ವಿಷಯಕ್ಕೆ ಹೋಗಿ

#ಸೂಫೀ- #ವಿಶ್ವ ಪ್ರೇಮದ ಮೂಲಕ ಭಗವತ್ ಸಾಕ್ಷಾತ್ಕಾರ

ಇತ್ತೀಚೆಗೆ ಹೊಸದಿಗಂತ ಪತ್ರಿಕೆಯಲ್ಲಿ ಪ್ರಕಟವಾದ ಅಂಕಣವೊಂದರಲ್ಲಿ ಬರಹದುದ್ದಕ್ಕೂ ಮುಸ್ಲಿಂ ಮೂಲಭೂತವಾದಿಗಳನ್ನು ತರಾಟೆಗೆ ತೆಗೆದುಕೊಂಡು ಟೀಕಿಸುವ,ಪ್ರತ್ಯಾರೋಪಗಳನ್ನು ಛೂ ಬಿಡುವ ಭರದಲ್ಲಿ ಲೇಖಕನು ಮಹಾನ್ ಸೂಫೀ ಸಂತ ಮುಈನುದ್ದೀನ್ ಚಿಶ್ತಿ (ರ)ರ ಬಗ್ಗೆ ಕೀಳಾಗಿ ಓರ್ವ ದಂಗೆಕೋರನಂತೆ ಚಿತ್ರಿಸಲು ಪ್ರಯತ್ನಿಸಿದ್ದು ಕಂಡು ತುಂಬಾ ಬೇಜಾರಾಯ್ತು...
ಬಹುಶಃ ಅದಾಗಿರಬಹುದು ನನ್ನ ಕೈಗೆ ತಲುಪಲು ಕಾರಣ...
(ಏನೇ ಆಗಲಿ #ಕರಜಗಿರವರು ಸೂಫೀ ಪಂಥವನ್ನು ಪ್ರತಿಪಾದಿಸುವಾಗ ಚಿಶ್ತಿಯವರ ತರೀಖತ್ ಗೆ ಸಂಪೂರ್ಣ ನ್ಯಾಯ ಒದಗಿಸಿದ್ದು ಕಂಡು ಮನತುಂಬಿತು...)

ಪಡೆದ ಸೂಫಿ ಪರಂಪರೆಯನ್ನು ಜಗದಗಲಕ್ಕೆ ಪರಿಚಯಿಸುವಲ್ಲಿ ಖ್ಯಾತ ಸಾಹಿತಿ #ಡಾ_ಗುರುರಾಜ_ಕರಜಗಿಯವರ ಅಪೂರ್ವ ಪ್ರಯತ್ನವಿದು..
ಕರಜಗಿಯವರ ಚಿಂತನೆಯ ವೈಶಾಲ್ಯತೆಯನ್ನು ಓದುಗ ಇಲ್ಲಿ ಕೊನೆವರೆಗೂ ಅನುಭವಿಸುತ್ತಾನೆ

ಹನ್ನೊಂದು, ಹನ್ನೆರಡನೆಯ ಶತಮಾನದಲ್ಲಿ ಜೀವಿಸಿ ಕಣ್ಮರೆಯಾದ ಅದೆಷ್ಟೋ ಸೂಫಿಗಳ ಜೀವನದ ಸಾರವು ಇಲ್ಲಿ ಪ್ರತಿಧ್ವನಿಸುತ್ತದೆ.ಅವರು ವಿಶ್ವ ಭ್ರಾತೃತ್ವಕ್ಕೆ ನೀಡಿದ ಅಗತ್ಯ ಜೀವರಸಾಯನ ಇಲ್ಲಿದೆ...
ನಮ್ಮ ಜೀವನಕ್ಕೆ ಪಾಠ ಹೇಳಿ ಕೊಡುವ ಅನೇಕ ಕಥೆಗಳಿವೆ..ಆ ಕಥೆಗಳೇ ಅವರ ಜೀವನವಾಗಿತ್ತು...ನಂಬಲಾಗದ್ದು...ಇಂದಿನ ಕಾಲದ ನಮಗೆ ಅರಗಿಸಿಕೊಳ್ಳಲಾಗದ್ದು...

ಧರ್ಮಾಚರಣೆಯ ಗೋಜಲಿನಲ್ಲಿ,ಆಧುನಿಕತೆಯ ಅಬ್ಬರದಲ್ಲಿ ಹೃನ್ಮನಗಳನ್ನು ವಿಚಲಿತಗೊಳಿಸಿಕೊಂ

ವಿಲವಿಲನೆ ಒದ್ದಾಡುತ್ತಿರುವ ಮನುಜ ಕುಲಕ್ಕೆ ಪರಿಣಾಮಕಾರಿ ಪರಿಹಾರವನ್ನೊದಗಿಸಬಲ್ಲ ಸರಳ ಸಾತ್ವಿಕ ಚಿಂತನ ಪರಂಪರೆ ಸೂಫೀ....

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ರಂಝಾನ್ ನೀಡುವ ಒಳಿತಿನ ಸಂದೇಶ...

-ನಿಝಾಮ್ ಅನ್ಸಾರಿ ಮತ್ತೆ ರಂಝಾನ್ ತಿಂಗಳ ಆಗಮನವಾಗಿದೆ. ಪ್ರತಿ ವರ್ಷವೂ ರಂಝಾನ್ ಬಗ್ಗೆ ಬರೆಯುವಾಗ ಅದರ ಶ್ರೇಷ್ಟತೆ, ವ್ರತಾನುಷ್ಟಾನದ ಪ್ರಾಧಾನ್ಯತೆಯನ್ನೇ ಹೆಚ್ಚಿನವರೂ ಬರೆಯುತ್ತಾರೆ. ಅದನ್ನೇ ಮಸೀದಿಗಳಲ್ಲೂ ಹೇಳುವುದಿದೆ. ಒಳ್ಳೆಯದೇ. ಕಾರಣ ಆಧುನಿಕ ಜನರು ಧರ್ಮದ ಪ್ರತಿಯೊಂದು ವಿಷಯಗಳಲ್ಲೂ ಸಡಿಲಿಕೆ ಬಯಸುತ್ತಾರೆ. ಅಂದರೆ ಅವರವರ ಜೀವನಕ್ರಮಗಳಿಗನುಸಾರವಾಗಿ ಧರ್ಮದ ನಿಯಮಗಳನ್ನು ಗಾಳಿಗೆ ತೂರುವಂತಹ ಕಾರ್ಯಗಳು ಎಲ್ಲಾ ಕಡೆ ನಡೆಯುತ್ತಲಿದೆ. ಹಾಗಿರುವಾಗ ರಂಝಾನ್ ವ್ರತಾಚರಣೆಯ ಮಹತ್ವವನ್ನು ಪ್ರತಿ ಬಾರಿಯೂ ಪ್ರಭಾಷಣ ವೇದಿಕೆಗಳಲ್ಲಿ, ಮಸೀದಿಗಳಲ್ಲಿ ಜನ ಸಾಮಾನ್ಯರಿಗೆ ನೆನಪಿಸುತ್ತಲಿರುವುದು ಸ್ವಾಗತಾರ್ಹವಾದುದು. ಮತ್ತು ಪ್ರಯೋಜನಕಾರಿಯೂ ಕೂಡಾ. ಯಾಕೆ ಈ ರೀತಿ ಬರೆದೆ ಅಂತ ಕೇಳಿದರೆ, ಇತ್ತೀಚೆಗೆ ವಾಟ್ಸಾಪ್ ನೊಳಗೆ ಕಣ್ಣಾಡಿಸಿದಾಗ ಕಂಡ ಕೆಲವೊಂದು ಸಂದೇಶಗಳು ಧರ್ಮದ ಬಗ್ಗೆ ಕೀಳರಿಮೆಯ ಭಾವ ತೋರುವವರಿಗೆ ತಕ್ಕ ಉತ್ತರ ನೀಡುವಂತಿತ್ತು. ಬಡ ಕುಟುಂಬಕ್ಕೆ ಮನೆ ಕಟ್ಟುವ ಸಹಾಯಾರ್ಥ ಕಲೆಕ್ಷನ್, ರಂಝಾನ್ ನಂತರದ ಬಡ ಹೆಣ್ಮಕ್ಕಳ ಮದುವೆಗಾಗಿ, ಮುಅಲ್ಲಿಂಗಳಿಗಾಗಿ ಹೀಗೇ ಹಲವು ರೀತಿಯಲ್ಲಿ ಯುವ-ವಯಸ್ಕರು ಸೇರಿ ಸಮುದಾಯದೊಂದಿಗಿನ ಸಾಮಾಜಿಕ ಕಾಳಜಿಗಾಗಿ ರಂಝಾನ್ ಅನ್ನು ಉಪಯೋಗಿಸುತ್ತಿದ್ದಾರೆನ್ನುವಾಗ ಧರ್ಮದ ಮನದಲ್ಲಿ ಅಭಿಮಾನ ಮೂಡುತ್ತಿದೆ. ಬುರ್ಖಾದ ವಿಚಾರದಲ್ಲಿ ಬಲತ್ಕಾರ ಮಾಡಲಾಗುತ್ತದೆ ಎಂದು ಆರೋಪಿಸುತ್ತಿರುವಾಗ, ಆ ವಾದವನ್ನು ವಿರ...

ನಾನುಗೌರಿ ವೆಬ್ ನಲ್ಲಿ ಪ್ರಕಟಗೊಂಡ ಬರಹಗಳು..ಓದಲು ಈ ಲಿಂಕ್ ಉಪಯೋಗಿಸಿ

-ನಿಝಾಮ್ ಅನ್ಸಾರಿ ಭಾರತದ ಉನ್ನತ ಶಿಕ್ಷಣದ ಮಹಾನ್‌ ಆಶಯಕ್ಕೆ ಎಳ್ಳುನೀರು ಬಿಡುತ್ತಿರುವ ಪ್ರಭುತ್ವ… http://naanugauri.com/indian-higher-education-shrinking-down- **************************************************************** ಲಾಕ್‌ಡೌನ್‌: ತುತ್ತು ಅನ್ನಕ್ಕಾಗಿ ಗುಳೆ ಹೊರಟವರ ಕತೆ http://naanugauri.com/lockdown-story-of-labour/ via @Naanu gauri ***************************************************************** ಪೌರತ್ವ ವಸೂಲಿ – ನಾಝಿ ಜರ್ಮನಿಯಿಂದ ಕಲಿಯಬೇಕಾದುದು… http://naanugauri.com/citizen-amendment-act-same-thing-happen-in-german-80-years-back- ****************************************************************** ಪ್ಲೇಗ್ ಹಾಗೂ ಕೋವಿಡ್ 19 ನಡುವೆ ಕೆಲವು ಹೋಲಿಕೆಗಳು http://naanugauri.com/covid-19-and-bubonic-plague-this-lead-to-renaissance/ via @Naanu gauri

ಅಳಿವಿನಂಚಿನಲ್ಲಿರುವ ಸಾಂಪ್ರದಾಯಿಕ ಕೃಷಿ ಪರಂಪರೆ-* ನಿಝಾಮ್ ಅನ್ಸಾರಿ

ಭಾರತವು ಕೃಷಿ ಅವಲಂಬಿತ ಹಳ್ಳಿಗಳನ್ನೊಳಗೊಂಡ ಸಮೃದ್ಧ ದೇಶ. ದೇಶದ ಬೆಳವಣಿಗೆಯಲ್ಲಿ ವ್ಯವಸಾಯದ ಪಾತ್ರ ಬಹುಮುಖ್ಯವಾದುದು. ತಂತ್ರಜ್ಞಾನವು ದೇಶಕ್ಕೆ ಯಾವ ರೀತಿಯಲ್ಲಿ ಕೊಡುಗೆಗಳನ್ನು ನೀಡುತ್ತವೆಯೋ ಅದೇ ರೀತಿಯಲ್ಲಿ ಕೃಷಿಯ ಕೊಡುಗೆಯೂ ಕೂಡಾ ಅಪಾರವಾದುದು. ಆದರೆ ಇತ್ತೀಚಿನ ದಿನಗಳಲ್ಲಿ ಹಳ್ಳಿಗಳಲ್ಲಿ ವ್ಯವಸಾಯವು ಇಳಿಮುಖವಾಗುತ್ತಿದೆ. ಕೇವಲ ಬೆರಳೆಣಿಕೆಯಷ್ಟು ಮಂದಿ ಮಾತ್ರ ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವವರನ್ನು ಕಾಣಬಹುದಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿನ ಜನರು ವಿದ್ಯಾವಂತರಾಗುತ್ತಲೇ ತಮ್ಮ ಪಾರಂಪರಿಕ ಕುಲ ಕಸುಬನ್ನು ನಿರ್ಲಕ್ಷಿಸಿ ನಗರಗಳತ್ತ ವಲಸೆ ಹೋಗುತ್ತಿದ್ದಾರೆ.ಕೈ ಕೆಸರು ಮಾಡಿಕೊಂಡು ದುಡಿಯುವವರ ಕೊರತೆ ಅಗಾಧವಾಗಿ ಎದ್ದು ಕಾಣುತ್ತಿದೆ. ಇಂದಿನ ನವ ತಲೆಮಾರು ಹಳ್ಳಿಗಳು ಕೇವಲ ವೃದ್ಧರಿಗೆ ಮಾತ್ರ ಯೋಗ್ಯವಾದುದು ಎಂದು ತಿಳಿದಂತಿದೆ. `ನೇಗಿಲಾ ಹಿಡಿದಾ ಹೊಲದಲಿ ಹಾಡುತ ಉಳುವಾ ಯೋಗಿಯ ನೋಡಲ್ಲಿ’ ಎಂದು ಕುವೆಂಪುರಂತಹ ಖ್ಯಾತ ಕವಿಗಳಿಂದ ಕೊಂಡಾಡಲ್ಪಟ್ಟ ಕೃಷಿ ಚಟುವಟಿಕೆಗಳಿಂದು ಕಣ್ಮರೆಯಾಗಿದೆ. ನೇಗಿಲಿನಂತಹ ಕೃಷಿ ಸಲಕರಣೆಗಳು ಇಂದು ಮ್ಯೂಸಿಯಂ ಸೇರಿಬಿಟ್ಟಿವೆ. ಇದರೊಂದಿಗೆ ಅತ್ಯಂತ ಸುಂದರವಾದ ಕೃಷಿ ಪರಂಪರೆ ಮೂಲೆಗುಂಪಾಗುತ್ತಿದೆ. ಹಳೆಯ ಕಾಲದ ಸಾಂಪ್ರದಾಯಿಕ ಬೇಸಾಯಕ್ಕೆ ಉಪಯೋಗವಾಗುತ್ತಿದ್ದ ಪರಿಕರಗಳ ಸ್ಥಾನವನ್ನು ಟ್ರಾಕ್ಟರ್,ಟಿಲ್ಲರ್ ಗಳಂತಹ ಯಂತ್ರಗಳು ಆಕ್ರಮಿಸಿಕೊಂಡಿವೆ. ಭತ್ತ ನಾಟಿ ಮಾಡುವ ಮಹಿಳೆಯರಿಂದ ಕೇಳಿ ಬರು...