ವಿಷಯಕ್ಕೆ ಹೋಗಿ

#ಚಲಿಸುವ_ಮೋಡಗಳ_ಮಧ್ಯದಿ... ನೀವೂ ಓದಿ

ಯುವ ಲೇಖಕ,ಉದಯೋನ್ಮುಖ ಕವಿಯೂ ಆದ ಪ್ರಿಯ ಸ್ನೇಹಿತ ಶ್ರೀರಾಜ್ ಆಚಾರ್ಯ ರವರ ದ್ವಿತೀಯ ಕವನ ಸಂಕಲನ ನನ್ನ ಕೈಸೇರಿ ತಿಂಗಳುಗಳಾಯಿತು...ಸಮಯ ಸಿಕ್ಕಾಗ ಓದಬೇಕೆಂದುಕೊಂಡಿದ್ದೆ..ಇವತ್ತು ಬಿಡುವು ಸಿಕ್ಕಿತು..



ಅಂದ ಹಾಗೆ ಈ ಕೃತಿಯು 'ರಿಕ್ತ ನಕ್ಷತ್ರ'ವೆಂಬ ಕವನ ಸಂಕಲನದ ನಂತರ ಕವಿಲೋಕಕ್ಕೆ ಸಮರ್ಪಿಸಿದ ಶ್ರೀರಾಜ್ ರ ದ್ವಿತೀಯ ಕಾಣಿಕೆ...
ಬದುಕಿನ ಆಯಾಚಿತ ಅಲಗುಗಳಲ್ಲಿ ಎದುರು ಬರುವ ಸಂತಸ,ಸಂದಿಗ್ಧ, ಸಂತಾಪ ಭರಿತ ಸನ್ನಿವೇಶಗಳನ್ನು ಕವಿ ಹೃದಯವು ಇಲ್ಲಿ ಹೃದಯಕ್ಕೆ ನಾಟುವಂತೆ,ಮನಮುಟ್ಟುವಂತೆ ಚಿತ್ರಿಸಿದ್ದಾರೆ..

ಸುತ್ತಮುತ್ತಲಿನ ಬಗ್ಗೆ ಗೊಡವೆಯೇ ಇಲ್ಲದೆ ಬದುಕು ಸಾಗಿಸುವಾಗ ಸ್ವಂತಿಕೆಗೋಸ್ಕರ ದ್ವೇಷ ಕಟ್ಟಿ ಅದರೊಳಗೆ ಸ್ನೇಹವನ್ನು ಹುಡುಕುವ ಮನುಜನ ಮನೋಸ್ಥಿತಿಗೆ ಮರುಗುವ ಕವಿ ಮನಸ್ಸು ಶ್ರೀರಾಜ್ ರವರದ್ದು....ಅದು ಕವನದ ಸಾಲುಗಳುದ್ದಕ್ಕೂ ಗೋಚರಿಸುತ್ತದೆ....

ಅಂತೂ ಅವರು ಹಚ್ಚಿದ ಈ ದೀಪವು ನಂದಾದೀಪವಾಗಿ ಪ್ರಜ್ವಲಿಸಿ,ಚಲಿಸುವ ಮೋಡಗಳು ಶಾಂತಿಯ ತಂಗಾಳಿಗೆ ಕರಗಿ‌,ಈ ಭುವಿಗೆ ಸ್ನೇಹದ,ಸೌಹಾರ್ದತೆಯ,ಕರುಣೆಯ ವರ್ಷಧಾರೆಯಾಗಿ ಸುರಿದು ಓದುಗ ಮನಕ್ಕೆ ತಂಪೆರಗಲಿ ಎಂದು ಆಶಿಸುತ್ತಾ....ಅವರ ಭವಿಷ್ಯ ಉಜ್ವಲವಾಗಲಿ ಎಂಬ ಮನದಾಳದ ಹಾರೈಕೆ....

https://m.facebook.com/story.php?story_fbid=2331324147091113&id=100006406501585

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂದಿನಿಂದ 'ಸಮಸ್ತ'ದ ಆನ್ ಲೈನ್ ತರಗತಿಗಳು ಆರಂಭ

ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಒಕ್ಕೂಟದ (SKJU)ಅಧೀನದಲ್ಲಿ‌ ಕಾರ್ಯಾಚರಿಸುವ ಸಮಸ್ತ ಕೇರಳ ಇಸ್ಲಾಂ ಮತ ವಿದ್ಯಾಭ್ಯಾಸ ಬೋರ್ಡ್‌ ಅಂಗೀಕೃತ ಮದ್ರಸಗಳ ವಿದ್ಯಾರ್ಥಿಗಳಿಗೆ ನವ ಅಧ್ಯಯನ ವರ್ಷ ಇಂದಿನಿಂದ ಆರಂಭಗೊಂಡಿದೆ. ವಿಶೇಷ ಅಂದ್ರೆ, ಈ ಬಾರಿ ತರಗತಿಗಳ ಪ್ರಾರಂಭೋತ್ಸವದ ಸಂಭ್ರಮಗಳಿಲ್ಲದೆ, ಮದ್ರಸಾ ಕಟ್ಟಡಗಳು ತೆರೆಯದೇ, ಹತ್ತು ಸಾವಿರಕ್ಕೂ ಮಿಕ್ಕ ಮದ್ರಸಗಳ ಹನ್ನೆರಡು ಲಕ್ಷ ವಿದ್ಯಾರ್ಥಿಗಳು ಅವರವರ ಮನೆಗಳಲ್ಲಿಯೇ ಕುಳಿತು ತರಗತಿಗಳಲ್ಲಿ ಪಾಲ್ಗೊಳ್ಳುತ್ತಿರುವುದು ಎಂಬುದು.  ಆನ್ ಲೈನ್ ತರಗತಿಗಳಿಗಾಗಿ, ಸಮಸ್ತ ಈ ಹಿಂದೆಯೇ ಎಲ್ಲಾ ಸಿದ್ಧತೆಗಳನ್ನು ನಡೆಸಿದ್ದು, ವಿದ್ಯಾಭ್ಯಾಸ ಬೋರ್ಡ್‌ ಅದಕ್ಕಾಗಿ ಆರು ಕ್ಯಾಮರಾ ಯುನಿಟ್ ಗಳ ಕ್ಲಾಸ್ ರೂಂಗಳು ,22 ಪರಿಣತರಾದ ಅಧ್ಯಾಪಕರನ್ನು ನೇಮಕಗೊಳಿಸಿದೆ.  ತರಗತಿ ಆರಂಭದಿಂದ ಕೊನೆಯವರೆಗೂ ವಿದ್ಯಾರ್ಥಿ ಜೊತೆ ಪೋಷಕರು ಕುಳಿತಿರಬೇಕು.ಹೋಂ ವರ್ಕ್ ನೀಡಿದರೆ, ಅದನ್ನು ಮಾಡಿ, ಮುಂದೆ ಮದ್ರಸಗಳಲ್ಲಿ ತರಗತಿ ಆರಂಭಗೊಳ್ಳುವಾಗ ಮೌಲ್ಯಮಾಪನಕ್ಕಾಗಿ ಅಧ್ಯಾಪಕರಿಗೆ ತೋರಿಸಬೇಕು. ಮನೆಯಲ್ಲಿ ತರಗತಿಯ ವಾತಾವರಣವನ್ನು ಒದಗಿಸಿಕೊಟ್ಟು,ವಿದ್ಯಾರ್ಥಿಗಳಿಗೆ ಮನೆಯವರು ಸಹಕರಿಸಬೇಕು. ಅಲ್ಲದೇ, ಮದ್ರಸಾ ಹಾಗೂ ಜಮಾಅತ್ ಕಮಿಟಿಗಳು ಸೇರಿ, ಆನ್‌ಲೈನ್ ತರಗತಿಗಳು ಆಯಾ ಮದ್ರಸಗಳ ವಿದ್ಯಾರ್ಥಿಗಳಿಗೆ ಅವರವರ ಮನೆಗಳಲ್ಲಿಯೇ ಸುಲಭವಾಗಿ ತಲುಪುವಂತೆ ಎಲ್ಲಾ ರೀತಿಯಲ್ಲಿ ಸಹಕಾರವನ್ನು ನೀಡಬೇಕು. ಮದ್ರಸಗಳು ತ...

ಕೋವಿಡ್ ಕಾಲದ ಓದು: ಚಂದ್ರನ ಚೂರು

'ಚಂದ್ರನ ಚೂರು' ಕೃತಿಯ ಹೆಸರು ಕೇಳಿದಾಗ ನಿಜವಾಗಿಯೂ ಅದೊಂದು ಕಾದಂಬರಿಯಾಗಿರಬಹುದು ಎಂದು ಭಾವಿಸಿದ್ದೆ. ಆದರೆ, ಪುಸ್ತಕ ಕೈಗೆ ತಲುಪಿದಾಗಲೇ ಗೊತ್ತಾಗಿದ್ದು, ಅದೊಂದು ಚಂದ್ರಲೋಕಕ್ಕೆ ಕೊಂಡೊಯ್ಯುವ ಅದ್ಭುತ ಕೃತಿ ಅಂತ. ತಂದೆ ಕುವೆಂಪು ಅವರ ಸಾಹಿತ್ಯದ ಹಾದಿಯಲ್ಲೇ ನಡೆದರೂ, ತೇಜಸ್ವಿಯವರ ಸಾಹಿತ್ಯವು ನಿಸರ್ಗ ವಿಸ್ಮಯ, ಭೂಗೋಳ, ಜೀವಶಾಸ್ತ್ರ, ಭತಶಾಸ್ತ್ರ, ಇತಿಹಾಸ ಹೀಗೇ ಎಲ್ಲಾ ಶಾಸ್ತ್ರಗಳ ಮಿಶ್ರಣ ರಸಾಯನ ಎಂದೇ ಹೇಳಬಹುದು. ಚಂದ್ರನ ಚೂರು ಚಂದ್ರ ಲೋಕದ ವಿಸ್ಮಯ ದೃಶ್ಯಗಳನ್ನು ಕಟ್ಟಿಕೊಡುವ ಚೊಚ್ಚಲ ಕೃತಿ. ಬಾಹ್ಯಾಕಾಶ, ಖಗೋಳ ಶಾಸ್ತ್ರ ವಿಷಯದಲ್ಲಿ ಆಸಕ್ತಿ ಇಲ್ಲದ ನನ್ನಂತವರನ್ನೂ ಇದು ಸರಾಗವಾಗಿ ಓದಿಸಿಕೊಂಡು ಹೋಗುವಂತೆ ಮಾಡುತ್ತದೆ, ಅದಕ್ಕೆ ಕಾರಣ, ತೇಜಸ್ವಿ ಅವರ ಬರವಣಿಗೆ ಹಾಗೂ ವಿವರಣೆಯ ಶೈಲಿ.. ಜಗತ್ತಿನಲ್ಲಿ ಮನುಷ್ಯನು ಚಂದ್ರನಲ್ಲಿಗೆ ಕಾಲಿಡುವುದಕ್ಕೂ ಮುನ್ನ, ಯಾವುದೆಲ್ಲಾ ರೀತಿಯ ಪರಿಶ್ರಮಗಳು ನಡೆದಿದ್ದವು ಹಾಗೂ ಭೂಮಂಡಲ ಮತ್ತು ಚಂದ್ರನ ಕುರಿತಾಘಿ ಯಾವುದೆಲ್ಲಾ ಆಯಾಮಗಳಲ್ಲಿ ಅಧ್ಯಯನಗಳಾಗಿದ್ದುವು ಎಂಬುದರ ಸಂಪೂರ್ಣ ವಿಷಯಗಳಿವೆ. ಚಂದ್ರನಲ್ಲಿ ತಲುಪಿದ ಮನುಷ್ಯನಿಗೆ ಆದ ಅನುಭವಗಳೇನು? ನೀಲ್ ಆಮ್Fಸ್ಟ್ರಾಂಗ್ ತಂಡದ ಚಂದ್ರಯಾನದ ರಸವತ್ತಾದ ಅನುಭವಗಳು, ಚಂದಿರನ ಮಣ್ಣಲ್ಲಿ ಅಮೇರಿಕದ ಫ್ಲಾಗ್ ಮತ್ತು ಬೋಡ್F ಸ್ಥಾಪಿಸಿ ಬಂದ ಆ ಧೀರ ತಂಡದ ಬೆರಗಾಗಿಸುವ ಕ್ಷಣ ಕ್ಷಣದ ವರದಿಗಳು ಈ ಕೃತಿಯ ಲೇಖನಗಳಲ್ಲಿ ಅಡಗಿದೆ. ಒಟ್ಟಿನಲ...

ನಾನುಗೌರಿ ವೆಬ್ ನಲ್ಲಿ ಪ್ರಕಟಗೊಂಡ ಬರಹಗಳು..ಓದಲು ಈ ಲಿಂಕ್ ಉಪಯೋಗಿಸಿ

-ನಿಝಾಮ್ ಅನ್ಸಾರಿ ಭಾರತದ ಉನ್ನತ ಶಿಕ್ಷಣದ ಮಹಾನ್‌ ಆಶಯಕ್ಕೆ ಎಳ್ಳುನೀರು ಬಿಡುತ್ತಿರುವ ಪ್ರಭುತ್ವ… http://naanugauri.com/indian-higher-education-shrinking-down- **************************************************************** ಲಾಕ್‌ಡೌನ್‌: ತುತ್ತು ಅನ್ನಕ್ಕಾಗಿ ಗುಳೆ ಹೊರಟವರ ಕತೆ http://naanugauri.com/lockdown-story-of-labour/ via @Naanu gauri ***************************************************************** ಪೌರತ್ವ ವಸೂಲಿ – ನಾಝಿ ಜರ್ಮನಿಯಿಂದ ಕಲಿಯಬೇಕಾದುದು… http://naanugauri.com/citizen-amendment-act-same-thing-happen-in-german-80-years-back- ****************************************************************** ಪ್ಲೇಗ್ ಹಾಗೂ ಕೋವಿಡ್ 19 ನಡುವೆ ಕೆಲವು ಹೋಲಿಕೆಗಳು http://naanugauri.com/covid-19-and-bubonic-plague-this-lead-to-renaissance/ via @Naanu gauri