ವಿಷಯಕ್ಕೆ ಹೋಗಿ

ಕಾರ್ನಾಡರ "ಯಯಾತಿ" ಈ ದಿನದ ಓದು...

{ತಿಂಗಳುಗಳ ಹಿಂದೆ ಸೆಮಿನಾರೊಂದರಲ್ಲಿ ಭಾಗವಹಿಸಲು ಶಿವಮೊಗ್ಗ ತಲುಪಿದ್ದೆ. ಜೊತೆಗೆ ನಾಲ್ಕೈದು ಗೆಳೆಯರಿದ್ದರು. ಸೆಮಿನಾರ್ ಮುಗಿಸಿ ಹಿಂತಿರುಗುವಾಗ ಪುಸ್ತಕ ಪ್ರೇಮಿ ಗೆಳೆಯನೊಬ್ಬನ ಜೊತೆ ಅಲ್ಲೇ ಬಸ್ ಸ್ಟಾಂಡ್ ಹತ್ತಿರದ ಒಂದು ಪುಸ್ತಕದಂಗಡಿಗೆ ಹೋದೆವು. ಆತನಿಗೆ ಮರುಭೂಮಿಯ ಹೂವು ಪುಸ್ತಕ ಬೇಕೆಂದಿದ್ದ. ನಾನು ಯಯಾತಿ ಬೇಕೆಂದೆ. ಅಲ್ಲಿಂದ ಹೊರಡುವಾಗ ಅವತ್ತೇ ಓದಿ ಮುಗಿಸಬೇಕು ಅಂದು ಕೊಂಡ ನನಗೆ ಓದುಭಾಗ್ಯ ದೊರಕಿದ್ದು ಮಾತ್ರ ಇಂದು..ಏನೇ ಆಗಲಿ..ಕೊನೆಗೂ ಈ ಕೋವಿಡ್ ದಿನಗಳು ಕೊನೆಗೂ ಕಾರ್ನಾಡರನ್ನು ಓದಿಸುವಂತೆ ಮಾಡಿದೆ...}

ಅಂದ ಹಾಗೆ ಯಯಾತಿ ಗಿರೀಶ ಕಾರ್ನಾಡ ಅವರ ೧೯೬೧ ರಲ್ಲಿ ಪ್ರಕಟವಾದ ಮೊದಲ ನಾಟಕ. ಕೀರ್ತಿನಾಥ ಕುರ್ತಕೋಟಿ ಅವರು ಮುನ್ನುಡಿ, ಹಾಗೂ ಜಿ.ಎಸ್ ಅಮೂರ ಹಿನ್ನುಡಿ ಬರೆದಿದ್ದಾರೆ. ನಾಲ್ಕಂಕಗಳಿರುವ ಪ್ರಸ್ತುತ ನಾಟಕದಲ್ಲಿ ಪಾತ್ರಗಳಾಗಿ ದೇವಯಾನಿ, ಸ್ವರ್ಣಲತೆ, ಶರ್ಮಿಷ್ಠೆ, ಯಯಾತಿ, ಪುರು, ಚಿತ್ರಲೇಖೆ ಮುಂತಾದವರು ಬರುತ್ತಾರೆ.







ಕುರ್ತಕೋಟಿ ಅವರು ಹೇಳಿರುವಂತೆ, ಈ ನಾಟಕದಲ್ಲಿ ಮನುಷ್ಯ ಸಾಹಸದ ದುರಂತ ಚಿತ್ರವೊಂದನ್ನು ರೂಪಿಸುವ ಹವಣಿಕೆಯು ಎದ್ದು ಕಾಣುತ್ತದೆ. ನಾಟಕದ ಆಧುನಿಕತೆಯ ಅಂಶವೆಂದೇ ಅದು, ಇಲ್ಲಿಯ ಪಾತ್ರಗಳೆಲ್ಲವೂ ಮನುಷ್ಯನ ಸಾಮಾನ್ಯ ಮಟ್ಟವನ್ನೂ ಮೀರುವ ಹಂಬಲವನ್ನಿಟ್ಟುಕೊಂಡವುಗಳು. ಆದರೆ ಮನುಷ್ಯನ ದೌರ್ಬಲ್ಯಗಳಿಂದಲೇ ಅವುಗಳ ಹಂಬಲ ಪೂರ್ಣಗೊಳ್ಳುವುದಿಲ್ಲ. ಯಯಾತಿ ಅಮರತ್ವದ ಆಕಾಂಕ್ಷೆ, ದೇವಯಾನಿಯ ಪ್ರೀತಿಯ ಹಂಬಲ, ಶರ್ಮಿಷ್ಠಯ ಮುನುಷ್ಯತ್ವದಾಸೆ, ಪುರುವಿನ ವ್ಯಕ್ತಿತ್ವದ ಶೋಧ ಇವೆಲ್ಲ ತಾತ್ವಿಕ ಕಾಮನೆಗಳಾಗಿವೆ. ಕಾರ್ನಾಡರೇ ಹೇಳಿದಂತೆ, ವಾಚಕರು ಪುರುವಿನ ಕೊನೆಯ ವಾಕ್ಯದೊಡನೆ ತಾವೂ "ಇದೆಲ್ಲದರ ಅರ್ಥವೇನು ದೇವರೇ, ಇದರ ಅರ್ಥವೇನು..? ಎಂದು ಗದ್ದಲವೆಬ್ಬಿಸಿದರೆ, ಆ ಗದ್ದಲದಲ್ಲಿ ನನ್ನ ಧ್ವನಿಯೂ ಕೂಡಿದೆ" ಎಂದು ಮಾತ್ರ ಹೇಳಬಯಸುತ್ತೇನೆ" ಅಂದಂತೆ ನಾಟಕ ಕೊನೆಯಾದಾಗ ಓದುಗನಾಗಿ ನನಗೂ ಕೂಡಾ ಆ ಗದ್ದಲದ ನಡುವೆ ಇದ್ದಂತೆ ಅನಿಸಿತು...

(ನನ್ನ ಹೃದಯಾಂತರಾಳದಲ್ಲಿ ಅಕ್ಷರ ದೀಪ ಬೆಳಗಿದ ನನ್ನೆಲ್ಲಾ ಗುರುವೃಂದಕ್ಕೆ ಕೃತಜ್ಞ.. ಹಾಗೇ ನನ್ನವರಾದ ಎಲ್ಲರಿಗೂ.)

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ರಂಝಾನ್ ನೀಡುವ ಒಳಿತಿನ ಸಂದೇಶ...

-ನಿಝಾಮ್ ಅನ್ಸಾರಿ ಮತ್ತೆ ರಂಝಾನ್ ತಿಂಗಳ ಆಗಮನವಾಗಿದೆ. ಪ್ರತಿ ವರ್ಷವೂ ರಂಝಾನ್ ಬಗ್ಗೆ ಬರೆಯುವಾಗ ಅದರ ಶ್ರೇಷ್ಟತೆ, ವ್ರತಾನುಷ್ಟಾನದ ಪ್ರಾಧಾನ್ಯತೆಯನ್ನೇ ಹೆಚ್ಚಿನವರೂ ಬರೆಯುತ್ತಾರೆ. ಅದನ್ನೇ ಮಸೀದಿಗಳಲ್ಲೂ ಹೇಳುವುದಿದೆ. ಒಳ್ಳೆಯದೇ. ಕಾರಣ ಆಧುನಿಕ ಜನರು ಧರ್ಮದ ಪ್ರತಿಯೊಂದು ವಿಷಯಗಳಲ್ಲೂ ಸಡಿಲಿಕೆ ಬಯಸುತ್ತಾರೆ. ಅಂದರೆ ಅವರವರ ಜೀವನಕ್ರಮಗಳಿಗನುಸಾರವಾಗಿ ಧರ್ಮದ ನಿಯಮಗಳನ್ನು ಗಾಳಿಗೆ ತೂರುವಂತಹ ಕಾರ್ಯಗಳು ಎಲ್ಲಾ ಕಡೆ ನಡೆಯುತ್ತಲಿದೆ. ಹಾಗಿರುವಾಗ ರಂಝಾನ್ ವ್ರತಾಚರಣೆಯ ಮಹತ್ವವನ್ನು ಪ್ರತಿ ಬಾರಿಯೂ ಪ್ರಭಾಷಣ ವೇದಿಕೆಗಳಲ್ಲಿ, ಮಸೀದಿಗಳಲ್ಲಿ ಜನ ಸಾಮಾನ್ಯರಿಗೆ ನೆನಪಿಸುತ್ತಲಿರುವುದು ಸ್ವಾಗತಾರ್ಹವಾದುದು. ಮತ್ತು ಪ್ರಯೋಜನಕಾರಿಯೂ ಕೂಡಾ. ಯಾಕೆ ಈ ರೀತಿ ಬರೆದೆ ಅಂತ ಕೇಳಿದರೆ, ಇತ್ತೀಚೆಗೆ ವಾಟ್ಸಾಪ್ ನೊಳಗೆ ಕಣ್ಣಾಡಿಸಿದಾಗ ಕಂಡ ಕೆಲವೊಂದು ಸಂದೇಶಗಳು ಧರ್ಮದ ಬಗ್ಗೆ ಕೀಳರಿಮೆಯ ಭಾವ ತೋರುವವರಿಗೆ ತಕ್ಕ ಉತ್ತರ ನೀಡುವಂತಿತ್ತು. ಬಡ ಕುಟುಂಬಕ್ಕೆ ಮನೆ ಕಟ್ಟುವ ಸಹಾಯಾರ್ಥ ಕಲೆಕ್ಷನ್, ರಂಝಾನ್ ನಂತರದ ಬಡ ಹೆಣ್ಮಕ್ಕಳ ಮದುವೆಗಾಗಿ, ಮುಅಲ್ಲಿಂಗಳಿಗಾಗಿ ಹೀಗೇ ಹಲವು ರೀತಿಯಲ್ಲಿ ಯುವ-ವಯಸ್ಕರು ಸೇರಿ ಸಮುದಾಯದೊಂದಿಗಿನ ಸಾಮಾಜಿಕ ಕಾಳಜಿಗಾಗಿ ರಂಝಾನ್ ಅನ್ನು ಉಪಯೋಗಿಸುತ್ತಿದ್ದಾರೆನ್ನುವಾಗ ಧರ್ಮದ ಮನದಲ್ಲಿ ಅಭಿಮಾನ ಮೂಡುತ್ತಿದೆ. ಬುರ್ಖಾದ ವಿಚಾರದಲ್ಲಿ ಬಲತ್ಕಾರ ಮಾಡಲಾಗುತ್ತದೆ ಎಂದು ಆರೋಪಿಸುತ್ತಿರುವಾಗ, ಆ ವಾದವನ್ನು ವಿರ...

ನಾನುಗೌರಿ ವೆಬ್ ನಲ್ಲಿ ಪ್ರಕಟಗೊಂಡ ಬರಹಗಳು..ಓದಲು ಈ ಲಿಂಕ್ ಉಪಯೋಗಿಸಿ

-ನಿಝಾಮ್ ಅನ್ಸಾರಿ ಭಾರತದ ಉನ್ನತ ಶಿಕ್ಷಣದ ಮಹಾನ್‌ ಆಶಯಕ್ಕೆ ಎಳ್ಳುನೀರು ಬಿಡುತ್ತಿರುವ ಪ್ರಭುತ್ವ… http://naanugauri.com/indian-higher-education-shrinking-down- **************************************************************** ಲಾಕ್‌ಡೌನ್‌: ತುತ್ತು ಅನ್ನಕ್ಕಾಗಿ ಗುಳೆ ಹೊರಟವರ ಕತೆ http://naanugauri.com/lockdown-story-of-labour/ via @Naanu gauri ***************************************************************** ಪೌರತ್ವ ವಸೂಲಿ – ನಾಝಿ ಜರ್ಮನಿಯಿಂದ ಕಲಿಯಬೇಕಾದುದು… http://naanugauri.com/citizen-amendment-act-same-thing-happen-in-german-80-years-back- ****************************************************************** ಪ್ಲೇಗ್ ಹಾಗೂ ಕೋವಿಡ್ 19 ನಡುವೆ ಕೆಲವು ಹೋಲಿಕೆಗಳು http://naanugauri.com/covid-19-and-bubonic-plague-this-lead-to-renaissance/ via @Naanu gauri

ಅಳಿವಿನಂಚಿನಲ್ಲಿರುವ ಸಾಂಪ್ರದಾಯಿಕ ಕೃಷಿ ಪರಂಪರೆ-* ನಿಝಾಮ್ ಅನ್ಸಾರಿ

ಭಾರತವು ಕೃಷಿ ಅವಲಂಬಿತ ಹಳ್ಳಿಗಳನ್ನೊಳಗೊಂಡ ಸಮೃದ್ಧ ದೇಶ. ದೇಶದ ಬೆಳವಣಿಗೆಯಲ್ಲಿ ವ್ಯವಸಾಯದ ಪಾತ್ರ ಬಹುಮುಖ್ಯವಾದುದು. ತಂತ್ರಜ್ಞಾನವು ದೇಶಕ್ಕೆ ಯಾವ ರೀತಿಯಲ್ಲಿ ಕೊಡುಗೆಗಳನ್ನು ನೀಡುತ್ತವೆಯೋ ಅದೇ ರೀತಿಯಲ್ಲಿ ಕೃಷಿಯ ಕೊಡುಗೆಯೂ ಕೂಡಾ ಅಪಾರವಾದುದು. ಆದರೆ ಇತ್ತೀಚಿನ ದಿನಗಳಲ್ಲಿ ಹಳ್ಳಿಗಳಲ್ಲಿ ವ್ಯವಸಾಯವು ಇಳಿಮುಖವಾಗುತ್ತಿದೆ. ಕೇವಲ ಬೆರಳೆಣಿಕೆಯಷ್ಟು ಮಂದಿ ಮಾತ್ರ ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವವರನ್ನು ಕಾಣಬಹುದಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿನ ಜನರು ವಿದ್ಯಾವಂತರಾಗುತ್ತಲೇ ತಮ್ಮ ಪಾರಂಪರಿಕ ಕುಲ ಕಸುಬನ್ನು ನಿರ್ಲಕ್ಷಿಸಿ ನಗರಗಳತ್ತ ವಲಸೆ ಹೋಗುತ್ತಿದ್ದಾರೆ.ಕೈ ಕೆಸರು ಮಾಡಿಕೊಂಡು ದುಡಿಯುವವರ ಕೊರತೆ ಅಗಾಧವಾಗಿ ಎದ್ದು ಕಾಣುತ್ತಿದೆ. ಇಂದಿನ ನವ ತಲೆಮಾರು ಹಳ್ಳಿಗಳು ಕೇವಲ ವೃದ್ಧರಿಗೆ ಮಾತ್ರ ಯೋಗ್ಯವಾದುದು ಎಂದು ತಿಳಿದಂತಿದೆ. `ನೇಗಿಲಾ ಹಿಡಿದಾ ಹೊಲದಲಿ ಹಾಡುತ ಉಳುವಾ ಯೋಗಿಯ ನೋಡಲ್ಲಿ’ ಎಂದು ಕುವೆಂಪುರಂತಹ ಖ್ಯಾತ ಕವಿಗಳಿಂದ ಕೊಂಡಾಡಲ್ಪಟ್ಟ ಕೃಷಿ ಚಟುವಟಿಕೆಗಳಿಂದು ಕಣ್ಮರೆಯಾಗಿದೆ. ನೇಗಿಲಿನಂತಹ ಕೃಷಿ ಸಲಕರಣೆಗಳು ಇಂದು ಮ್ಯೂಸಿಯಂ ಸೇರಿಬಿಟ್ಟಿವೆ. ಇದರೊಂದಿಗೆ ಅತ್ಯಂತ ಸುಂದರವಾದ ಕೃಷಿ ಪರಂಪರೆ ಮೂಲೆಗುಂಪಾಗುತ್ತಿದೆ. ಹಳೆಯ ಕಾಲದ ಸಾಂಪ್ರದಾಯಿಕ ಬೇಸಾಯಕ್ಕೆ ಉಪಯೋಗವಾಗುತ್ತಿದ್ದ ಪರಿಕರಗಳ ಸ್ಥಾನವನ್ನು ಟ್ರಾಕ್ಟರ್,ಟಿಲ್ಲರ್ ಗಳಂತಹ ಯಂತ್ರಗಳು ಆಕ್ರಮಿಸಿಕೊಂಡಿವೆ. ಭತ್ತ ನಾಟಿ ಮಾಡುವ ಮಹಿಳೆಯರಿಂದ ಕೇಳಿ ಬರು...