ವಿಷಯಕ್ಕೆ ಹೋಗಿ

ದಾರುಲ್ ಹುದಾ: ಕೀರ್ತಿಯ ಕಿರೀಟಕ್ಕೆ ಮತ್ತೊಂದು ಗರಿ

'ದಾರುಲ್ ಹುದಾ' ಜೊತೆ ಒಡಂಬಡಿಕೆಗೆ ಸಹಿ ಹಾಕಿದ ಮೊರೊಕ್ಕೊ 'ಅಲ್ ಖರವಿಯ್ಯೀನ್' ವಿಶ್ವವಿದ್ಯಾನಿಲಯ..!



ಜಗತ್ತಿನ ಅತಿ ಪುರಾತ‌ನ ಇಸ್ಲಾಮಿಕ್ ವಿದ್ಯಾಲಯವಾದ ಮೊರೋಕ್ಕೊ ದಲ್ಲಿರುವ 'ಅಲ್ ಖರವಿಯ್ಯೀನ್' ವಿಶ್ವವಿದ್ಯಾಲಯವು, ಚೆಮ್ಮಾಡ್ ದಾರುಲ್ ಹುದಾ ಇಸ್ಲಾಮಿಕ್ ಅಕಾಡೆಮಿಯೊಂದಿಗೆ ಸಹಕಾರ ಒಡಂಬಡಿಕೆಯ ಪತ್ರಕ್ಕೆ ಸಹಿ ಹಾಕಿತು.

ಒಡಂಬಡಿಕೆಗೆ ಸಹಿ ಹಾಕುವ ಕಾರ್ಯಕ್ರಮವು 'ಅಲ್ ಖರವಿಯ್ಯೀನ್ ವಿಶ್ವವಿದ್ಯಾಲಯ'ದ ಉನ್ನತ ಮತ ಶಿಕ್ಷಣ ವಿಭಾಗ 'ದಾರುಲ್ ಹದೀಸ್ ಅಲ್ ಹಸನಿಯ್ಯ'ದ ಕ್ಯಾಂಪಸ್ನಲ್ಲಿ ಜರುಗಿತು.

ಯುನೆಸ್ಕೊ ಮತ್ತು ಗಿನ್ನೆಸ್ ವಿಶ್ವ ದಾಖಲೆ ಪಟ್ಟಿಯ ಪ್ರಕಾರ ಜಗತ್ತಿನ ಅತ್ಯಂತ ಪುರಾತನವಾದ ಧಾರ್ಮಿಕ ಉನ್ನತ ಶಿಕ್ಷಣ ಕೇಂದ್ರವಾಗಿದೆ ಅಲ್ ಖರವಿಯ್ಯೀನ್ ವಿಶ್ವವಿದ್ಯಾಲಯ. ಅರಬ್ ವಂಶಜರಾಗಿದ್ದ ಫಾತಿಮ ಅಲ್ ಫಿಹ್ರಿ , ಕ್ರಿ.ಶ 859 ರಲ್ಲಿ ಸ್ಥಾಪಿಸಿದ ಪ್ರಾಥಮಿಕ ಮತ ಶಿಕ್ಷಣ ಶಾಲೆಯಾಗಿತ್ತು ಅದು. ಆನಂತರ ಇಸ್ಲಾಮಿನ ಇತಿಹಾಸದಲ್ಲೇ ಆಧ್ಯಾತ್ಮಿಕ ಶಿಕ್ಷಣ ರಂಗದಲ್ಲಿ ಜಗತ್ಪ್ರಸಿದ್ಧಿ ಪಡೆದ ಪ್ರಧಾನ ಕೇಂದ್ರವಾಗಿ ಅಲ್ ಖರವಿಯ್ಯೀನ್ ರೂಪುಗೊಂಡಿತು. 1963 ರಲ್ಲಿ ಇದು ವಿಶ್ವವಿದ್ಯಾಲಯವೆನಿಸಿಕೊಂಡಿತು.

ಜಾಗತಿಕ ಮಟ್ಟದಲ್ಲಿನ ವಿಶ್ವವಿದ್ಯಾಲಯವೊಂದು ಇದೇ ಪ್ರಥಮ ಬಾರಿಗೆ ಭಾರತೀಯ ವಿಶ್ವವಿದ್ಯಾಲಯದೊಂದಿಗೆ ಕೈ ಜೋಡಿಸುತ್ತಿದೆ.

ಅಕಾಡೆಮಿಕ್ ಒಡಂಬಡಿಕೆಯ ಪ್ರಕಾರ ವಿದ್ಯಾರ್ಥಿ ಹಸ್ತಾಂತರ, ಸಂಶೋಧನೆಯಂತಹ ವಿವಿಧ ಅಕಾಡೆಮಿಕ್ ಯೋಜನೆಗಳಲ್ಲಿ ಎರಡೂ ವಿದ್ಯಾಲಯಗಳು ಪರಸ್ಪರ ಸಹಕಾರ ಮನೋಭಾವದಿಂದ ಕಾರ್ಯನಿರ್ವಹಿಸಲಿದೆ. ವಿಶ್ವವಿದ್ಯಾಲಯ ಉನ್ನತ ವಿಭಾಗವಾದ 'ದಾರುಲ್ ಹದೀಸ್ ಅಲ್ ಹಸನಿಯ್ಯ'ದೊಂದಿಗಿನ ಪ್ರತ್ಯೇಕವಾದ ಸಹಕಾರವೂ ಕೂಡಾ ಎಂ.ಒ.ಯು ನ ಭಾಗವಾಗಿದೆ.

ಮೊರೋಕ್ಕೊ ಮಾಜಿ ದೊರೆಯಾಗಿದ್ದ ಹಸನ್ (ದ್ವಿತೀಯ) 1964 ರಲ್ಲಿ ಸ್ಥಾಪಿಸಿದ ದಾರುಲ್ ಹದೀಸ್ ಇದೀಗ ಅಲ್ ಖರವಿಯ್ಯೀನ್ ವಿಶ್ವವಿದ್ಯಾಲಯದ ಅಧೀನದಲ್ಲಿರುವ ಮುಕ್ತವಾದ ಕ್ಯಾಂಪಸ್ಸಾಗಿದೆ.
ಭಾರತದ ಇಸ್ಲಾಮಿಕ್‌ ವಿಶ್ವವಿದ್ಯಾನಿಲಯಗಳ ಅಂತರರಾಷ್ಟ್ರೀಯ ಒಕ್ಕೂಟಗಳಾದ ಫೆಡೆರೇಶನ್ ಆಫ್ ದಿ ಯುನಿವರ್ಸಿಟೀಸ್ ಆಫ್ ದಿ ಇಸ್ಲಾಮಿಕ್ ವರ್ಲ್ಡ್, ಲೀಗ್ ಆಫ್ ಇಸ್ಲಾಮಿಕ್ ಯುನಿವರ್ಸಿಟೀಸ್ ಮುಂತಾದುವುಗಳಿಂದ ಈ ಹಿಂದೆಯೇ ಅಂಗೀಕಾರ ಪಡೆದಿರುವ ವಿದ್ಯಾಲಯವಾಗಿದೆ ದಾರುಲ್ ಹುದಾ.

ಇಂಟರ್ ನ್ಯಾಷನಲ್ ಇಸ್ಲಾಮಿಕ್ ಯುನಿವರ್ಸಿಟಿ ಮಲೇಷಿಯಾ, ಅಲ್ ಅಝ್ಹರ್ ಈಜಿಪ್ಟ್, ಸೈತೂನ ಟುನೀಷ್ಯಾ, ಸುಲ್ತಾನ್ ಶರೀಫ್ ಅಲಿ ಇಸ್ಲಾಮಿಕ್ ಯುನಿವರ್ಸಿಟಿ ಬ್ರೂಣ, ಅಂಗಾರ ಯುನಿವರ್ಸಿಟಿ ತುರ್ಕಿ ಹೀಗೇ ಈಗಾಗಲೇ ಒಂದು ಡಜನಿಗಿಂತಲೂ ಹೆಚ್ಚು ಅಂತಾರಾಷ್ಟ್ರೀಯ ವಿದ್ಯಾಲಯಗಳೊಂದಿಗೆ ದಾರುಲ್ ಹುದಾ ಪ್ರಸ್ತುತ ಸಹಕಾರದ ಒಡಂಬಡಿಕೆ ಮಾಡಿಕೊಂಡಿದೆ.

ಎಂ.ಒ.ಯು ಒಡಂಬಡಿಕೆಯ ಕಾರ್ಯಕ್ರಮದಲ್ಲಿ ಅಲ್ ಖರವಿಯ್ಯೀನ್ ವಿಶ್ವವಿದ್ಯಾಲಯ ಮತ್ತು ದಾರುಲ್ ಹದೀಸ್ ಅಲ್ ಹಸನಿಯ್ಯ ಇದರ ಪ್ರತಿನಿಧಿಗಳಾಗಿ ರೆಕ್ಟರ್ ಪ್ರೊ. ಡಾ. ಅಹ್ಮದ್ ಖಂಲೀಶಿ, ಡೆಪ್ಯುಟಿ ರೆಕ್ಟರ್ ಪ್ರೊ.ಡಾ .ಅಬ್ದುಲ್ ಹಮೀದ್ ಅಶ್ಶಾಖ್ ಮುಂತಾದವರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

Nizam Ansari ಹೇಳಿದ್ದಾರೆ…
Thank you.... All
Swalih atrಹೇಳಿದ್ದಾರೆ…
Masha allah

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ರಂಝಾನ್ ನೀಡುವ ಒಳಿತಿನ ಸಂದೇಶ...

-ನಿಝಾಮ್ ಅನ್ಸಾರಿ ಮತ್ತೆ ರಂಝಾನ್ ತಿಂಗಳ ಆಗಮನವಾಗಿದೆ. ಪ್ರತಿ ವರ್ಷವೂ ರಂಝಾನ್ ಬಗ್ಗೆ ಬರೆಯುವಾಗ ಅದರ ಶ್ರೇಷ್ಟತೆ, ವ್ರತಾನುಷ್ಟಾನದ ಪ್ರಾಧಾನ್ಯತೆಯನ್ನೇ ಹೆಚ್ಚಿನವರೂ ಬರೆಯುತ್ತಾರೆ. ಅದನ್ನೇ ಮಸೀದಿಗಳಲ್ಲೂ ಹೇಳುವುದಿದೆ. ಒಳ್ಳೆಯದೇ. ಕಾರಣ ಆಧುನಿಕ ಜನರು ಧರ್ಮದ ಪ್ರತಿಯೊಂದು ವಿಷಯಗಳಲ್ಲೂ ಸಡಿಲಿಕೆ ಬಯಸುತ್ತಾರೆ. ಅಂದರೆ ಅವರವರ ಜೀವನಕ್ರಮಗಳಿಗನುಸಾರವಾಗಿ ಧರ್ಮದ ನಿಯಮಗಳನ್ನು ಗಾಳಿಗೆ ತೂರುವಂತಹ ಕಾರ್ಯಗಳು ಎಲ್ಲಾ ಕಡೆ ನಡೆಯುತ್ತಲಿದೆ. ಹಾಗಿರುವಾಗ ರಂಝಾನ್ ವ್ರತಾಚರಣೆಯ ಮಹತ್ವವನ್ನು ಪ್ರತಿ ಬಾರಿಯೂ ಪ್ರಭಾಷಣ ವೇದಿಕೆಗಳಲ್ಲಿ, ಮಸೀದಿಗಳಲ್ಲಿ ಜನ ಸಾಮಾನ್ಯರಿಗೆ ನೆನಪಿಸುತ್ತಲಿರುವುದು ಸ್ವಾಗತಾರ್ಹವಾದುದು. ಮತ್ತು ಪ್ರಯೋಜನಕಾರಿಯೂ ಕೂಡಾ. ಯಾಕೆ ಈ ರೀತಿ ಬರೆದೆ ಅಂತ ಕೇಳಿದರೆ, ಇತ್ತೀಚೆಗೆ ವಾಟ್ಸಾಪ್ ನೊಳಗೆ ಕಣ್ಣಾಡಿಸಿದಾಗ ಕಂಡ ಕೆಲವೊಂದು ಸಂದೇಶಗಳು ಧರ್ಮದ ಬಗ್ಗೆ ಕೀಳರಿಮೆಯ ಭಾವ ತೋರುವವರಿಗೆ ತಕ್ಕ ಉತ್ತರ ನೀಡುವಂತಿತ್ತು. ಬಡ ಕುಟುಂಬಕ್ಕೆ ಮನೆ ಕಟ್ಟುವ ಸಹಾಯಾರ್ಥ ಕಲೆಕ್ಷನ್, ರಂಝಾನ್ ನಂತರದ ಬಡ ಹೆಣ್ಮಕ್ಕಳ ಮದುವೆಗಾಗಿ, ಮುಅಲ್ಲಿಂಗಳಿಗಾಗಿ ಹೀಗೇ ಹಲವು ರೀತಿಯಲ್ಲಿ ಯುವ-ವಯಸ್ಕರು ಸೇರಿ ಸಮುದಾಯದೊಂದಿಗಿನ ಸಾಮಾಜಿಕ ಕಾಳಜಿಗಾಗಿ ರಂಝಾನ್ ಅನ್ನು ಉಪಯೋಗಿಸುತ್ತಿದ್ದಾರೆನ್ನುವಾಗ ಧರ್ಮದ ಮನದಲ್ಲಿ ಅಭಿಮಾನ ಮೂಡುತ್ತಿದೆ. ಬುರ್ಖಾದ ವಿಚಾರದಲ್ಲಿ ಬಲತ್ಕಾರ ಮಾಡಲಾಗುತ್ತದೆ ಎಂದು ಆರೋಪಿಸುತ್ತಿರುವಾಗ, ಆ ವಾದವನ್ನು ವಿರ...

ನಾನುಗೌರಿ ವೆಬ್ ನಲ್ಲಿ ಪ್ರಕಟಗೊಂಡ ಬರಹಗಳು..ಓದಲು ಈ ಲಿಂಕ್ ಉಪಯೋಗಿಸಿ

-ನಿಝಾಮ್ ಅನ್ಸಾರಿ ಭಾರತದ ಉನ್ನತ ಶಿಕ್ಷಣದ ಮಹಾನ್‌ ಆಶಯಕ್ಕೆ ಎಳ್ಳುನೀರು ಬಿಡುತ್ತಿರುವ ಪ್ರಭುತ್ವ… http://naanugauri.com/indian-higher-education-shrinking-down- **************************************************************** ಲಾಕ್‌ಡೌನ್‌: ತುತ್ತು ಅನ್ನಕ್ಕಾಗಿ ಗುಳೆ ಹೊರಟವರ ಕತೆ http://naanugauri.com/lockdown-story-of-labour/ via @Naanu gauri ***************************************************************** ಪೌರತ್ವ ವಸೂಲಿ – ನಾಝಿ ಜರ್ಮನಿಯಿಂದ ಕಲಿಯಬೇಕಾದುದು… http://naanugauri.com/citizen-amendment-act-same-thing-happen-in-german-80-years-back- ****************************************************************** ಪ್ಲೇಗ್ ಹಾಗೂ ಕೋವಿಡ್ 19 ನಡುವೆ ಕೆಲವು ಹೋಲಿಕೆಗಳು http://naanugauri.com/covid-19-and-bubonic-plague-this-lead-to-renaissance/ via @Naanu gauri

ಅಳಿವಿನಂಚಿನಲ್ಲಿರುವ ಸಾಂಪ್ರದಾಯಿಕ ಕೃಷಿ ಪರಂಪರೆ-* ನಿಝಾಮ್ ಅನ್ಸಾರಿ

ಭಾರತವು ಕೃಷಿ ಅವಲಂಬಿತ ಹಳ್ಳಿಗಳನ್ನೊಳಗೊಂಡ ಸಮೃದ್ಧ ದೇಶ. ದೇಶದ ಬೆಳವಣಿಗೆಯಲ್ಲಿ ವ್ಯವಸಾಯದ ಪಾತ್ರ ಬಹುಮುಖ್ಯವಾದುದು. ತಂತ್ರಜ್ಞಾನವು ದೇಶಕ್ಕೆ ಯಾವ ರೀತಿಯಲ್ಲಿ ಕೊಡುಗೆಗಳನ್ನು ನೀಡುತ್ತವೆಯೋ ಅದೇ ರೀತಿಯಲ್ಲಿ ಕೃಷಿಯ ಕೊಡುಗೆಯೂ ಕೂಡಾ ಅಪಾರವಾದುದು. ಆದರೆ ಇತ್ತೀಚಿನ ದಿನಗಳಲ್ಲಿ ಹಳ್ಳಿಗಳಲ್ಲಿ ವ್ಯವಸಾಯವು ಇಳಿಮುಖವಾಗುತ್ತಿದೆ. ಕೇವಲ ಬೆರಳೆಣಿಕೆಯಷ್ಟು ಮಂದಿ ಮಾತ್ರ ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವವರನ್ನು ಕಾಣಬಹುದಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿನ ಜನರು ವಿದ್ಯಾವಂತರಾಗುತ್ತಲೇ ತಮ್ಮ ಪಾರಂಪರಿಕ ಕುಲ ಕಸುಬನ್ನು ನಿರ್ಲಕ್ಷಿಸಿ ನಗರಗಳತ್ತ ವಲಸೆ ಹೋಗುತ್ತಿದ್ದಾರೆ.ಕೈ ಕೆಸರು ಮಾಡಿಕೊಂಡು ದುಡಿಯುವವರ ಕೊರತೆ ಅಗಾಧವಾಗಿ ಎದ್ದು ಕಾಣುತ್ತಿದೆ. ಇಂದಿನ ನವ ತಲೆಮಾರು ಹಳ್ಳಿಗಳು ಕೇವಲ ವೃದ್ಧರಿಗೆ ಮಾತ್ರ ಯೋಗ್ಯವಾದುದು ಎಂದು ತಿಳಿದಂತಿದೆ. `ನೇಗಿಲಾ ಹಿಡಿದಾ ಹೊಲದಲಿ ಹಾಡುತ ಉಳುವಾ ಯೋಗಿಯ ನೋಡಲ್ಲಿ’ ಎಂದು ಕುವೆಂಪುರಂತಹ ಖ್ಯಾತ ಕವಿಗಳಿಂದ ಕೊಂಡಾಡಲ್ಪಟ್ಟ ಕೃಷಿ ಚಟುವಟಿಕೆಗಳಿಂದು ಕಣ್ಮರೆಯಾಗಿದೆ. ನೇಗಿಲಿನಂತಹ ಕೃಷಿ ಸಲಕರಣೆಗಳು ಇಂದು ಮ್ಯೂಸಿಯಂ ಸೇರಿಬಿಟ್ಟಿವೆ. ಇದರೊಂದಿಗೆ ಅತ್ಯಂತ ಸುಂದರವಾದ ಕೃಷಿ ಪರಂಪರೆ ಮೂಲೆಗುಂಪಾಗುತ್ತಿದೆ. ಹಳೆಯ ಕಾಲದ ಸಾಂಪ್ರದಾಯಿಕ ಬೇಸಾಯಕ್ಕೆ ಉಪಯೋಗವಾಗುತ್ತಿದ್ದ ಪರಿಕರಗಳ ಸ್ಥಾನವನ್ನು ಟ್ರಾಕ್ಟರ್,ಟಿಲ್ಲರ್ ಗಳಂತಹ ಯಂತ್ರಗಳು ಆಕ್ರಮಿಸಿಕೊಂಡಿವೆ. ಭತ್ತ ನಾಟಿ ಮಾಡುವ ಮಹಿಳೆಯರಿಂದ ಕೇಳಿ ಬರು...