ವಿಷಯಕ್ಕೆ ಹೋಗಿ

ಕಾರ್ನಾಡರ "ಯಯಾತಿ" ಈ ದಿನದ ಓದು...

{ತಿಂಗಳುಗಳ ಹಿಂದೆ ಸೆಮಿನಾರೊಂದರಲ್ಲಿ ಭಾಗವಹಿಸಲು ಶಿವಮೊಗ್ಗ ತಲುಪಿದ್ದೆ. ಜೊತೆಗೆ ನಾಲ್ಕೈದು ಗೆಳೆಯರಿದ್ದರು. ಸೆಮಿನಾರ್ ಮುಗಿಸಿ ಹಿಂತಿರುಗುವಾಗ ಪುಸ್ತಕ ಪ್ರೇಮಿ ಗೆಳೆಯನೊಬ್ಬನ ಜೊತೆ ಅಲ್ಲೇ ಬಸ್ ಸ್ಟಾಂಡ್ ಹತ್ತಿರದ ಒಂದು ಪುಸ್ತಕದಂಗಡಿಗೆ ಹೋದೆವು. ಆತನಿಗೆ ಮರುಭೂಮಿಯ ಹೂವು ಪುಸ್ತಕ ಬೇಕೆಂದಿದ್ದ. ನಾನು ಯಯಾತಿ ಬೇಕೆಂದೆ. ಅಲ್ಲಿಂದ ಹೊರಡುವಾಗ ಅವತ್ತೇ ಓದಿ ಮುಗಿಸಬೇಕು ಅಂದು ಕೊಂಡ ನನಗೆ ಓದುಭಾಗ್ಯ ದೊರಕಿದ್ದು ಮಾತ್ರ ಇಂದು..ಏನೇ ಆಗಲಿ..ಕೊನೆಗೂ ಈ ಕೋವಿಡ್ ದಿನಗಳು ಕೊನೆಗೂ ಕಾರ್ನಾಡರನ್ನು ಓದಿಸುವಂತೆ ಮಾಡಿದೆ...}

ಅಂದ ಹಾಗೆ ಯಯಾತಿ ಗಿರೀಶ ಕಾರ್ನಾಡ ಅವರ ೧೯೬೧ ರಲ್ಲಿ ಪ್ರಕಟವಾದ ಮೊದಲ ನಾಟಕ. ಕೀರ್ತಿನಾಥ ಕುರ್ತಕೋಟಿ ಅವರು ಮುನ್ನುಡಿ, ಹಾಗೂ ಜಿ.ಎಸ್ ಅಮೂರ ಹಿನ್ನುಡಿ ಬರೆದಿದ್ದಾರೆ. ನಾಲ್ಕಂಕಗಳಿರುವ ಪ್ರಸ್ತುತ ನಾಟಕದಲ್ಲಿ ಪಾತ್ರಗಳಾಗಿ ದೇವಯಾನಿ, ಸ್ವರ್ಣಲತೆ, ಶರ್ಮಿಷ್ಠೆ, ಯಯಾತಿ, ಪುರು, ಚಿತ್ರಲೇಖೆ ಮುಂತಾದವರು ಬರುತ್ತಾರೆ.







ಕುರ್ತಕೋಟಿ ಅವರು ಹೇಳಿರುವಂತೆ, ಈ ನಾಟಕದಲ್ಲಿ ಮನುಷ್ಯ ಸಾಹಸದ ದುರಂತ ಚಿತ್ರವೊಂದನ್ನು ರೂಪಿಸುವ ಹವಣಿಕೆಯು ಎದ್ದು ಕಾಣುತ್ತದೆ. ನಾಟಕದ ಆಧುನಿಕತೆಯ ಅಂಶವೆಂದೇ ಅದು, ಇಲ್ಲಿಯ ಪಾತ್ರಗಳೆಲ್ಲವೂ ಮನುಷ್ಯನ ಸಾಮಾನ್ಯ ಮಟ್ಟವನ್ನೂ ಮೀರುವ ಹಂಬಲವನ್ನಿಟ್ಟುಕೊಂಡವುಗಳು. ಆದರೆ ಮನುಷ್ಯನ ದೌರ್ಬಲ್ಯಗಳಿಂದಲೇ ಅವುಗಳ ಹಂಬಲ ಪೂರ್ಣಗೊಳ್ಳುವುದಿಲ್ಲ. ಯಯಾತಿ ಅಮರತ್ವದ ಆಕಾಂಕ್ಷೆ, ದೇವಯಾನಿಯ ಪ್ರೀತಿಯ ಹಂಬಲ, ಶರ್ಮಿಷ್ಠಯ ಮುನುಷ್ಯತ್ವದಾಸೆ, ಪುರುವಿನ ವ್ಯಕ್ತಿತ್ವದ ಶೋಧ ಇವೆಲ್ಲ ತಾತ್ವಿಕ ಕಾಮನೆಗಳಾಗಿವೆ. ಕಾರ್ನಾಡರೇ ಹೇಳಿದಂತೆ, ವಾಚಕರು ಪುರುವಿನ ಕೊನೆಯ ವಾಕ್ಯದೊಡನೆ ತಾವೂ "ಇದೆಲ್ಲದರ ಅರ್ಥವೇನು ದೇವರೇ, ಇದರ ಅರ್ಥವೇನು..? ಎಂದು ಗದ್ದಲವೆಬ್ಬಿಸಿದರೆ, ಆ ಗದ್ದಲದಲ್ಲಿ ನನ್ನ ಧ್ವನಿಯೂ ಕೂಡಿದೆ" ಎಂದು ಮಾತ್ರ ಹೇಳಬಯಸುತ್ತೇನೆ" ಅಂದಂತೆ ನಾಟಕ ಕೊನೆಯಾದಾಗ ಓದುಗನಾಗಿ ನನಗೂ ಕೂಡಾ ಆ ಗದ್ದಲದ ನಡುವೆ ಇದ್ದಂತೆ ಅನಿಸಿತು...

(ನನ್ನ ಹೃದಯಾಂತರಾಳದಲ್ಲಿ ಅಕ್ಷರ ದೀಪ ಬೆಳಗಿದ ನನ್ನೆಲ್ಲಾ ಗುರುವೃಂದಕ್ಕೆ ಕೃತಜ್ಞ.. ಹಾಗೇ ನನ್ನವರಾದ ಎಲ್ಲರಿಗೂ.)

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಅಳಿವಿನಂಚಿನಲ್ಲಿರುವ ಸಾಂಪ್ರದಾಯಿಕ ಕೃಷಿ ಪರಂಪರೆ-* ನಿಝಾಮ್ ಅನ್ಸಾರಿ

ಭಾರತವು ಕೃಷಿ ಅವಲಂಬಿತ ಹಳ್ಳಿಗಳನ್ನೊಳಗೊಂಡ ಸಮೃದ್ಧ ದೇಶ. ದೇಶದ ಬೆಳವಣಿಗೆಯಲ್ಲಿ ವ್ಯವಸಾಯದ ಪಾತ್ರ ಬಹುಮುಖ್ಯವಾದುದು. ತಂತ್ರಜ್ಞಾನವು ದೇಶಕ್ಕೆ ಯಾವ ರೀತಿಯಲ್ಲಿ ಕೊಡುಗೆಗಳನ್ನು ನೀಡುತ್ತವೆಯೋ ಅದೇ ರೀತಿಯಲ್ಲಿ ಕೃಷಿಯ ಕೊಡುಗೆಯೂ ಕೂಡಾ ಅಪಾರವಾದುದು. ಆದರೆ ಇತ್ತೀಚಿನ ದಿನಗಳಲ್ಲಿ ಹಳ್ಳಿಗಳಲ್ಲಿ ವ್ಯವಸಾಯವು ಇಳಿಮುಖವಾಗುತ್ತಿದೆ. ಕೇವಲ ಬೆರಳೆಣಿಕೆಯಷ್ಟು ಮಂದಿ ಮಾತ್ರ ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವವರನ್ನು ಕಾಣಬಹುದಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿನ ಜನರು ವಿದ್ಯಾವಂತರಾಗುತ್ತಲೇ ತಮ್ಮ ಪಾರಂಪರಿಕ ಕುಲ ಕಸುಬನ್ನು ನಿರ್ಲಕ್ಷಿಸಿ ನಗರಗಳತ್ತ ವಲಸೆ ಹೋಗುತ್ತಿದ್ದಾರೆ.ಕೈ ಕೆಸರು ಮಾಡಿಕೊಂಡು ದುಡಿಯುವವರ ಕೊರತೆ ಅಗಾಧವಾಗಿ ಎದ್ದು ಕಾಣುತ್ತಿದೆ. ಇಂದಿನ ನವ ತಲೆಮಾರು ಹಳ್ಳಿಗಳು ಕೇವಲ ವೃದ್ಧರಿಗೆ ಮಾತ್ರ ಯೋಗ್ಯವಾದುದು ಎಂದು ತಿಳಿದಂತಿದೆ. `ನೇಗಿಲಾ ಹಿಡಿದಾ ಹೊಲದಲಿ ಹಾಡುತ ಉಳುವಾ ಯೋಗಿಯ ನೋಡಲ್ಲಿ’ ಎಂದು ಕುವೆಂಪುರಂತಹ ಖ್ಯಾತ ಕವಿಗಳಿಂದ ಕೊಂಡಾಡಲ್ಪಟ್ಟ ಕೃಷಿ ಚಟುವಟಿಕೆಗಳಿಂದು ಕಣ್ಮರೆಯಾಗಿದೆ. ನೇಗಿಲಿನಂತಹ ಕೃಷಿ ಸಲಕರಣೆಗಳು ಇಂದು ಮ್ಯೂಸಿಯಂ ಸೇರಿಬಿಟ್ಟಿವೆ. ಇದರೊಂದಿಗೆ ಅತ್ಯಂತ ಸುಂದರವಾದ ಕೃಷಿ ಪರಂಪರೆ ಮೂಲೆಗುಂಪಾಗುತ್ತಿದೆ. ಹಳೆಯ ಕಾಲದ ಸಾಂಪ್ರದಾಯಿಕ ಬೇಸಾಯಕ್ಕೆ ಉಪಯೋಗವಾಗುತ್ತಿದ್ದ ಪರಿಕರಗಳ ಸ್ಥಾನವನ್ನು ಟ್ರಾಕ್ಟರ್,ಟಿಲ್ಲರ್ ಗಳಂತಹ ಯಂತ್ರಗಳು ಆಕ್ರಮಿಸಿಕೊಂಡಿವೆ. ಭತ್ತ ನಾಟಿ ಮಾಡುವ ಮಹಿಳೆಯರಿಂದ ಕೇಳಿ ಬರು...

ಅರಬಿ ಭಾಷೆ : ಇತಿಹಾಸ ಮತ್ತು ವರ್ತಮಾನ

✒ ನಿಝಾಮ್ ಅನ್ಸಾರಿ ಭಾಷೆ ಮನುಷ್ಯನ ಸವಿಶೇಷತೆಗಳಲ್ಲೊಂದು. ಚಿಂತನೆಗಳು ಮತ್ತು ಅಭಿರುಚಿಗಳ ಆಶಯವನ್ನು ಅಭಿವ್ಯಕ್ತಿಗೊಳಿಸುವ ಅಥವಾ ಹೊರ ಹಾಕುವ ಶಬ್ದಗಳ ಒಂದು ಸಮೂಹವಾಗಿದೆ ಇದು. ಪ್ರಪಂಚದಲ್ಲಿ ಇಂದು ಹಲವು ಅಧಿಕೃತವಾಗಿರುವ ಭಾಷೆಗಳು ಅಸ್ತಿತ್ವದಲ್ಲಿವೆ.ಅದರಲ್ಲೂ ಪ್ರಾದೇಶಿಕ ಭಾಷೆಗಳು ಬೇರೇನೆ. ಆದರೆ ಈ ಎಲ್ಲಾ ಭಾಷೆಗಳ ಪೈಕಿ ರಾಜನಂತೆ ಇರೋದು ಅರಬಿ ಭಾಷೆ ಮಾತ್ರ . ಒಂದು ಕಾಲದಲ್ಲಿ ಇಡೀ ಜಗತ್ತನ್ನೇ ನಿಯಂತ್ರಿಸುವ ತಾಕತ್ತಿದ್ದ ಭಾಷೆಯಾಗಿತ್ತು ಅರಬಿ. ಯಾವ ರೀತಿಯಲ್ಲಿ ಈಗ ಆಂಗ್ಲ ಭಾಷೆಗೆ ಪ್ರಾಧಾನ್ಯತೆ, ಜಾಗತಿಕ ಅಂಗೀಕಾರ ಇದೆಯೋ ಅದೇ ರೀತಿಯಲ್ಲಿ ಅಂದು ಅರಬಿ ಭಾಷೆ ಸ್ಥಾನ ಪಡೆದಿತ್ತು. ಬಲದಿಂದ ಎಡಕ್ಕೆ ಇರುವ ಕೆಲವೊಂದು ಭಾಷೆಗಳಲ್ಲಿ ಅರಬೀ ಕೂಡಾ ಒಂದು. ಸೈಮಟಿಕ್ ಭಾಷೆಗಳಲ್ಲೊಂದಾದ ಅರಬಿ ಜಗತ್ತಿನ ಅತ್ಯಂತ ಪುರಾತನ ಭಾಷೆಗಳ ಪೈಕಿ ಒಂದು ಕೂಡಾ . ಐಕ್ಯ ರಾಷ್ಟ್ರ ಸಂಘದ ಅಂಗೀಕೃತ ಭಾಷೆಯಾದ ಅರಬಿ, 26 ದೇಶಗಳ ಅಧಿಕೃತ ಭಾಷೆಯಾಗಿದೆ‌. ಆಫ್ರಿಕನ್ ಯೂನಿಯನ್ ಆರ್ಗನೈಸೇಷನ್ ಇಸ್ಲಾಮಿಕ್ ಕಾನ್ಫೆರನ್ಸ್ ನಂತಹ ಹಲವು ಅಂತಾರಾಷ್ಟ್ರೀಯ ಸಂಸ್ಥೆಗಳು ಅರಬಿ ಭಾಷೆಯನ್ನು ಅಧಿಕೃತ ಭಾಷೆಯಾಗಿ ಅಂಗೀಕರಿಸಿದೆ. ಅರಬಿ ಭಾಷೆ: ಹುಟ್ಟು ಮತ್ತು ಬೆಳವಣಿಗೆ ಬಿ.ಸಿ 1900 ರಲ್ಲಿ ಜೀವಿಸಿದ್ದ 'ಯಅರೂಬ್ ಇಬ್ನ್ ಖಹ್ತಾನ್' ಎಂಬವರನ್ನು ಅರಬಿ ಭಾಷೆಯ ಪಿತಾಮಹ ಎಂದು ಕರೆಯಲಾಗುತ್ತದೆ. ಇವರ ನಾಮಕ್ಕೆ ಹೊಂದಿಕೊಂಡು 'ಅರಬಿ' ಎಂಬ ಹೆಸರು...

ಕೋವಿಡ್ ಕಾಲದ ಓದು: ಚಂದ್ರನ ಚೂರು

'ಚಂದ್ರನ ಚೂರು' ಕೃತಿಯ ಹೆಸರು ಕೇಳಿದಾಗ ನಿಜವಾಗಿಯೂ ಅದೊಂದು ಕಾದಂಬರಿಯಾಗಿರಬಹುದು ಎಂದು ಭಾವಿಸಿದ್ದೆ. ಆದರೆ, ಪುಸ್ತಕ ಕೈಗೆ ತಲುಪಿದಾಗಲೇ ಗೊತ್ತಾಗಿದ್ದು, ಅದೊಂದು ಚಂದ್ರಲೋಕಕ್ಕೆ ಕೊಂಡೊಯ್ಯುವ ಅದ್ಭುತ ಕೃತಿ ಅಂತ. ತಂದೆ ಕುವೆಂಪು ಅವರ ಸಾಹಿತ್ಯದ ಹಾದಿಯಲ್ಲೇ ನಡೆದರೂ, ತೇಜಸ್ವಿಯವರ ಸಾಹಿತ್ಯವು ನಿಸರ್ಗ ವಿಸ್ಮಯ, ಭೂಗೋಳ, ಜೀವಶಾಸ್ತ್ರ, ಭತಶಾಸ್ತ್ರ, ಇತಿಹಾಸ ಹೀಗೇ ಎಲ್ಲಾ ಶಾಸ್ತ್ರಗಳ ಮಿಶ್ರಣ ರಸಾಯನ ಎಂದೇ ಹೇಳಬಹುದು. ಚಂದ್ರನ ಚೂರು ಚಂದ್ರ ಲೋಕದ ವಿಸ್ಮಯ ದೃಶ್ಯಗಳನ್ನು ಕಟ್ಟಿಕೊಡುವ ಚೊಚ್ಚಲ ಕೃತಿ. ಬಾಹ್ಯಾಕಾಶ, ಖಗೋಳ ಶಾಸ್ತ್ರ ವಿಷಯದಲ್ಲಿ ಆಸಕ್ತಿ ಇಲ್ಲದ ನನ್ನಂತವರನ್ನೂ ಇದು ಸರಾಗವಾಗಿ ಓದಿಸಿಕೊಂಡು ಹೋಗುವಂತೆ ಮಾಡುತ್ತದೆ, ಅದಕ್ಕೆ ಕಾರಣ, ತೇಜಸ್ವಿ ಅವರ ಬರವಣಿಗೆ ಹಾಗೂ ವಿವರಣೆಯ ಶೈಲಿ.. ಜಗತ್ತಿನಲ್ಲಿ ಮನುಷ್ಯನು ಚಂದ್ರನಲ್ಲಿಗೆ ಕಾಲಿಡುವುದಕ್ಕೂ ಮುನ್ನ, ಯಾವುದೆಲ್ಲಾ ರೀತಿಯ ಪರಿಶ್ರಮಗಳು ನಡೆದಿದ್ದವು ಹಾಗೂ ಭೂಮಂಡಲ ಮತ್ತು ಚಂದ್ರನ ಕುರಿತಾಘಿ ಯಾವುದೆಲ್ಲಾ ಆಯಾಮಗಳಲ್ಲಿ ಅಧ್ಯಯನಗಳಾಗಿದ್ದುವು ಎಂಬುದರ ಸಂಪೂರ್ಣ ವಿಷಯಗಳಿವೆ. ಚಂದ್ರನಲ್ಲಿ ತಲುಪಿದ ಮನುಷ್ಯನಿಗೆ ಆದ ಅನುಭವಗಳೇನು? ನೀಲ್ ಆಮ್Fಸ್ಟ್ರಾಂಗ್ ತಂಡದ ಚಂದ್ರಯಾನದ ರಸವತ್ತಾದ ಅನುಭವಗಳು, ಚಂದಿರನ ಮಣ್ಣಲ್ಲಿ ಅಮೇರಿಕದ ಫ್ಲಾಗ್ ಮತ್ತು ಬೋಡ್F ಸ್ಥಾಪಿಸಿ ಬಂದ ಆ ಧೀರ ತಂಡದ ಬೆರಗಾಗಿಸುವ ಕ್ಷಣ ಕ್ಷಣದ ವರದಿಗಳು ಈ ಕೃತಿಯ ಲೇಖನಗಳಲ್ಲಿ ಅಡಗಿದೆ. ಒಟ್ಟಿನಲ...