ವಿಷಯಕ್ಕೆ ಹೋಗಿ

ಕಾರ್ನಾಡರ "ಯಯಾತಿ" ಈ ದಿನದ ಓದು...

{ತಿಂಗಳುಗಳ ಹಿಂದೆ ಸೆಮಿನಾರೊಂದರಲ್ಲಿ ಭಾಗವಹಿಸಲು ಶಿವಮೊಗ್ಗ ತಲುಪಿದ್ದೆ. ಜೊತೆಗೆ ನಾಲ್ಕೈದು ಗೆಳೆಯರಿದ್ದರು. ಸೆಮಿನಾರ್ ಮುಗಿಸಿ ಹಿಂತಿರುಗುವಾಗ ಪುಸ್ತಕ ಪ್ರೇಮಿ ಗೆಳೆಯನೊಬ್ಬನ ಜೊತೆ ಅಲ್ಲೇ ಬಸ್ ಸ್ಟಾಂಡ್ ಹತ್ತಿರದ ಒಂದು ಪುಸ್ತಕದಂಗಡಿಗೆ ಹೋದೆವು. ಆತನಿಗೆ ಮರುಭೂಮಿಯ ಹೂವು ಪುಸ್ತಕ ಬೇಕೆಂದಿದ್ದ. ನಾನು ಯಯಾತಿ ಬೇಕೆಂದೆ. ಅಲ್ಲಿಂದ ಹೊರಡುವಾಗ ಅವತ್ತೇ ಓದಿ ಮುಗಿಸಬೇಕು ಅಂದು ಕೊಂಡ ನನಗೆ ಓದುಭಾಗ್ಯ ದೊರಕಿದ್ದು ಮಾತ್ರ ಇಂದು..ಏನೇ ಆಗಲಿ..ಕೊನೆಗೂ ಈ ಕೋವಿಡ್ ದಿನಗಳು ಕೊನೆಗೂ ಕಾರ್ನಾಡರನ್ನು ಓದಿಸುವಂತೆ ಮಾಡಿದೆ...}

ಅಂದ ಹಾಗೆ ಯಯಾತಿ ಗಿರೀಶ ಕಾರ್ನಾಡ ಅವರ ೧೯೬೧ ರಲ್ಲಿ ಪ್ರಕಟವಾದ ಮೊದಲ ನಾಟಕ. ಕೀರ್ತಿನಾಥ ಕುರ್ತಕೋಟಿ ಅವರು ಮುನ್ನುಡಿ, ಹಾಗೂ ಜಿ.ಎಸ್ ಅಮೂರ ಹಿನ್ನುಡಿ ಬರೆದಿದ್ದಾರೆ. ನಾಲ್ಕಂಕಗಳಿರುವ ಪ್ರಸ್ತುತ ನಾಟಕದಲ್ಲಿ ಪಾತ್ರಗಳಾಗಿ ದೇವಯಾನಿ, ಸ್ವರ್ಣಲತೆ, ಶರ್ಮಿಷ್ಠೆ, ಯಯಾತಿ, ಪುರು, ಚಿತ್ರಲೇಖೆ ಮುಂತಾದವರು ಬರುತ್ತಾರೆ.







ಕುರ್ತಕೋಟಿ ಅವರು ಹೇಳಿರುವಂತೆ, ಈ ನಾಟಕದಲ್ಲಿ ಮನುಷ್ಯ ಸಾಹಸದ ದುರಂತ ಚಿತ್ರವೊಂದನ್ನು ರೂಪಿಸುವ ಹವಣಿಕೆಯು ಎದ್ದು ಕಾಣುತ್ತದೆ. ನಾಟಕದ ಆಧುನಿಕತೆಯ ಅಂಶವೆಂದೇ ಅದು, ಇಲ್ಲಿಯ ಪಾತ್ರಗಳೆಲ್ಲವೂ ಮನುಷ್ಯನ ಸಾಮಾನ್ಯ ಮಟ್ಟವನ್ನೂ ಮೀರುವ ಹಂಬಲವನ್ನಿಟ್ಟುಕೊಂಡವುಗಳು. ಆದರೆ ಮನುಷ್ಯನ ದೌರ್ಬಲ್ಯಗಳಿಂದಲೇ ಅವುಗಳ ಹಂಬಲ ಪೂರ್ಣಗೊಳ್ಳುವುದಿಲ್ಲ. ಯಯಾತಿ ಅಮರತ್ವದ ಆಕಾಂಕ್ಷೆ, ದೇವಯಾನಿಯ ಪ್ರೀತಿಯ ಹಂಬಲ, ಶರ್ಮಿಷ್ಠಯ ಮುನುಷ್ಯತ್ವದಾಸೆ, ಪುರುವಿನ ವ್ಯಕ್ತಿತ್ವದ ಶೋಧ ಇವೆಲ್ಲ ತಾತ್ವಿಕ ಕಾಮನೆಗಳಾಗಿವೆ. ಕಾರ್ನಾಡರೇ ಹೇಳಿದಂತೆ, ವಾಚಕರು ಪುರುವಿನ ಕೊನೆಯ ವಾಕ್ಯದೊಡನೆ ತಾವೂ "ಇದೆಲ್ಲದರ ಅರ್ಥವೇನು ದೇವರೇ, ಇದರ ಅರ್ಥವೇನು..? ಎಂದು ಗದ್ದಲವೆಬ್ಬಿಸಿದರೆ, ಆ ಗದ್ದಲದಲ್ಲಿ ನನ್ನ ಧ್ವನಿಯೂ ಕೂಡಿದೆ" ಎಂದು ಮಾತ್ರ ಹೇಳಬಯಸುತ್ತೇನೆ" ಅಂದಂತೆ ನಾಟಕ ಕೊನೆಯಾದಾಗ ಓದುಗನಾಗಿ ನನಗೂ ಕೂಡಾ ಆ ಗದ್ದಲದ ನಡುವೆ ಇದ್ದಂತೆ ಅನಿಸಿತು...

(ನನ್ನ ಹೃದಯಾಂತರಾಳದಲ್ಲಿ ಅಕ್ಷರ ದೀಪ ಬೆಳಗಿದ ನನ್ನೆಲ್ಲಾ ಗುರುವೃಂದಕ್ಕೆ ಕೃತಜ್ಞ.. ಹಾಗೇ ನನ್ನವರಾದ ಎಲ್ಲರಿಗೂ.)

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕೋವಿಡ್ ಕಾಲದ ಓದು: ಚಂದ್ರನ ಚೂರು

'ಚಂದ್ರನ ಚೂರು' ಕೃತಿಯ ಹೆಸರು ಕೇಳಿದಾಗ ನಿಜವಾಗಿಯೂ ಅದೊಂದು ಕಾದಂಬರಿಯಾಗಿರಬಹುದು ಎಂದು ಭಾವಿಸಿದ್ದೆ. ಆದರೆ, ಪುಸ್ತಕ ಕೈಗೆ ತಲುಪಿದಾಗಲೇ ಗೊತ್ತಾಗಿದ್ದು, ಅದೊಂದು ಚಂದ್ರಲೋಕಕ್ಕೆ ಕೊಂಡೊಯ್ಯುವ ಅದ್ಭುತ ಕೃತಿ ಅಂತ. ತಂದೆ ಕುವೆಂಪು ಅವರ ಸಾಹಿತ್ಯದ ಹಾದಿಯಲ್ಲೇ ನಡೆದರೂ, ತೇಜಸ್ವಿಯವರ ಸಾಹಿತ್ಯವು ನಿಸರ್ಗ ವಿಸ್ಮಯ, ಭೂಗೋಳ, ಜೀವಶಾಸ್ತ್ರ, ಭತಶಾಸ್ತ್ರ, ಇತಿಹಾಸ ಹೀಗೇ ಎಲ್ಲಾ ಶಾಸ್ತ್ರಗಳ ಮಿಶ್ರಣ ರಸಾಯನ ಎಂದೇ ಹೇಳಬಹುದು. ಚಂದ್ರನ ಚೂರು ಚಂದ್ರ ಲೋಕದ ವಿಸ್ಮಯ ದೃಶ್ಯಗಳನ್ನು ಕಟ್ಟಿಕೊಡುವ ಚೊಚ್ಚಲ ಕೃತಿ. ಬಾಹ್ಯಾಕಾಶ, ಖಗೋಳ ಶಾಸ್ತ್ರ ವಿಷಯದಲ್ಲಿ ಆಸಕ್ತಿ ಇಲ್ಲದ ನನ್ನಂತವರನ್ನೂ ಇದು ಸರಾಗವಾಗಿ ಓದಿಸಿಕೊಂಡು ಹೋಗುವಂತೆ ಮಾಡುತ್ತದೆ, ಅದಕ್ಕೆ ಕಾರಣ, ತೇಜಸ್ವಿ ಅವರ ಬರವಣಿಗೆ ಹಾಗೂ ವಿವರಣೆಯ ಶೈಲಿ.. ಜಗತ್ತಿನಲ್ಲಿ ಮನುಷ್ಯನು ಚಂದ್ರನಲ್ಲಿಗೆ ಕಾಲಿಡುವುದಕ್ಕೂ ಮುನ್ನ, ಯಾವುದೆಲ್ಲಾ ರೀತಿಯ ಪರಿಶ್ರಮಗಳು ನಡೆದಿದ್ದವು ಹಾಗೂ ಭೂಮಂಡಲ ಮತ್ತು ಚಂದ್ರನ ಕುರಿತಾಘಿ ಯಾವುದೆಲ್ಲಾ ಆಯಾಮಗಳಲ್ಲಿ ಅಧ್ಯಯನಗಳಾಗಿದ್ದುವು ಎಂಬುದರ ಸಂಪೂರ್ಣ ವಿಷಯಗಳಿವೆ. ಚಂದ್ರನಲ್ಲಿ ತಲುಪಿದ ಮನುಷ್ಯನಿಗೆ ಆದ ಅನುಭವಗಳೇನು? ನೀಲ್ ಆಮ್Fಸ್ಟ್ರಾಂಗ್ ತಂಡದ ಚಂದ್ರಯಾನದ ರಸವತ್ತಾದ ಅನುಭವಗಳು, ಚಂದಿರನ ಮಣ್ಣಲ್ಲಿ ಅಮೇರಿಕದ ಫ್ಲಾಗ್ ಮತ್ತು ಬೋಡ್F ಸ್ಥಾಪಿಸಿ ಬಂದ ಆ ಧೀರ ತಂಡದ ಬೆರಗಾಗಿಸುವ ಕ್ಷಣ ಕ್ಷಣದ ವರದಿಗಳು ಈ ಕೃತಿಯ ಲೇಖನಗಳಲ್ಲಿ ಅಡಗಿದೆ. ಒಟ್ಟಿನಲ...

ಇಂದಿನಿಂದ 'ಸಮಸ್ತ'ದ ಆನ್ ಲೈನ್ ತರಗತಿಗಳು ಆರಂಭ

ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಒಕ್ಕೂಟದ (SKJU)ಅಧೀನದಲ್ಲಿ‌ ಕಾರ್ಯಾಚರಿಸುವ ಸಮಸ್ತ ಕೇರಳ ಇಸ್ಲಾಂ ಮತ ವಿದ್ಯಾಭ್ಯಾಸ ಬೋರ್ಡ್‌ ಅಂಗೀಕೃತ ಮದ್ರಸಗಳ ವಿದ್ಯಾರ್ಥಿಗಳಿಗೆ ನವ ಅಧ್ಯಯನ ವರ್ಷ ಇಂದಿನಿಂದ ಆರಂಭಗೊಂಡಿದೆ. ವಿಶೇಷ ಅಂದ್ರೆ, ಈ ಬಾರಿ ತರಗತಿಗಳ ಪ್ರಾರಂಭೋತ್ಸವದ ಸಂಭ್ರಮಗಳಿಲ್ಲದೆ, ಮದ್ರಸಾ ಕಟ್ಟಡಗಳು ತೆರೆಯದೇ, ಹತ್ತು ಸಾವಿರಕ್ಕೂ ಮಿಕ್ಕ ಮದ್ರಸಗಳ ಹನ್ನೆರಡು ಲಕ್ಷ ವಿದ್ಯಾರ್ಥಿಗಳು ಅವರವರ ಮನೆಗಳಲ್ಲಿಯೇ ಕುಳಿತು ತರಗತಿಗಳಲ್ಲಿ ಪಾಲ್ಗೊಳ್ಳುತ್ತಿರುವುದು ಎಂಬುದು.  ಆನ್ ಲೈನ್ ತರಗತಿಗಳಿಗಾಗಿ, ಸಮಸ್ತ ಈ ಹಿಂದೆಯೇ ಎಲ್ಲಾ ಸಿದ್ಧತೆಗಳನ್ನು ನಡೆಸಿದ್ದು, ವಿದ್ಯಾಭ್ಯಾಸ ಬೋರ್ಡ್‌ ಅದಕ್ಕಾಗಿ ಆರು ಕ್ಯಾಮರಾ ಯುನಿಟ್ ಗಳ ಕ್ಲಾಸ್ ರೂಂಗಳು ,22 ಪರಿಣತರಾದ ಅಧ್ಯಾಪಕರನ್ನು ನೇಮಕಗೊಳಿಸಿದೆ.  ತರಗತಿ ಆರಂಭದಿಂದ ಕೊನೆಯವರೆಗೂ ವಿದ್ಯಾರ್ಥಿ ಜೊತೆ ಪೋಷಕರು ಕುಳಿತಿರಬೇಕು.ಹೋಂ ವರ್ಕ್ ನೀಡಿದರೆ, ಅದನ್ನು ಮಾಡಿ, ಮುಂದೆ ಮದ್ರಸಗಳಲ್ಲಿ ತರಗತಿ ಆರಂಭಗೊಳ್ಳುವಾಗ ಮೌಲ್ಯಮಾಪನಕ್ಕಾಗಿ ಅಧ್ಯಾಪಕರಿಗೆ ತೋರಿಸಬೇಕು. ಮನೆಯಲ್ಲಿ ತರಗತಿಯ ವಾತಾವರಣವನ್ನು ಒದಗಿಸಿಕೊಟ್ಟು,ವಿದ್ಯಾರ್ಥಿಗಳಿಗೆ ಮನೆಯವರು ಸಹಕರಿಸಬೇಕು. ಅಲ್ಲದೇ, ಮದ್ರಸಾ ಹಾಗೂ ಜಮಾಅತ್ ಕಮಿಟಿಗಳು ಸೇರಿ, ಆನ್‌ಲೈನ್ ತರಗತಿಗಳು ಆಯಾ ಮದ್ರಸಗಳ ವಿದ್ಯಾರ್ಥಿಗಳಿಗೆ ಅವರವರ ಮನೆಗಳಲ್ಲಿಯೇ ಸುಲಭವಾಗಿ ತಲುಪುವಂತೆ ಎಲ್ಲಾ ರೀತಿಯಲ್ಲಿ ಸಹಕಾರವನ್ನು ನೀಡಬೇಕು. ಮದ್ರಸಗಳು ತ...

Payyakki Usthad Islamic Academy -Ansariya College of Islamic Science10th Anniversary & Convocation Program-#Photo Gallery......