ವಿಷಯಕ್ಕೆ ಹೋಗಿ

ಕಾರ್ನಾಡರ "ಯಯಾತಿ" ಈ ದಿನದ ಓದು...

{ತಿಂಗಳುಗಳ ಹಿಂದೆ ಸೆಮಿನಾರೊಂದರಲ್ಲಿ ಭಾಗವಹಿಸಲು ಶಿವಮೊಗ್ಗ ತಲುಪಿದ್ದೆ. ಜೊತೆಗೆ ನಾಲ್ಕೈದು ಗೆಳೆಯರಿದ್ದರು. ಸೆಮಿನಾರ್ ಮುಗಿಸಿ ಹಿಂತಿರುಗುವಾಗ ಪುಸ್ತಕ ಪ್ರೇಮಿ ಗೆಳೆಯನೊಬ್ಬನ ಜೊತೆ ಅಲ್ಲೇ ಬಸ್ ಸ್ಟಾಂಡ್ ಹತ್ತಿರದ ಒಂದು ಪುಸ್ತಕದಂಗಡಿಗೆ ಹೋದೆವು. ಆತನಿಗೆ ಮರುಭೂಮಿಯ ಹೂವು ಪುಸ್ತಕ ಬೇಕೆಂದಿದ್ದ. ನಾನು ಯಯಾತಿ ಬೇಕೆಂದೆ. ಅಲ್ಲಿಂದ ಹೊರಡುವಾಗ ಅವತ್ತೇ ಓದಿ ಮುಗಿಸಬೇಕು ಅಂದು ಕೊಂಡ ನನಗೆ ಓದುಭಾಗ್ಯ ದೊರಕಿದ್ದು ಮಾತ್ರ ಇಂದು..ಏನೇ ಆಗಲಿ..ಕೊನೆಗೂ ಈ ಕೋವಿಡ್ ದಿನಗಳು ಕೊನೆಗೂ ಕಾರ್ನಾಡರನ್ನು ಓದಿಸುವಂತೆ ಮಾಡಿದೆ...}

ಅಂದ ಹಾಗೆ ಯಯಾತಿ ಗಿರೀಶ ಕಾರ್ನಾಡ ಅವರ ೧೯೬೧ ರಲ್ಲಿ ಪ್ರಕಟವಾದ ಮೊದಲ ನಾಟಕ. ಕೀರ್ತಿನಾಥ ಕುರ್ತಕೋಟಿ ಅವರು ಮುನ್ನುಡಿ, ಹಾಗೂ ಜಿ.ಎಸ್ ಅಮೂರ ಹಿನ್ನುಡಿ ಬರೆದಿದ್ದಾರೆ. ನಾಲ್ಕಂಕಗಳಿರುವ ಪ್ರಸ್ತುತ ನಾಟಕದಲ್ಲಿ ಪಾತ್ರಗಳಾಗಿ ದೇವಯಾನಿ, ಸ್ವರ್ಣಲತೆ, ಶರ್ಮಿಷ್ಠೆ, ಯಯಾತಿ, ಪುರು, ಚಿತ್ರಲೇಖೆ ಮುಂತಾದವರು ಬರುತ್ತಾರೆ.







ಕುರ್ತಕೋಟಿ ಅವರು ಹೇಳಿರುವಂತೆ, ಈ ನಾಟಕದಲ್ಲಿ ಮನುಷ್ಯ ಸಾಹಸದ ದುರಂತ ಚಿತ್ರವೊಂದನ್ನು ರೂಪಿಸುವ ಹವಣಿಕೆಯು ಎದ್ದು ಕಾಣುತ್ತದೆ. ನಾಟಕದ ಆಧುನಿಕತೆಯ ಅಂಶವೆಂದೇ ಅದು, ಇಲ್ಲಿಯ ಪಾತ್ರಗಳೆಲ್ಲವೂ ಮನುಷ್ಯನ ಸಾಮಾನ್ಯ ಮಟ್ಟವನ್ನೂ ಮೀರುವ ಹಂಬಲವನ್ನಿಟ್ಟುಕೊಂಡವುಗಳು. ಆದರೆ ಮನುಷ್ಯನ ದೌರ್ಬಲ್ಯಗಳಿಂದಲೇ ಅವುಗಳ ಹಂಬಲ ಪೂರ್ಣಗೊಳ್ಳುವುದಿಲ್ಲ. ಯಯಾತಿ ಅಮರತ್ವದ ಆಕಾಂಕ್ಷೆ, ದೇವಯಾನಿಯ ಪ್ರೀತಿಯ ಹಂಬಲ, ಶರ್ಮಿಷ್ಠಯ ಮುನುಷ್ಯತ್ವದಾಸೆ, ಪುರುವಿನ ವ್ಯಕ್ತಿತ್ವದ ಶೋಧ ಇವೆಲ್ಲ ತಾತ್ವಿಕ ಕಾಮನೆಗಳಾಗಿವೆ. ಕಾರ್ನಾಡರೇ ಹೇಳಿದಂತೆ, ವಾಚಕರು ಪುರುವಿನ ಕೊನೆಯ ವಾಕ್ಯದೊಡನೆ ತಾವೂ "ಇದೆಲ್ಲದರ ಅರ್ಥವೇನು ದೇವರೇ, ಇದರ ಅರ್ಥವೇನು..? ಎಂದು ಗದ್ದಲವೆಬ್ಬಿಸಿದರೆ, ಆ ಗದ್ದಲದಲ್ಲಿ ನನ್ನ ಧ್ವನಿಯೂ ಕೂಡಿದೆ" ಎಂದು ಮಾತ್ರ ಹೇಳಬಯಸುತ್ತೇನೆ" ಅಂದಂತೆ ನಾಟಕ ಕೊನೆಯಾದಾಗ ಓದುಗನಾಗಿ ನನಗೂ ಕೂಡಾ ಆ ಗದ್ದಲದ ನಡುವೆ ಇದ್ದಂತೆ ಅನಿಸಿತು...

(ನನ್ನ ಹೃದಯಾಂತರಾಳದಲ್ಲಿ ಅಕ್ಷರ ದೀಪ ಬೆಳಗಿದ ನನ್ನೆಲ್ಲಾ ಗುರುವೃಂದಕ್ಕೆ ಕೃತಜ್ಞ.. ಹಾಗೇ ನನ್ನವರಾದ ಎಲ್ಲರಿಗೂ.)

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂದಿನಿಂದ 'ಸಮಸ್ತ'ದ ಆನ್ ಲೈನ್ ತರಗತಿಗಳು ಆರಂಭ

ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಒಕ್ಕೂಟದ (SKJU)ಅಧೀನದಲ್ಲಿ‌ ಕಾರ್ಯಾಚರಿಸುವ ಸಮಸ್ತ ಕೇರಳ ಇಸ್ಲಾಂ ಮತ ವಿದ್ಯಾಭ್ಯಾಸ ಬೋರ್ಡ್‌ ಅಂಗೀಕೃತ ಮದ್ರಸಗಳ ವಿದ್ಯಾರ್ಥಿಗಳಿಗೆ ನವ ಅಧ್ಯಯನ ವರ್ಷ ಇಂದಿನಿಂದ ಆರಂಭಗೊಂಡಿದೆ. ವಿಶೇಷ ಅಂದ್ರೆ, ಈ ಬಾರಿ ತರಗತಿಗಳ ಪ್ರಾರಂಭೋತ್ಸವದ ಸಂಭ್ರಮಗಳಿಲ್ಲದೆ, ಮದ್ರಸಾ ಕಟ್ಟಡಗಳು ತೆರೆಯದೇ, ಹತ್ತು ಸಾವಿರಕ್ಕೂ ಮಿಕ್ಕ ಮದ್ರಸಗಳ ಹನ್ನೆರಡು ಲಕ್ಷ ವಿದ್ಯಾರ್ಥಿಗಳು ಅವರವರ ಮನೆಗಳಲ್ಲಿಯೇ ಕುಳಿತು ತರಗತಿಗಳಲ್ಲಿ ಪಾಲ್ಗೊಳ್ಳುತ್ತಿರುವುದು ಎಂಬುದು.  ಆನ್ ಲೈನ್ ತರಗತಿಗಳಿಗಾಗಿ, ಸಮಸ್ತ ಈ ಹಿಂದೆಯೇ ಎಲ್ಲಾ ಸಿದ್ಧತೆಗಳನ್ನು ನಡೆಸಿದ್ದು, ವಿದ್ಯಾಭ್ಯಾಸ ಬೋರ್ಡ್‌ ಅದಕ್ಕಾಗಿ ಆರು ಕ್ಯಾಮರಾ ಯುನಿಟ್ ಗಳ ಕ್ಲಾಸ್ ರೂಂಗಳು ,22 ಪರಿಣತರಾದ ಅಧ್ಯಾಪಕರನ್ನು ನೇಮಕಗೊಳಿಸಿದೆ.  ತರಗತಿ ಆರಂಭದಿಂದ ಕೊನೆಯವರೆಗೂ ವಿದ್ಯಾರ್ಥಿ ಜೊತೆ ಪೋಷಕರು ಕುಳಿತಿರಬೇಕು.ಹೋಂ ವರ್ಕ್ ನೀಡಿದರೆ, ಅದನ್ನು ಮಾಡಿ, ಮುಂದೆ ಮದ್ರಸಗಳಲ್ಲಿ ತರಗತಿ ಆರಂಭಗೊಳ್ಳುವಾಗ ಮೌಲ್ಯಮಾಪನಕ್ಕಾಗಿ ಅಧ್ಯಾಪಕರಿಗೆ ತೋರಿಸಬೇಕು. ಮನೆಯಲ್ಲಿ ತರಗತಿಯ ವಾತಾವರಣವನ್ನು ಒದಗಿಸಿಕೊಟ್ಟು,ವಿದ್ಯಾರ್ಥಿಗಳಿಗೆ ಮನೆಯವರು ಸಹಕರಿಸಬೇಕು. ಅಲ್ಲದೇ, ಮದ್ರಸಾ ಹಾಗೂ ಜಮಾಅತ್ ಕಮಿಟಿಗಳು ಸೇರಿ, ಆನ್‌ಲೈನ್ ತರಗತಿಗಳು ಆಯಾ ಮದ್ರಸಗಳ ವಿದ್ಯಾರ್ಥಿಗಳಿಗೆ ಅವರವರ ಮನೆಗಳಲ್ಲಿಯೇ ಸುಲಭವಾಗಿ ತಲುಪುವಂತೆ ಎಲ್ಲಾ ರೀತಿಯಲ್ಲಿ ಸಹಕಾರವನ್ನು ನೀಡಬೇಕು. ಮದ್ರಸಗಳು ತ...

ಅರಬಿ ಭಾಷೆ : ಇತಿಹಾಸ ಮತ್ತು ವರ್ತಮಾನ

✒ ನಿಝಾಮ್ ಅನ್ಸಾರಿ ಭಾಷೆ ಮನುಷ್ಯನ ಸವಿಶೇಷತೆಗಳಲ್ಲೊಂದು. ಚಿಂತನೆಗಳು ಮತ್ತು ಅಭಿರುಚಿಗಳ ಆಶಯವನ್ನು ಅಭಿವ್ಯಕ್ತಿಗೊಳಿಸುವ ಅಥವಾ ಹೊರ ಹಾಕುವ ಶಬ್ದಗಳ ಒಂದು ಸಮೂಹವಾಗಿದೆ ಇದು. ಪ್ರಪಂಚದಲ್ಲಿ ಇಂದು ಹಲವು ಅಧಿಕೃತವಾಗಿರುವ ಭಾಷೆಗಳು ಅಸ್ತಿತ್ವದಲ್ಲಿವೆ.ಅದರಲ್ಲೂ ಪ್ರಾದೇಶಿಕ ಭಾಷೆಗಳು ಬೇರೇನೆ. ಆದರೆ ಈ ಎಲ್ಲಾ ಭಾಷೆಗಳ ಪೈಕಿ ರಾಜನಂತೆ ಇರೋದು ಅರಬಿ ಭಾಷೆ ಮಾತ್ರ . ಒಂದು ಕಾಲದಲ್ಲಿ ಇಡೀ ಜಗತ್ತನ್ನೇ ನಿಯಂತ್ರಿಸುವ ತಾಕತ್ತಿದ್ದ ಭಾಷೆಯಾಗಿತ್ತು ಅರಬಿ. ಯಾವ ರೀತಿಯಲ್ಲಿ ಈಗ ಆಂಗ್ಲ ಭಾಷೆಗೆ ಪ್ರಾಧಾನ್ಯತೆ, ಜಾಗತಿಕ ಅಂಗೀಕಾರ ಇದೆಯೋ ಅದೇ ರೀತಿಯಲ್ಲಿ ಅಂದು ಅರಬಿ ಭಾಷೆ ಸ್ಥಾನ ಪಡೆದಿತ್ತು. ಬಲದಿಂದ ಎಡಕ್ಕೆ ಇರುವ ಕೆಲವೊಂದು ಭಾಷೆಗಳಲ್ಲಿ ಅರಬೀ ಕೂಡಾ ಒಂದು. ಸೈಮಟಿಕ್ ಭಾಷೆಗಳಲ್ಲೊಂದಾದ ಅರಬಿ ಜಗತ್ತಿನ ಅತ್ಯಂತ ಪುರಾತನ ಭಾಷೆಗಳ ಪೈಕಿ ಒಂದು ಕೂಡಾ . ಐಕ್ಯ ರಾಷ್ಟ್ರ ಸಂಘದ ಅಂಗೀಕೃತ ಭಾಷೆಯಾದ ಅರಬಿ, 26 ದೇಶಗಳ ಅಧಿಕೃತ ಭಾಷೆಯಾಗಿದೆ‌. ಆಫ್ರಿಕನ್ ಯೂನಿಯನ್ ಆರ್ಗನೈಸೇಷನ್ ಇಸ್ಲಾಮಿಕ್ ಕಾನ್ಫೆರನ್ಸ್ ನಂತಹ ಹಲವು ಅಂತಾರಾಷ್ಟ್ರೀಯ ಸಂಸ್ಥೆಗಳು ಅರಬಿ ಭಾಷೆಯನ್ನು ಅಧಿಕೃತ ಭಾಷೆಯಾಗಿ ಅಂಗೀಕರಿಸಿದೆ. ಅರಬಿ ಭಾಷೆ: ಹುಟ್ಟು ಮತ್ತು ಬೆಳವಣಿಗೆ ಬಿ.ಸಿ 1900 ರಲ್ಲಿ ಜೀವಿಸಿದ್ದ 'ಯಅರೂಬ್ ಇಬ್ನ್ ಖಹ್ತಾನ್' ಎಂಬವರನ್ನು ಅರಬಿ ಭಾಷೆಯ ಪಿತಾಮಹ ಎಂದು ಕರೆಯಲಾಗುತ್ತದೆ. ಇವರ ನಾಮಕ್ಕೆ ಹೊಂದಿಕೊಂಡು 'ಅರಬಿ' ಎಂಬ ಹೆಸರು...

Payyakki Usthad Islamic Academy -Ansariya College of Islamic Science10th Anniversary & Convocation Program-#Photo Gallery......