ವಿಷಯಕ್ಕೆ ಹೋಗಿ

ಅಳಿವಿನಂಚಿನಲ್ಲಿರುವ ಸಾಂಪ್ರದಾಯಿಕ ಕೃಷಿ ಪರಂಪರೆ-* ನಿಝಾಮ್ ಅನ್ಸಾರಿ

2012721101822590734_20ಭಾರತವು ಕೃಷಿ ಅವಲಂಬಿತ ಹಳ್ಳಿಗಳನ್ನೊಳಗೊಂಡ ಸಮೃದ್ಧ ದೇಶ. ದೇಶದ ಬೆಳವಣಿಗೆಯಲ್ಲಿ ವ್ಯವಸಾಯದ ಪಾತ್ರ ಬಹುಮುಖ್ಯವಾದುದು. ತಂತ್ರಜ್ಞಾನವು ದೇಶಕ್ಕೆ ಯಾವ ರೀತಿಯಲ್ಲಿ ಕೊಡುಗೆಗಳನ್ನು ನೀಡುತ್ತವೆಯೋ ಅದೇ ರೀತಿಯಲ್ಲಿ ಕೃಷಿಯ ಕೊಡುಗೆಯೂ ಕೂಡಾ ಅಪಾರವಾದುದು. ಆದರೆ ಇತ್ತೀಚಿನ ದಿನಗಳಲ್ಲಿ ಹಳ್ಳಿಗಳಲ್ಲಿ ವ್ಯವಸಾಯವು ಇಳಿಮುಖವಾಗುತ್ತಿದೆ. ಕೇವಲ ಬೆರಳೆಣಿಕೆಯಷ್ಟು ಮಂದಿ ಮಾತ್ರ ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವವರನ್ನು ಕಾಣಬಹುದಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿನ ಜನರು ವಿದ್ಯಾವಂತರಾಗುತ್ತಲೇ ತಮ್ಮ ಪಾರಂಪರಿಕ ಕುಲ ಕಸುಬನ್ನು ನಿರ್ಲಕ್ಷಿಸಿ ನಗರಗಳತ್ತ ವಲಸೆ ಹೋಗುತ್ತಿದ್ದಾರೆ.ಕೈ ಕೆಸರು ಮಾಡಿಕೊಂಡು ದುಡಿಯುವವರ ಕೊರತೆ ಅಗಾಧವಾಗಿ ಎದ್ದು ಕಾಣುತ್ತಿದೆ. ಇಂದಿನ ನವ ತಲೆಮಾರು ಹಳ್ಳಿಗಳು ಕೇವಲ ವೃದ್ಧರಿಗೆ ಮಾತ್ರ ಯೋಗ್ಯವಾದುದು ಎಂದು ತಿಳಿದಂತಿದೆ.
`ನೇಗಿಲಾ ಹಿಡಿದಾ ಹೊಲದಲಿ ಹಾಡುತ ಉಳುವಾ ಯೋಗಿಯ ನೋಡಲ್ಲಿ’ ಎಂದು ಕುವೆಂಪುರಂತಹ ಖ್ಯಾತ ಕವಿಗಳಿಂದ ಕೊಂಡಾಡಲ್ಪಟ್ಟ ಕೃಷಿ ಚಟುವಟಿಕೆಗಳಿಂದು ಕಣ್ಮರೆಯಾಗಿದೆ. ನೇಗಿಲಿನಂತಹ ಕೃಷಿ ಸಲಕರಣೆಗಳು ಇಂದು ಮ್ಯೂಸಿಯಂ ಸೇರಿಬಿಟ್ಟಿವೆ. ಇದರೊಂದಿಗೆ ಅತ್ಯಂತ ಸುಂದರವಾದ ಕೃಷಿ ಪರಂಪರೆ ಮೂಲೆಗುಂಪಾಗುತ್ತಿದೆ. ಹಳೆಯ ಕಾಲದ ಸಾಂಪ್ರದಾಯಿಕ ಬೇಸಾಯಕ್ಕೆ ಉಪಯೋಗವಾಗುತ್ತಿದ್ದ ಪರಿಕರಗಳ ಸ್ಥಾನವನ್ನು ಟ್ರಾಕ್ಟರ್,ಟಿಲ್ಲರ್ ಗಳಂತಹ ಯಂತ್ರಗಳು ಆಕ್ರಮಿಸಿಕೊಂಡಿವೆ. ಭತ್ತ ನಾಟಿ ಮಾಡುವ ಮಹಿಳೆಯರಿಂದ ಕೇಳಿ ಬರುತ್ತಿದ್ದ “ಪಾಡ್ಡನ”ಗಳ ಇಂಪಾದ ನಿನಾದಗಳು ಯಂತ್ರಗಳ ಶಬ್ಧಕ್ಕೆ ಸೋತು ಹೋಗಿವೆ. ಹಿಂದೆಲ್ಲಾ ಗುತ್ತಿನ ಮನೆಗಳಿಗೆ ಹೋದರೆ ಅಂಗಳದ ತುಂಬಾ ಕಾಣ ಸಿಗುತ್ತಿದ್ದ, ಗೊಬ್ಬರಕ್ಕೆ ಬಳಕೆಯಾಗುತ್ತಿದ್ದಂತಹ ಹುಲ್ಲಿನ ರಾಶಿಗಳು ಇಂದು ಉಪಯೋಗವಾಗುತ್ತಿಲ್ಲ ಎಂಬುದು ವಿಪರ್ಯಾಸದ ಸಂಗತಿಯಾಗಿದೆ. ಉಳುವುದಕ್ಕೆ ಬಳಸುತ್ತಿದ್ದ ಎಮ್ಮೆ,ಕೋಣಗಳಂತಹ ಜಾನುವಾರುಗಳಿಗೆ ಕೂಡಾ ಇದೀಗ ಬೇಡಿಕೆ ಕಡಿಮೆ. ಸಂಗ್ರಹಿಸಲ್ಪಟ್ಟ ಭತ್ತದ ಕಾಳುಗಳನ್ನು ಭದ್ರವಾಗಿಡಲು ಬಳಸುತ್ತಿದ್ದ ಕಲಂಬಿ, ನಾಟಿ ಮಾಡುವ ಸಮಯದಲ್ಲಿ ಮಳೆರಾಯನಿಂದ ರಕ್ಷಣೆ ಪಡೆಯಲು ಧರಿಸುತ್ತಿದ್ದ ಕೊರಂಬು ಕವಚ, ಭತ್ತ ಕುಟ್ಟಲು ಉಪಯೋಗಿಸುತ್ತಿದ್ದ ಉಜ್ಜೇರ್ ಒಣಕೆ ಮುಂತಾದುವುಗಳಿಂದು ಪಳೆಯುಳಿಕೆಗಳಾಗಿ ಪರಿಗಣಿಸಲ್ಪಟ್ಟು ವಸ್ತು ಸಂಗ್ರಹಾಲಯ ಸೇರಿವೆ. ಹಚ್ಚ ಹಸುರಿನಿಂದ ಕಂಗೊಳಿಸುತ್ತಿದ್ದ ನಮ್ಮ ನಾಡು ಯಾಂತ್ರಿಕತೆಯ ಪ್ರಭಾವಕ್ಕೆ ಸೊರಗಿ ಹೊಗಿದೆ.ಉಸಿರಾಡಲು ಶುದ್ಧ ಪ್ರಾಣವಾಯುವಿಗೂ ಬೆಲೆ ತೆರಬೇಕಾದ ಪರಿಸ್ಥಿತಿ ಬಂದಿದೆ.
ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ನಮ್ಮಲ್ಲಿನ ಹಳೆಯ ರೀತಿಯ ಕೃಷಿ ವಿಧಾನವನ್ನು ಅನುಸರಿಸಿ ಮಾತ್ರ ವ್ಯವಸಾಯ ಮಾಡಬೇಕೆಂದಲ್ಲ. ಬೇಸಾಯದ ಪ್ರಗತಿಯಲ್ಲಿ ತಾಂತ್ರಿಕತೆಯ ಪಾಲು ಬಹುಮಟ್ಟದಲ್ಲೇ ಇದೆ.ವ್ಯವಸಾಯದ ಶೀಘ್ರ ಬೆಳವಣಿಗೆಯಲ್ಲೂ ನೂತನ ತಂತ್ರಜ್ಞಾನಗಳು ಮುಖ್ಯವೆನಿಸುತ್ತವೆ. ದಿನಗಳಟ್ಟಲೆ ಮೈಮುರಿದು ಮಾಡಬೇಕಿದ್ದ ಕೆಲಸ ಕಾರ್ಯಗಳು ಇಂದು ತಾಸುಗಳಲ್ಲಿ ಮುಗಿಯುತ್ತವೆ.ಇದರಿಂದ ಸಮಯ ವ್ಯರ್ಥವಾಗುವುದನ್ನು ಇಲ್ಲವಾಗಿಸಬಹುದಲ್ಲದೆ, ಸಮಯಕ್ಕೆ ಸರಿಯಾಗಿ ಸರಕುಗಳನ್ನು ಮಾರುಕಟ್ಟೆಗೆ ತಲುಪಿಸಲೂ ಸಹಕಾರಿಯಾಗುತ್ತದೆ.ಹೀಗೇ ಬೇಸಾಯದ ಪ್ರತಿಯೊಂದು ಹಂತಗಳಲ್ಲೂ ತಂತ್ರಜ್ಞಾನದ ಕೊಡುಗೆಯನ್ನು ಎಂದಿಗೂ ಅಲ್ಲಗಳೆಯಲಾಗದು. ಆದರೂ ನಮ್ಮ ತಲೆಮಾರಿಗೆ ಪರಂಪರಾಗತ ಕೃಷಿ ಉಪಕರಣಗಳ ಬಗ್ಗೆ ಸಾಮಾನ್ಯ ಜ್ಞಾನ ಕೂಡಾ ಇಲ್ಲವೆಂಬುದು ಬಹಳ ಖೇದಕರ ಸಂಗತಿ.ಬೇಸಾಯವನ್ನು ಕುಲಕಸುಬನ್ನಾಗಿ ಮಾಡಿಕೊಂಡಿದ್ದ ನಮ್ಮ ಪೂರ್ವಿಕರ ಕೃಷಿ ವಿಧಾನವನ್ನು ಮುಂದಿನ ತಲೆಮಾರಿಗೆ ಪರಿಚಯಿಸುವ ನಿಟ್ಟಿನಲ್ಲಿ ನಾವು ಮುಂದೆ ಬರಬೇಕಿದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕೋವಿಡ್ ಕಾಲದ ಓದು: ಚಂದ್ರನ ಚೂರು

'ಚಂದ್ರನ ಚೂರು' ಕೃತಿಯ ಹೆಸರು ಕೇಳಿದಾಗ ನಿಜವಾಗಿಯೂ ಅದೊಂದು ಕಾದಂಬರಿಯಾಗಿರಬಹುದು ಎಂದು ಭಾವಿಸಿದ್ದೆ. ಆದರೆ, ಪುಸ್ತಕ ಕೈಗೆ ತಲುಪಿದಾಗಲೇ ಗೊತ್ತಾಗಿದ್ದು, ಅದೊಂದು ಚಂದ್ರಲೋಕಕ್ಕೆ ಕೊಂಡೊಯ್ಯುವ ಅದ್ಭುತ ಕೃತಿ ಅಂತ. ತಂದೆ ಕುವೆಂಪು ಅವರ ಸಾಹಿತ್ಯದ ಹಾದಿಯಲ್ಲೇ ನಡೆದರೂ, ತೇಜಸ್ವಿಯವರ ಸಾಹಿತ್ಯವು ನಿಸರ್ಗ ವಿಸ್ಮಯ, ಭೂಗೋಳ, ಜೀವಶಾಸ್ತ್ರ, ಭತಶಾಸ್ತ್ರ, ಇತಿಹಾಸ ಹೀಗೇ ಎಲ್ಲಾ ಶಾಸ್ತ್ರಗಳ ಮಿಶ್ರಣ ರಸಾಯನ ಎಂದೇ ಹೇಳಬಹುದು. ಚಂದ್ರನ ಚೂರು ಚಂದ್ರ ಲೋಕದ ವಿಸ್ಮಯ ದೃಶ್ಯಗಳನ್ನು ಕಟ್ಟಿಕೊಡುವ ಚೊಚ್ಚಲ ಕೃತಿ. ಬಾಹ್ಯಾಕಾಶ, ಖಗೋಳ ಶಾಸ್ತ್ರ ವಿಷಯದಲ್ಲಿ ಆಸಕ್ತಿ ಇಲ್ಲದ ನನ್ನಂತವರನ್ನೂ ಇದು ಸರಾಗವಾಗಿ ಓದಿಸಿಕೊಂಡು ಹೋಗುವಂತೆ ಮಾಡುತ್ತದೆ, ಅದಕ್ಕೆ ಕಾರಣ, ತೇಜಸ್ವಿ ಅವರ ಬರವಣಿಗೆ ಹಾಗೂ ವಿವರಣೆಯ ಶೈಲಿ.. ಜಗತ್ತಿನಲ್ಲಿ ಮನುಷ್ಯನು ಚಂದ್ರನಲ್ಲಿಗೆ ಕಾಲಿಡುವುದಕ್ಕೂ ಮುನ್ನ, ಯಾವುದೆಲ್ಲಾ ರೀತಿಯ ಪರಿಶ್ರಮಗಳು ನಡೆದಿದ್ದವು ಹಾಗೂ ಭೂಮಂಡಲ ಮತ್ತು ಚಂದ್ರನ ಕುರಿತಾಘಿ ಯಾವುದೆಲ್ಲಾ ಆಯಾಮಗಳಲ್ಲಿ ಅಧ್ಯಯನಗಳಾಗಿದ್ದುವು ಎಂಬುದರ ಸಂಪೂರ್ಣ ವಿಷಯಗಳಿವೆ. ಚಂದ್ರನಲ್ಲಿ ತಲುಪಿದ ಮನುಷ್ಯನಿಗೆ ಆದ ಅನುಭವಗಳೇನು? ನೀಲ್ ಆಮ್Fಸ್ಟ್ರಾಂಗ್ ತಂಡದ ಚಂದ್ರಯಾನದ ರಸವತ್ತಾದ ಅನುಭವಗಳು, ಚಂದಿರನ ಮಣ್ಣಲ್ಲಿ ಅಮೇರಿಕದ ಫ್ಲಾಗ್ ಮತ್ತು ಬೋಡ್F ಸ್ಥಾಪಿಸಿ ಬಂದ ಆ ಧೀರ ತಂಡದ ಬೆರಗಾಗಿಸುವ ಕ್ಷಣ ಕ್ಷಣದ ವರದಿಗಳು ಈ ಕೃತಿಯ ಲೇಖನಗಳಲ್ಲಿ ಅಡಗಿದೆ. ಒಟ್ಟಿನಲ...

ಇಂದಿನಿಂದ 'ಸಮಸ್ತ'ದ ಆನ್ ಲೈನ್ ತರಗತಿಗಳು ಆರಂಭ

ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಒಕ್ಕೂಟದ (SKJU)ಅಧೀನದಲ್ಲಿ‌ ಕಾರ್ಯಾಚರಿಸುವ ಸಮಸ್ತ ಕೇರಳ ಇಸ್ಲಾಂ ಮತ ವಿದ್ಯಾಭ್ಯಾಸ ಬೋರ್ಡ್‌ ಅಂಗೀಕೃತ ಮದ್ರಸಗಳ ವಿದ್ಯಾರ್ಥಿಗಳಿಗೆ ನವ ಅಧ್ಯಯನ ವರ್ಷ ಇಂದಿನಿಂದ ಆರಂಭಗೊಂಡಿದೆ. ವಿಶೇಷ ಅಂದ್ರೆ, ಈ ಬಾರಿ ತರಗತಿಗಳ ಪ್ರಾರಂಭೋತ್ಸವದ ಸಂಭ್ರಮಗಳಿಲ್ಲದೆ, ಮದ್ರಸಾ ಕಟ್ಟಡಗಳು ತೆರೆಯದೇ, ಹತ್ತು ಸಾವಿರಕ್ಕೂ ಮಿಕ್ಕ ಮದ್ರಸಗಳ ಹನ್ನೆರಡು ಲಕ್ಷ ವಿದ್ಯಾರ್ಥಿಗಳು ಅವರವರ ಮನೆಗಳಲ್ಲಿಯೇ ಕುಳಿತು ತರಗತಿಗಳಲ್ಲಿ ಪಾಲ್ಗೊಳ್ಳುತ್ತಿರುವುದು ಎಂಬುದು.  ಆನ್ ಲೈನ್ ತರಗತಿಗಳಿಗಾಗಿ, ಸಮಸ್ತ ಈ ಹಿಂದೆಯೇ ಎಲ್ಲಾ ಸಿದ್ಧತೆಗಳನ್ನು ನಡೆಸಿದ್ದು, ವಿದ್ಯಾಭ್ಯಾಸ ಬೋರ್ಡ್‌ ಅದಕ್ಕಾಗಿ ಆರು ಕ್ಯಾಮರಾ ಯುನಿಟ್ ಗಳ ಕ್ಲಾಸ್ ರೂಂಗಳು ,22 ಪರಿಣತರಾದ ಅಧ್ಯಾಪಕರನ್ನು ನೇಮಕಗೊಳಿಸಿದೆ.  ತರಗತಿ ಆರಂಭದಿಂದ ಕೊನೆಯವರೆಗೂ ವಿದ್ಯಾರ್ಥಿ ಜೊತೆ ಪೋಷಕರು ಕುಳಿತಿರಬೇಕು.ಹೋಂ ವರ್ಕ್ ನೀಡಿದರೆ, ಅದನ್ನು ಮಾಡಿ, ಮುಂದೆ ಮದ್ರಸಗಳಲ್ಲಿ ತರಗತಿ ಆರಂಭಗೊಳ್ಳುವಾಗ ಮೌಲ್ಯಮಾಪನಕ್ಕಾಗಿ ಅಧ್ಯಾಪಕರಿಗೆ ತೋರಿಸಬೇಕು. ಮನೆಯಲ್ಲಿ ತರಗತಿಯ ವಾತಾವರಣವನ್ನು ಒದಗಿಸಿಕೊಟ್ಟು,ವಿದ್ಯಾರ್ಥಿಗಳಿಗೆ ಮನೆಯವರು ಸಹಕರಿಸಬೇಕು. ಅಲ್ಲದೇ, ಮದ್ರಸಾ ಹಾಗೂ ಜಮಾಅತ್ ಕಮಿಟಿಗಳು ಸೇರಿ, ಆನ್‌ಲೈನ್ ತರಗತಿಗಳು ಆಯಾ ಮದ್ರಸಗಳ ವಿದ್ಯಾರ್ಥಿಗಳಿಗೆ ಅವರವರ ಮನೆಗಳಲ್ಲಿಯೇ ಸುಲಭವಾಗಿ ತಲುಪುವಂತೆ ಎಲ್ಲಾ ರೀತಿಯಲ್ಲಿ ಸಹಕಾರವನ್ನು ನೀಡಬೇಕು. ಮದ್ರಸಗಳು ತ...

Payyakki Usthad Islamic Academy -Ansariya College of Islamic Science10th Anniversary & Convocation Program-#Photo Gallery......