತಾಚರಣೆಗೂ , ಇತರ ಕಾಲಮಾನದಲ್ಲಿ ಕೈಗೊಳ್ಳುವ ವ್ರತಕ್ಕೂ ಪ್ರತಿಫಲದಲ್ಲಿ ತುಂಬಾ ವ್ಯತ್ಯಾಸವಿರಬಹುದು ಎಂಬುವುದು ನನ್ನ ಅನಿಸಿಕೆ. ಕಾರಣ ಈಗೀಗ ವ್ರತಾಚರಣೆಯು ಒಂದು ಟಾಸ್ಕ್ ನಂತಾಗಿದೆ‌. ರಂಝಾನ್ ತಿಂಗಳ ಮುಂಚೆಯೇ ಬಿಸಿಲನ್ನು ತಡೆಯಲಾಗದೆ ಲೀಟರ್ಗಟ್ಟಲೆ ನೀರು, ಸಿಹಿ ಪಾನೀಯಗಳನ್ನು ಸೇವಿಸಿ ಬಾಯಾರಿಕೆ ನೀಗಿಸಲು ಹರಸಾಹಸ ಪಡುತ್ತಿದ್ದೆವು. ಅದಕ್ಕೆಂದೇ ದಾರಿ ಬದಿಗಳಲ್ಲಿ ಕಬ್ಬು, ಕೋಲ್ಡ್ ಡ್ರಿಂಕ್ಸ್, ಜ್ಯೂಸ್ ಅಂಗಡಿಗಳು ತಲೆಯೆತ್ತಿವೆ. ಈ ನಿಟ್ಟಿನಲ್ಲಿ ದಿನದ ಹದಿಮೂರು , ಹದಿನಾಲ್ಕು ಗಂಟೆಗಳ ಕಾಲ ಸೃಷ್ಟಿಕರ್ತನಾದ ಅಲ್ಲಾಹನಿಗೆ ಅನ್ನ ಪಾನೀಯಗಳನ್ನು ತೊರೆಯುವುದು ಅಲ್ಪ ತ್ರಾಸದಾಯಕವಾದದ್ದು. ಹೀಗಾಗಿ ಇತರ ವ್ರತಗಳಿಗಿಂತಲೂ ಈ ಬಾರಿಯ ರಂಝಾನ್ ಹೆಚ್ಚಿನ ಪ್ರತಿಫಲಾರ್ಹ ವ್ರತಗಳೆಂದರೆ ತಪ್ಪಾಗದು‌.

ಮತ್ತೊಂದು ವಿಚಾರ ಇಲ್ಲಿ ನೆನಪಿಸಬೇಕಾಗುತ್ತದೆ. ವ್ರತ ತೊರೆಯುವ ಅಥವಾ ಇಫ್ತಾರ್ ನ ವಿಷಯದಲ್ಲಿ ನಮ್ಮ ಸಮುದಾಯವು ತೋರುವಂತಹ ಕಾಳಜಿ ಎಲ್ಲೂ ಕಂಡಿಲ್ಲ. ಪ್ರತಿಯೊಂದು ಮನೆ ಮನೆಗಳಲ್ಲೂ ಇಫ್ತಾರ್ ನಡೆಯುವಾಗ ಕುಟುಂಬ ಮತ್ತು ನೆರೆಕರೆಯವರನ್ನು ಕರೆಯೋದ್ರಿಂದ ಹಿಡಿದು , ಆ ವೇಳೆ ದಾರಿಯಲ್ಲಿ ಹೋಗುವವರಿಗೆ ದಾರಿ ಬದಿಯ ಮಸೀದಿಗಳಲ್ಲಿ, ಇಫ್ತಾರ್ ಟೆಂಟ್ ಗಳನ್ನು ಸ್ಥಾಪಿಸಿ ಪ್ರಯಾಣಿಕರಿಗೆ ವ್ರತ ತೊರೆಯುವ ಸೌಕರ್ಯಗಳನ್ನು ಒದಗಿಸುವುದು, ಹೀಗೇ ವಿಶ್ವದ ನಾನಾಕಡೆಗಳಲ್ಲಿ ನಾನಾ ರೀತಿಯ ಇಫ್ತಾರ್ ಸಂಗಮಗಳು ನಡೆಯುತ್ತಿರುವುದು ನಮ್ಮ ಸಹೋದರತೆಯ ಸಾಮೀಪ್ಯವನ್ನು ಎತ್ತಿ ತೋರಿಸುತ್ತದೆ. ಕಳೆದೆರಡು ದಿನಗಳ ಹಿ‌ದೆ ಪತ್ರಿಕೆಯೊಂದರ ಪುಟ ತಿರುವಿದಾಗ ಕಂಡ ವಾರ್ತೆಯೊಂದನ್ನು ಓದಿ ಅಚ್ಚರಿಯೆನಿಸಿತ್ತು. ಸಿಖ್ ಸಮುದಾಯದ ನೇತಾರರು ಸೇರಿ ನಡೆಸುವ ಇಫ್ತಾರ್ ಸಂಗಮದ ಫೋಟೋದೊಂದಿಗೆ ವರದಿಯಾಗಿತ್ತು.

ನಮ್ಮ ಕರಾವಳಿಯ ಉಡುಪಿ ಮಠದಲ್ಲೂ ಇಫ್ತಾರ್ ಸಂಗಮಗಳು ನಡೆಯುವುದಿದೆ. ಕೇರಳದ ಮಲಪ್ಪುರಂ ಜಿಲ್ಲೆಯ ಹಲವು ಗ್ರಾಮಗಳಲ್ಲಿ ಮುಸ್ಲಿಮರಂತೆಯೇ ಹಿಂದೂಗಳೂ ವೃತಾಚರಣೆ ಮಾಡುತ್ತಾರೆ. ಒಂದೆರದೂ ವ್ರತವಲ್ಲ .ಪೂರ್ತಿ ತಿಂಗಳು..! ಅಲ್ಲದೇ ಅವರ ಹೋಟೆಲ್‌ಗಳು ಕೂಡಾ ಒಂದು ತಿಂಗಳ ಕಾಲ ಮುಚ್ಚಿಡುತ್ತಾರೆ‌. ಇಂತಹ ಮತ ಸೌಹಾರ್ದತೆಯು ಇಂದಿಗೂ ಜೀವಂತಿಕೆ ಪಡೆಯುತ್ತಲಿದೆ ಎನ್ನುವಾಗ ಅಚ್ಚರಿಯೆನಿಸುವುದಿದೆ. ವ್ರತ ಬರೀ ರಂಝಾನ್ ಎಂಬ ದೃಷ್ಟಿಯಿಂದ ನೋಡುವುದು ಮಾತ್ರವಲ್ಲ ಅದರ ಆರೋಗ್ಯಕರ ಅಂಶಗಳನ್ನೂ ತಿಳಿದರೆ ವೈದ್ಯಕೀಯ ಅಥವಾ ವೈಜ್ಞಾನಿಕ ದೃಷ್ಟಿಕೋನದಿಂದ ಹೇಳುವುದಾದರೆ ಶಾರೀರಿಕ ಧೃಡತೆಗೂ ಪರಿಣಾಮಕಾರಿಯಾಗಿದೆ ಅನ್ನೋದನ್ನ ತಿಳಿದ ಹಲವು ಇತರ ಧರ್ಮೀಯರೂ ಉಪವಾಸ ಆಚರಿಸುವುದಿದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಅಳಿವಿನಂಚಿನಲ್ಲಿರುವ ಸಾಂಪ್ರದಾಯಿಕ ಕೃಷಿ ಪರಂಪರೆ-* ನಿಝಾಮ್ ಅನ್ಸಾರಿ

ಭಾರತವು ಕೃಷಿ ಅವಲಂಬಿತ ಹಳ್ಳಿಗಳನ್ನೊಳಗೊಂಡ ಸಮೃದ್ಧ ದೇಶ. ದೇಶದ ಬೆಳವಣಿಗೆಯಲ್ಲಿ ವ್ಯವಸಾಯದ ಪಾತ್ರ ಬಹುಮುಖ್ಯವಾದುದು. ತಂತ್ರಜ್ಞಾನವು ದೇಶಕ್ಕೆ ಯಾವ ರೀತಿಯಲ್ಲಿ ಕೊಡುಗೆಗಳನ್ನು ನೀಡುತ್ತವೆಯೋ ಅದೇ ರೀತಿಯಲ್ಲಿ ಕೃಷಿಯ ಕೊಡುಗೆಯೂ ಕೂಡಾ ಅಪಾರವಾದುದು. ಆದರೆ ಇತ್ತೀಚಿನ ದಿನಗಳಲ್ಲಿ ಹಳ್ಳಿಗಳಲ್ಲಿ ವ್ಯವಸಾಯವು ಇಳಿಮುಖವಾಗುತ್ತಿದೆ. ಕೇವಲ ಬೆರಳೆಣಿಕೆಯಷ್ಟು ಮಂದಿ ಮಾತ್ರ ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವವರನ್ನು ಕಾಣಬಹುದಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿನ ಜನರು ವಿದ್ಯಾವಂತರಾಗುತ್ತಲೇ ತಮ್ಮ ಪಾರಂಪರಿಕ ಕುಲ ಕಸುಬನ್ನು ನಿರ್ಲಕ್ಷಿಸಿ ನಗರಗಳತ್ತ ವಲಸೆ ಹೋಗುತ್ತಿದ್ದಾರೆ.ಕೈ ಕೆಸರು ಮಾಡಿಕೊಂಡು ದುಡಿಯುವವರ ಕೊರತೆ ಅಗಾಧವಾಗಿ ಎದ್ದು ಕಾಣುತ್ತಿದೆ. ಇಂದಿನ ನವ ತಲೆಮಾರು ಹಳ್ಳಿಗಳು ಕೇವಲ ವೃದ್ಧರಿಗೆ ಮಾತ್ರ ಯೋಗ್ಯವಾದುದು ಎಂದು ತಿಳಿದಂತಿದೆ. `ನೇಗಿಲಾ ಹಿಡಿದಾ ಹೊಲದಲಿ ಹಾಡುತ ಉಳುವಾ ಯೋಗಿಯ ನೋಡಲ್ಲಿ’ ಎಂದು ಕುವೆಂಪುರಂತಹ ಖ್ಯಾತ ಕವಿಗಳಿಂದ ಕೊಂಡಾಡಲ್ಪಟ್ಟ ಕೃಷಿ ಚಟುವಟಿಕೆಗಳಿಂದು ಕಣ್ಮರೆಯಾಗಿದೆ. ನೇಗಿಲಿನಂತಹ ಕೃಷಿ ಸಲಕರಣೆಗಳು ಇಂದು ಮ್ಯೂಸಿಯಂ ಸೇರಿಬಿಟ್ಟಿವೆ. ಇದರೊಂದಿಗೆ ಅತ್ಯಂತ ಸುಂದರವಾದ ಕೃಷಿ ಪರಂಪರೆ ಮೂಲೆಗುಂಪಾಗುತ್ತಿದೆ. ಹಳೆಯ ಕಾಲದ ಸಾಂಪ್ರದಾಯಿಕ ಬೇಸಾಯಕ್ಕೆ ಉಪಯೋಗವಾಗುತ್ತಿದ್ದ ಪರಿಕರಗಳ ಸ್ಥಾನವನ್ನು ಟ್ರಾಕ್ಟರ್,ಟಿಲ್ಲರ್ ಗಳಂತಹ ಯಂತ್ರಗಳು ಆಕ್ರಮಿಸಿಕೊಂಡಿವೆ. ಭತ್ತ ನಾಟಿ ಮಾಡುವ ಮಹಿಳೆಯರಿಂದ ಕೇಳಿ ಬರು...

ಅರಬಿ ಭಾಷೆ : ಇತಿಹಾಸ ಮತ್ತು ವರ್ತಮಾನ

✒ ನಿಝಾಮ್ ಅನ್ಸಾರಿ ಭಾಷೆ ಮನುಷ್ಯನ ಸವಿಶೇಷತೆಗಳಲ್ಲೊಂದು. ಚಿಂತನೆಗಳು ಮತ್ತು ಅಭಿರುಚಿಗಳ ಆಶಯವನ್ನು ಅಭಿವ್ಯಕ್ತಿಗೊಳಿಸುವ ಅಥವಾ ಹೊರ ಹಾಕುವ ಶಬ್ದಗಳ ಒಂದು ಸಮೂಹವಾಗಿದೆ ಇದು. ಪ್ರಪಂಚದಲ್ಲಿ ಇಂದು ಹಲವು ಅಧಿಕೃತವಾಗಿರುವ ಭಾಷೆಗಳು ಅಸ್ತಿತ್ವದಲ್ಲಿವೆ.ಅದರಲ್ಲೂ ಪ್ರಾದೇಶಿಕ ಭಾಷೆಗಳು ಬೇರೇನೆ. ಆದರೆ ಈ ಎಲ್ಲಾ ಭಾಷೆಗಳ ಪೈಕಿ ರಾಜನಂತೆ ಇರೋದು ಅರಬಿ ಭಾಷೆ ಮಾತ್ರ . ಒಂದು ಕಾಲದಲ್ಲಿ ಇಡೀ ಜಗತ್ತನ್ನೇ ನಿಯಂತ್ರಿಸುವ ತಾಕತ್ತಿದ್ದ ಭಾಷೆಯಾಗಿತ್ತು ಅರಬಿ. ಯಾವ ರೀತಿಯಲ್ಲಿ ಈಗ ಆಂಗ್ಲ ಭಾಷೆಗೆ ಪ್ರಾಧಾನ್ಯತೆ, ಜಾಗತಿಕ ಅಂಗೀಕಾರ ಇದೆಯೋ ಅದೇ ರೀತಿಯಲ್ಲಿ ಅಂದು ಅರಬಿ ಭಾಷೆ ಸ್ಥಾನ ಪಡೆದಿತ್ತು. ಬಲದಿಂದ ಎಡಕ್ಕೆ ಇರುವ ಕೆಲವೊಂದು ಭಾಷೆಗಳಲ್ಲಿ ಅರಬೀ ಕೂಡಾ ಒಂದು. ಸೈಮಟಿಕ್ ಭಾಷೆಗಳಲ್ಲೊಂದಾದ ಅರಬಿ ಜಗತ್ತಿನ ಅತ್ಯಂತ ಪುರಾತನ ಭಾಷೆಗಳ ಪೈಕಿ ಒಂದು ಕೂಡಾ . ಐಕ್ಯ ರಾಷ್ಟ್ರ ಸಂಘದ ಅಂಗೀಕೃತ ಭಾಷೆಯಾದ ಅರಬಿ, 26 ದೇಶಗಳ ಅಧಿಕೃತ ಭಾಷೆಯಾಗಿದೆ‌. ಆಫ್ರಿಕನ್ ಯೂನಿಯನ್ ಆರ್ಗನೈಸೇಷನ್ ಇಸ್ಲಾಮಿಕ್ ಕಾನ್ಫೆರನ್ಸ್ ನಂತಹ ಹಲವು ಅಂತಾರಾಷ್ಟ್ರೀಯ ಸಂಸ್ಥೆಗಳು ಅರಬಿ ಭಾಷೆಯನ್ನು ಅಧಿಕೃತ ಭಾಷೆಯಾಗಿ ಅಂಗೀಕರಿಸಿದೆ. ಅರಬಿ ಭಾಷೆ: ಹುಟ್ಟು ಮತ್ತು ಬೆಳವಣಿಗೆ ಬಿ.ಸಿ 1900 ರಲ್ಲಿ ಜೀವಿಸಿದ್ದ 'ಯಅರೂಬ್ ಇಬ್ನ್ ಖಹ್ತಾನ್' ಎಂಬವರನ್ನು ಅರಬಿ ಭಾಷೆಯ ಪಿತಾಮಹ ಎಂದು ಕರೆಯಲಾಗುತ್ತದೆ. ಇವರ ನಾಮಕ್ಕೆ ಹೊಂದಿಕೊಂಡು 'ಅರಬಿ' ಎಂಬ ಹೆಸರು...

ಕೋವಿಡ್ ಕಾಲದ ಓದು: ಚಂದ್ರನ ಚೂರು

'ಚಂದ್ರನ ಚೂರು' ಕೃತಿಯ ಹೆಸರು ಕೇಳಿದಾಗ ನಿಜವಾಗಿಯೂ ಅದೊಂದು ಕಾದಂಬರಿಯಾಗಿರಬಹುದು ಎಂದು ಭಾವಿಸಿದ್ದೆ. ಆದರೆ, ಪುಸ್ತಕ ಕೈಗೆ ತಲುಪಿದಾಗಲೇ ಗೊತ್ತಾಗಿದ್ದು, ಅದೊಂದು ಚಂದ್ರಲೋಕಕ್ಕೆ ಕೊಂಡೊಯ್ಯುವ ಅದ್ಭುತ ಕೃತಿ ಅಂತ. ತಂದೆ ಕುವೆಂಪು ಅವರ ಸಾಹಿತ್ಯದ ಹಾದಿಯಲ್ಲೇ ನಡೆದರೂ, ತೇಜಸ್ವಿಯವರ ಸಾಹಿತ್ಯವು ನಿಸರ್ಗ ವಿಸ್ಮಯ, ಭೂಗೋಳ, ಜೀವಶಾಸ್ತ್ರ, ಭತಶಾಸ್ತ್ರ, ಇತಿಹಾಸ ಹೀಗೇ ಎಲ್ಲಾ ಶಾಸ್ತ್ರಗಳ ಮಿಶ್ರಣ ರಸಾಯನ ಎಂದೇ ಹೇಳಬಹುದು. ಚಂದ್ರನ ಚೂರು ಚಂದ್ರ ಲೋಕದ ವಿಸ್ಮಯ ದೃಶ್ಯಗಳನ್ನು ಕಟ್ಟಿಕೊಡುವ ಚೊಚ್ಚಲ ಕೃತಿ. ಬಾಹ್ಯಾಕಾಶ, ಖಗೋಳ ಶಾಸ್ತ್ರ ವಿಷಯದಲ್ಲಿ ಆಸಕ್ತಿ ಇಲ್ಲದ ನನ್ನಂತವರನ್ನೂ ಇದು ಸರಾಗವಾಗಿ ಓದಿಸಿಕೊಂಡು ಹೋಗುವಂತೆ ಮಾಡುತ್ತದೆ, ಅದಕ್ಕೆ ಕಾರಣ, ತೇಜಸ್ವಿ ಅವರ ಬರವಣಿಗೆ ಹಾಗೂ ವಿವರಣೆಯ ಶೈಲಿ.. ಜಗತ್ತಿನಲ್ಲಿ ಮನುಷ್ಯನು ಚಂದ್ರನಲ್ಲಿಗೆ ಕಾಲಿಡುವುದಕ್ಕೂ ಮುನ್ನ, ಯಾವುದೆಲ್ಲಾ ರೀತಿಯ ಪರಿಶ್ರಮಗಳು ನಡೆದಿದ್ದವು ಹಾಗೂ ಭೂಮಂಡಲ ಮತ್ತು ಚಂದ್ರನ ಕುರಿತಾಘಿ ಯಾವುದೆಲ್ಲಾ ಆಯಾಮಗಳಲ್ಲಿ ಅಧ್ಯಯನಗಳಾಗಿದ್ದುವು ಎಂಬುದರ ಸಂಪೂರ್ಣ ವಿಷಯಗಳಿವೆ. ಚಂದ್ರನಲ್ಲಿ ತಲುಪಿದ ಮನುಷ್ಯನಿಗೆ ಆದ ಅನುಭವಗಳೇನು? ನೀಲ್ ಆಮ್Fಸ್ಟ್ರಾಂಗ್ ತಂಡದ ಚಂದ್ರಯಾನದ ರಸವತ್ತಾದ ಅನುಭವಗಳು, ಚಂದಿರನ ಮಣ್ಣಲ್ಲಿ ಅಮೇರಿಕದ ಫ್ಲಾಗ್ ಮತ್ತು ಬೋಡ್F ಸ್ಥಾಪಿಸಿ ಬಂದ ಆ ಧೀರ ತಂಡದ ಬೆರಗಾಗಿಸುವ ಕ್ಷಣ ಕ್ಷಣದ ವರದಿಗಳು ಈ ಕೃತಿಯ ಲೇಖನಗಳಲ್ಲಿ ಅಡಗಿದೆ. ಒಟ್ಟಿನಲ...