ವಿಷಯಕ್ಕೆ ಹೋಗಿ

‘ತೆರೆದಂತೆ ಹಾದಿ’ ಈ ದಿನದ ಓದು...


ಎರಡು ತಿಂಗಳ ಹಿಂದೆ ಮಂಗಳೂರಿನ ರಥಬೀದಿಲ್ಲಿರುವ ಸರ್ಕಾರಿ ಕಾಲೇಜಿಗೆ ಭೇಟಿ ನೀಡುವ ಅವಕಾಶ ಸಿಕ್ಕಿತು. ಅಲ್ಲಿ ಹೋಗಿ ನೋಡಿದರೆ, ಕಾಲೇಜು ವತಿಯಿಂದ ಪತ್ರಿಕೋದ್ಯಮದ ನಾನಾ ಆಯಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವ ವರ್ಕ್‍ಶಾಪ್ ಹಮ್ಮಿಕೊಳ್ಳಲಾಗಿತ್ತು. ನಾನಂತೂ ಯಾವ ಕಾರಣಕ್ಕೆ ಅಲ್ಲಿ ಬಂದು ತಲುಪಿದೆನೋ ಗೊತ್ತಿಲ್ಲ, ವರ್ಕ್‍ಶಾಪ್ ಮುಗಿಯುವಷ್ಟರಲ್ಲಿ ಪುಸ್ತಕವೊಂದು ಕೊಡುಗೆಯಾಗಿ ನನ್ನ ಕೈ ಸೇರಿತ್ತು. ಅದು ಅಲ್ಲಿನ ಅಧ್ಯಾಪಕಿ ಜಯಶ್ರೀ ಬಿ.ಕದ್ರಿ ಅವರ ‘ತೆರೆದಂತೆ ಹಾದಿ’ ಎಂಬ ವೈಚಾರಿಕ ಬರಹಗಳ ಸಂಗ್ರಹ. ನಿನ್ನೆ ಮನೇಲಿ ನನ್ನ ಪದವಿ ಸರ್ಟಿಫಿಕೇಟ್‍ಗಾಗಿ ಹುಡುಕಾಡುತ್ತಿದ್ದಾಗ, ಈ ಪುಸ್ತಕ ಸಿಕ್ಕಿತು. ಅದನ್ನು ನನ್ನ ಓದಿನ ಪಟ್ಟಿಗೆ ಸೇರಿಸಲು ಇದೇ ಸಕಾಲ ಅಂದುಕೊಂಡು ಕೈಗೆತ್ತಿಕೊಂಡೆ. ಅಂದ ಹಾಗೆ, ಪದವಿ ಸರ್ಟಿಫಿಕೇಟ್ ಹುಡುಕುತ್ತಿದ್ದೆಂದೆನಲ್ಲಾ. ನನ್ನ ಪದವಿಗೂ, ರಥಬೀದಿಯ ಆ ಕಾಲೇಜಿಗೂ ಅವಿನಾಭಾವ ಸಂಬಂಧವಿದೆ. ಮೂರು ವರ್ಷಗಳ ಪದವಿ ಪರೀಕ್ಷೆಗಳನ್ನು ಬರೆದಿದ್ದು ಅದೇ ಕಾಲೇಜಿನಲ್ಲಿ. ಅದಕ್ಕೂ ಮುನ್ನ ಎಸ್ಸೆಸೆಲ್ಸಿ ಪರೀಕ್ಷೆ ಬರೆದಿದ್ದೂ ಕೂಡಾ ಅಲ್ಲೇ ಹತ್ತಿರದ ಶಾಲೆಯೊಂದರಲ್ಲಿ. ಹಾಗಾಗಿ, ರಥಬೀದಿಯ ಆ ಬೀದಿಗಳು ಮತ್ತು ಶಾಲಾ, ಕಾಲೇಜು ಆವರಣ ಮನಸ್ಸಿಗೆ ಹಳೆಯ ನೆನಪುಗಳನ್ನು ಮರುಕಳಿಸುವಂತೆ ಮಾಡುತ್ತದೆ. 





ಏನೇ ಇರಲಿ, ಅಂತೂ ಜಯಶ್ರೀ ಮೇಡಂ ನಮ್ಮನ್ನು ಬರಮಾಡಿಕೊಂಡ ರೀತಿ, ಅವರ ನಗುಮೊಗದ ಮಾತು, ತನ್ನ ವಿದ್ಯಾರ್ಥಿಗಳು ಏನಾದರೂ ಕಲಿಯಬೇಕೆಂಬ ಹಂಬಲ, ತುಡಿತ ಅದರಲ್ಲೂ ಅವರ ಸೌಮ್ಯ ನಡವಳಿಕೆ ಇವೆಲ್ಲವನ್ನೂ ನಾನು ದೂರದಿಂದಲೇ ನೋಡುತ್ತಿದ್ದೆ. ನಿಜ ಹೇಳಬೇಕೆಂದರೆ, ಅವರೊಬ್ಬರು ಲೇಖಕಿ ಅನ್ನುವ ವಿಚಾರ ನನಗೆ ಆವರೆಗೂ ತಿಳಿದಿರಲಿಲ್ಲ. ನಂತರ ನಮ್ಮನ್ನು ಆಫೀಸಿಗೆ ಕರೆದು ಮಾತನಾಡಿಸಿದರು. ಚಾ, ತಿಂಡಿಯ ಸತ್ಕಾರವೂ ಆಯಿತು. ನಮ್ಮ ವಿಭಾಗದ ಮುಖ್ಯಸ್ಥರಾದ ಪೆಜತ್ತಾಯ ಸರ್,( ಪೆಜತ್ತಾಯ ಸರ್ ಕೊಟ್ಟ ಸತ್ಕಾರವನ್ನೂ ಮರೆಯುವಂತಿಲ್ಲ) ಚೈತನ್ಯ ಸರ್ ನಮ್ ಜೊತೆಗಿದ್ದರು. ಕುಶಲೋಪರಿಯ ನಡುವೆ ಸರ್, ನಮ್ಮೆಲ್ಲರ ಪರಿಚಯ ಹೇಳಿದಾಗ, ಮೇಡಂ ನನ್ನ ಹಿನ್ನೆಲೆ ಬಗ್ಗೆ ‘ರೇರ್ ಕಾಂಬಿಬೇಶನ್’ ಅಂತ ಪ್ರತಿಕ್ರಿಯಿಸಿದ್ದಾಗಿ ಅಷ್ಟು ಮಾತ್ರ ನೆನಪಿದೆ. 

ಪುಸ್ತಕದ ಬಗ್ಗೆ ಮಾತಾಡುವ ಮುನ್ನ ಇವಿಷ್ಟು ಹೇಳಲೇಬೇಕು ಅಂತ ಅನಿಸಿತು. ಏನೇ ಇರಲಿ, ಇನ್ನು ವಿಷಯಕ್ಕೆ ಬರೋಣ. ತೆರೆದಂತೆ ಹಾದಿಯಲ್ಲಿ, ಒಟ್ಟು 55 ಲೇಖನಗಳಿವೆ. ಅವುಗಳಲ್ಲಿ ಸ್ತ್ರೀ ಪರವಾದವುಗಳು, ಸಾಮಾಜಿಕ ಸಮಸ್ಯೆಗಳು, ಒಳತುಡಿತಗಳು, ಸಾಹಿತ್ಯ ವಿಮರ್ಶೆಗಳು, ಸ್ತ್ರೀ ಸಬಲೀಕರಣದ ನಾನಾ ಮುಖಗಳು, ಮುಗ್ಧ ಮನಸ್ಸುಗಳ ಸಂಕೋಚಗಳು, ನಗರ-ಹಳ್ಳಿಗಳ ಜೀವನ ಹೀಗೇ ವಿವಿಧ ಆಯಾಮಗಳನ್ನು ಸ್ಪರ್ಶಿಸುತ್ತವೆ. 

ಜಯಶ್ರೀ ಅವರ ಬರಹಗಳಲ್ಲಿ ಹೆಚ್ಚಾಗಿ ಧಾರವಾಹಿಗಳು ಹಾಗೂ ದೃಶ್ಯಮಾಧ್ಯಮಗಳ ಜಾಹೀರಾತು ಮನಸ್ಥಿತಿಯನ್ನು ಪ್ರಶ್ನಿಸುತ್ತಾರೆ. ಕೆಲವೊಂದೆಡೆ ಮಾಧ್ಯಮಗಳನ್ನು ತರಾಟೆಗೆ ತೆಗೆದುಕೊಂಡದ್ದಿದೆ. ಜೊತೆಗೆ, ಹೆಣ್ಣು ಗೃಹಿಣಿಯಾಗಿಯೇ ಉಳಿಯಬೇಕಾದವಳು, ತನ್ನ ಜೀವನಪೂರ್ತಿ ಗಂಡನ ಅಂಗಿಯ ಕಾಲರ್‍ನಲ್ಲಿರುವ ಕೊಳೆ ಬಿಡಿಸಲೂ, ಮಕ್ಕಳನ್ನು ಹೆತ್ತು ಹೊತ್ತು ಸಾಕಲು ಸೀಮಿತವಾದವಳು ಎನ್ನುವ ಸ್ತ್ರೀ ಕುಲದ ಬಗೆಗಿನ ತಾತ್ಸಾರ ಮನೋಭಾವ ಹುಟ್ಟಿಕೊಳ್ಳಲು ಪುರುಷ ಪ್ರಧಾನ ವ್ಯವಸ್ಥೆಯನ್ನು ವೈಭವೀಕರಿಸುವ ದೃಶ್ಯ ಮಾಧ್ಯಮಗಳ ಜಾಹೀರಾತುಗಳನ್ನೇ ಹೊಣೆಗಾರರನ್ನಾಗಿಸುತ್ತಾರೆ. ಅವುಗಳ ಅಪಾಯಗಳ ಬಗೆಗೆ ಅಲ್ಲಲ್ಲಿ ಎಚ್ಚರಿಕೆ ನೀಡುತ್ತಾರೆ. ನಗರ ಹಾಗೂ ಹಳ್ಳಿಯ ಜೀವನವನ್ನು ತುಲನೆ ಮಾಡಿ, ನಗರದ ಜೀವನ ಯಾಕೆ, ಯಾವ ಆಯಾಮಗಳಲ್ಲೆಲ್ಲಾ ಹಳ್ಳಿಗಿಂತ ಬೆಟರ್ ಅನ್ನೋದನ್ನ ಸಮರ್ಥಿಸುತ್ತಾರೆ.



‘ಒಗ್ಗರಣೆ ಸದ್ದಿನಲ್ಲಿ ಕಳೆದು ಹೋಗುವವರು’ ಎಂಬ ಲೇಖನದ ಮೂಲಕ ಸ್ತ್ರೀವಾದಿಗಳೆಂದರೆ, ಪುರುಷ ಸಂಕುಲವನ್ನು ದ್ವೇಷಿಸುವವರೋ, ಅಸಡ್ಡಾಳವಾಗಿ ಬಟ್ಟೆ ತೊಟ್ಟು ಜಗತ್ತಿಗೆ ಕ್ಯಾರೆನ್ನದೆ ಬದುಕುವವರು ಅನ್ನುವವರೊಂದಿಗೆ, ಮಹಿಳೆ ಅವಳಿಗೆ ಸಿಗಬೇಕಾದ ಸವಲತ್ತು, ಆದರ, ಗೌರವಗಳಿಗಾಗಿ ದನಿಯೆತ್ತುವುದು ತಪ್ಪೇ ಎಂದು ಕೇಳುತ್ತಾರೆ. 

ಸ್ಮಿತಾ ಅಮೃತರಾಜ್ ಅವರು ಬೆನ್ನುಡಿಯಲ್ಲಿ ಹೇಳುವಂತೆ, ಜಯಶ್ರೀ ಅವರ ಲೇಖನಗಳ ಕೇಂದ್ರ ಬಿಂದು ಮಹಿಳೆ. ಅವರ ಅಂತಃಕರಣ ಮಿಡಿಯುವುದು ಸದ್ದಿಲ್ಲದೇ ಅಡಗಿ ಹೋಗುವ ಹೆಣ್ಣುಮಕ್ಕಳ ಮೂಕದನಿಗಳಿಗೆ, ಸಮಾಜದ ಮಧ್ಯಮವರ್ಗದವರ, ಅಸಹಾಯಕರ ಒಳರೋದನಗಳಿಗೆ ಅವರ ಬರಹಗಳು ಒಮ್ಮೊಮ್ಮೆ ಗದ್ಯದಂತೆ, ಮಗದೊಮ್ಮೆ ಕಾವ್ಯದಂತೆಯೂ ಕೇಳಿಸಿಕೊಂಡು ಹೋಗಬಲ್ಲದು. 

ಪ್ರತಿ ಲೇಖನಗಳನ್ನೂ ಯಾವುದಾದರೊಂದು ಕವನ ಇಲ್ಲವೇ ಹಾಡುಗಳ ಸಾಲುಗಳೊಂದಿಗೆ ಆರಂಭಿಸುವುದು ಅವರ ಬರಹದ ವಿಶೇಷತೆ ಅಂತ ಅನಿಸಿತು. ಮಕ್ಕಳ ಸಾಹಿತ್ಯ ಕೃತಿಗಳು, ಮಹಿಳಾ ಲೇಖಕಿಯರು ಮತ್ತು ಅವರ ಕೃತಿಗಳ ಬಗೆಗಿನ ವಿಮರ್ಶೆ ಹಲವು ವಿಚಾರಗಳ ಕಡೆಗೆ ನಮ್ಮನ್ನು ಸೆಳೆಯುತ್ತದೆ. ಒಟ್ಟಿನ ಮೇಲೆ ‘ತೆರೆದಂತೆ ಹಾದಿ’ ಬಿ.ಎಂ ರೋಹಿಣಿ ಅವರು ಹೇಳುವಂತೆ, ಇಲ್ಲಿ ಲೇಖಕಿ, ಸಮಾಜದ ಕೊರತೆಗಳಿಗೆಲ್ಲಾ ತನ್ನಲ್ಲಿ ಪರಿಹಾರವಿದೆಯೆಂಬ ಹಿರಿತನದಿಂದ ಬೀಗದೆ, ದೋಷಗಳ ಪಟ್ಟಿ ಮಾಡುವ ಪರೀಕ್ಷಕನಂತೆ ರೇಗದೆ, ಭವಿಷ್ಯ ಹೇಳುವವನಂತೆ ಉಪದೇಶಿಸದೆ, ಶಾಂತ ಮನಸ್ಥಿತಿಯಲ್ಲಿ ಕುಳಿತು ವಿಷಯಗಳ ಮಂಥನ ಮಾಡಿ ತನ್ನ ಸಲಹೆಗಳನ್ನು ವ್ಯಕ್ತಪಡಿಸಿದ್ದಾರೆ.

https://veekshakaa.wordpress.com/2020/04/21/ತೆರೆದಂತೆ-ಹಾದಿ-ಈ-ದಿನದ-ಓದ





ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಅಳಿವಿನಂಚಿನಲ್ಲಿರುವ ಸಾಂಪ್ರದಾಯಿಕ ಕೃಷಿ ಪರಂಪರೆ-* ನಿಝಾಮ್ ಅನ್ಸಾರಿ

ಭಾರತವು ಕೃಷಿ ಅವಲಂಬಿತ ಹಳ್ಳಿಗಳನ್ನೊಳಗೊಂಡ ಸಮೃದ್ಧ ದೇಶ. ದೇಶದ ಬೆಳವಣಿಗೆಯಲ್ಲಿ ವ್ಯವಸಾಯದ ಪಾತ್ರ ಬಹುಮುಖ್ಯವಾದುದು. ತಂತ್ರಜ್ಞಾನವು ದೇಶಕ್ಕೆ ಯಾವ ರೀತಿಯಲ್ಲಿ ಕೊಡುಗೆಗಳನ್ನು ನೀಡುತ್ತವೆಯೋ ಅದೇ ರೀತಿಯಲ್ಲಿ ಕೃಷಿಯ ಕೊಡುಗೆಯೂ ಕೂಡಾ ಅಪಾರವಾದುದು. ಆದರೆ ಇತ್ತೀಚಿನ ದಿನಗಳಲ್ಲಿ ಹಳ್ಳಿಗಳಲ್ಲಿ ವ್ಯವಸಾಯವು ಇಳಿಮುಖವಾಗುತ್ತಿದೆ. ಕೇವಲ ಬೆರಳೆಣಿಕೆಯಷ್ಟು ಮಂದಿ ಮಾತ್ರ ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವವರನ್ನು ಕಾಣಬಹುದಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿನ ಜನರು ವಿದ್ಯಾವಂತರಾಗುತ್ತಲೇ ತಮ್ಮ ಪಾರಂಪರಿಕ ಕುಲ ಕಸುಬನ್ನು ನಿರ್ಲಕ್ಷಿಸಿ ನಗರಗಳತ್ತ ವಲಸೆ ಹೋಗುತ್ತಿದ್ದಾರೆ.ಕೈ ಕೆಸರು ಮಾಡಿಕೊಂಡು ದುಡಿಯುವವರ ಕೊರತೆ ಅಗಾಧವಾಗಿ ಎದ್ದು ಕಾಣುತ್ತಿದೆ. ಇಂದಿನ ನವ ತಲೆಮಾರು ಹಳ್ಳಿಗಳು ಕೇವಲ ವೃದ್ಧರಿಗೆ ಮಾತ್ರ ಯೋಗ್ಯವಾದುದು ಎಂದು ತಿಳಿದಂತಿದೆ. `ನೇಗಿಲಾ ಹಿಡಿದಾ ಹೊಲದಲಿ ಹಾಡುತ ಉಳುವಾ ಯೋಗಿಯ ನೋಡಲ್ಲಿ’ ಎಂದು ಕುವೆಂಪುರಂತಹ ಖ್ಯಾತ ಕವಿಗಳಿಂದ ಕೊಂಡಾಡಲ್ಪಟ್ಟ ಕೃಷಿ ಚಟುವಟಿಕೆಗಳಿಂದು ಕಣ್ಮರೆಯಾಗಿದೆ. ನೇಗಿಲಿನಂತಹ ಕೃಷಿ ಸಲಕರಣೆಗಳು ಇಂದು ಮ್ಯೂಸಿಯಂ ಸೇರಿಬಿಟ್ಟಿವೆ. ಇದರೊಂದಿಗೆ ಅತ್ಯಂತ ಸುಂದರವಾದ ಕೃಷಿ ಪರಂಪರೆ ಮೂಲೆಗುಂಪಾಗುತ್ತಿದೆ. ಹಳೆಯ ಕಾಲದ ಸಾಂಪ್ರದಾಯಿಕ ಬೇಸಾಯಕ್ಕೆ ಉಪಯೋಗವಾಗುತ್ತಿದ್ದ ಪರಿಕರಗಳ ಸ್ಥಾನವನ್ನು ಟ್ರಾಕ್ಟರ್,ಟಿಲ್ಲರ್ ಗಳಂತಹ ಯಂತ್ರಗಳು ಆಕ್ರಮಿಸಿಕೊಂಡಿವೆ. ಭತ್ತ ನಾಟಿ ಮಾಡುವ ಮಹಿಳೆಯರಿಂದ ಕೇಳಿ ಬರು...

ಅರಬಿ ಭಾಷೆ : ಇತಿಹಾಸ ಮತ್ತು ವರ್ತಮಾನ

✒ ನಿಝಾಮ್ ಅನ್ಸಾರಿ ಭಾಷೆ ಮನುಷ್ಯನ ಸವಿಶೇಷತೆಗಳಲ್ಲೊಂದು. ಚಿಂತನೆಗಳು ಮತ್ತು ಅಭಿರುಚಿಗಳ ಆಶಯವನ್ನು ಅಭಿವ್ಯಕ್ತಿಗೊಳಿಸುವ ಅಥವಾ ಹೊರ ಹಾಕುವ ಶಬ್ದಗಳ ಒಂದು ಸಮೂಹವಾಗಿದೆ ಇದು. ಪ್ರಪಂಚದಲ್ಲಿ ಇಂದು ಹಲವು ಅಧಿಕೃತವಾಗಿರುವ ಭಾಷೆಗಳು ಅಸ್ತಿತ್ವದಲ್ಲಿವೆ.ಅದರಲ್ಲೂ ಪ್ರಾದೇಶಿಕ ಭಾಷೆಗಳು ಬೇರೇನೆ. ಆದರೆ ಈ ಎಲ್ಲಾ ಭಾಷೆಗಳ ಪೈಕಿ ರಾಜನಂತೆ ಇರೋದು ಅರಬಿ ಭಾಷೆ ಮಾತ್ರ . ಒಂದು ಕಾಲದಲ್ಲಿ ಇಡೀ ಜಗತ್ತನ್ನೇ ನಿಯಂತ್ರಿಸುವ ತಾಕತ್ತಿದ್ದ ಭಾಷೆಯಾಗಿತ್ತು ಅರಬಿ. ಯಾವ ರೀತಿಯಲ್ಲಿ ಈಗ ಆಂಗ್ಲ ಭಾಷೆಗೆ ಪ್ರಾಧಾನ್ಯತೆ, ಜಾಗತಿಕ ಅಂಗೀಕಾರ ಇದೆಯೋ ಅದೇ ರೀತಿಯಲ್ಲಿ ಅಂದು ಅರಬಿ ಭಾಷೆ ಸ್ಥಾನ ಪಡೆದಿತ್ತು. ಬಲದಿಂದ ಎಡಕ್ಕೆ ಇರುವ ಕೆಲವೊಂದು ಭಾಷೆಗಳಲ್ಲಿ ಅರಬೀ ಕೂಡಾ ಒಂದು. ಸೈಮಟಿಕ್ ಭಾಷೆಗಳಲ್ಲೊಂದಾದ ಅರಬಿ ಜಗತ್ತಿನ ಅತ್ಯಂತ ಪುರಾತನ ಭಾಷೆಗಳ ಪೈಕಿ ಒಂದು ಕೂಡಾ . ಐಕ್ಯ ರಾಷ್ಟ್ರ ಸಂಘದ ಅಂಗೀಕೃತ ಭಾಷೆಯಾದ ಅರಬಿ, 26 ದೇಶಗಳ ಅಧಿಕೃತ ಭಾಷೆಯಾಗಿದೆ‌. ಆಫ್ರಿಕನ್ ಯೂನಿಯನ್ ಆರ್ಗನೈಸೇಷನ್ ಇಸ್ಲಾಮಿಕ್ ಕಾನ್ಫೆರನ್ಸ್ ನಂತಹ ಹಲವು ಅಂತಾರಾಷ್ಟ್ರೀಯ ಸಂಸ್ಥೆಗಳು ಅರಬಿ ಭಾಷೆಯನ್ನು ಅಧಿಕೃತ ಭಾಷೆಯಾಗಿ ಅಂಗೀಕರಿಸಿದೆ. ಅರಬಿ ಭಾಷೆ: ಹುಟ್ಟು ಮತ್ತು ಬೆಳವಣಿಗೆ ಬಿ.ಸಿ 1900 ರಲ್ಲಿ ಜೀವಿಸಿದ್ದ 'ಯಅರೂಬ್ ಇಬ್ನ್ ಖಹ್ತಾನ್' ಎಂಬವರನ್ನು ಅರಬಿ ಭಾಷೆಯ ಪಿತಾಮಹ ಎಂದು ಕರೆಯಲಾಗುತ್ತದೆ. ಇವರ ನಾಮಕ್ಕೆ ಹೊಂದಿಕೊಂಡು 'ಅರಬಿ' ಎಂಬ ಹೆಸರು...

ಕೋವಿಡ್ ಕಾಲದ ಓದು: ಚಂದ್ರನ ಚೂರು

'ಚಂದ್ರನ ಚೂರು' ಕೃತಿಯ ಹೆಸರು ಕೇಳಿದಾಗ ನಿಜವಾಗಿಯೂ ಅದೊಂದು ಕಾದಂಬರಿಯಾಗಿರಬಹುದು ಎಂದು ಭಾವಿಸಿದ್ದೆ. ಆದರೆ, ಪುಸ್ತಕ ಕೈಗೆ ತಲುಪಿದಾಗಲೇ ಗೊತ್ತಾಗಿದ್ದು, ಅದೊಂದು ಚಂದ್ರಲೋಕಕ್ಕೆ ಕೊಂಡೊಯ್ಯುವ ಅದ್ಭುತ ಕೃತಿ ಅಂತ. ತಂದೆ ಕುವೆಂಪು ಅವರ ಸಾಹಿತ್ಯದ ಹಾದಿಯಲ್ಲೇ ನಡೆದರೂ, ತೇಜಸ್ವಿಯವರ ಸಾಹಿತ್ಯವು ನಿಸರ್ಗ ವಿಸ್ಮಯ, ಭೂಗೋಳ, ಜೀವಶಾಸ್ತ್ರ, ಭತಶಾಸ್ತ್ರ, ಇತಿಹಾಸ ಹೀಗೇ ಎಲ್ಲಾ ಶಾಸ್ತ್ರಗಳ ಮಿಶ್ರಣ ರಸಾಯನ ಎಂದೇ ಹೇಳಬಹುದು. ಚಂದ್ರನ ಚೂರು ಚಂದ್ರ ಲೋಕದ ವಿಸ್ಮಯ ದೃಶ್ಯಗಳನ್ನು ಕಟ್ಟಿಕೊಡುವ ಚೊಚ್ಚಲ ಕೃತಿ. ಬಾಹ್ಯಾಕಾಶ, ಖಗೋಳ ಶಾಸ್ತ್ರ ವಿಷಯದಲ್ಲಿ ಆಸಕ್ತಿ ಇಲ್ಲದ ನನ್ನಂತವರನ್ನೂ ಇದು ಸರಾಗವಾಗಿ ಓದಿಸಿಕೊಂಡು ಹೋಗುವಂತೆ ಮಾಡುತ್ತದೆ, ಅದಕ್ಕೆ ಕಾರಣ, ತೇಜಸ್ವಿ ಅವರ ಬರವಣಿಗೆ ಹಾಗೂ ವಿವರಣೆಯ ಶೈಲಿ.. ಜಗತ್ತಿನಲ್ಲಿ ಮನುಷ್ಯನು ಚಂದ್ರನಲ್ಲಿಗೆ ಕಾಲಿಡುವುದಕ್ಕೂ ಮುನ್ನ, ಯಾವುದೆಲ್ಲಾ ರೀತಿಯ ಪರಿಶ್ರಮಗಳು ನಡೆದಿದ್ದವು ಹಾಗೂ ಭೂಮಂಡಲ ಮತ್ತು ಚಂದ್ರನ ಕುರಿತಾಘಿ ಯಾವುದೆಲ್ಲಾ ಆಯಾಮಗಳಲ್ಲಿ ಅಧ್ಯಯನಗಳಾಗಿದ್ದುವು ಎಂಬುದರ ಸಂಪೂರ್ಣ ವಿಷಯಗಳಿವೆ. ಚಂದ್ರನಲ್ಲಿ ತಲುಪಿದ ಮನುಷ್ಯನಿಗೆ ಆದ ಅನುಭವಗಳೇನು? ನೀಲ್ ಆಮ್Fಸ್ಟ್ರಾಂಗ್ ತಂಡದ ಚಂದ್ರಯಾನದ ರಸವತ್ತಾದ ಅನುಭವಗಳು, ಚಂದಿರನ ಮಣ್ಣಲ್ಲಿ ಅಮೇರಿಕದ ಫ್ಲಾಗ್ ಮತ್ತು ಬೋಡ್F ಸ್ಥಾಪಿಸಿ ಬಂದ ಆ ಧೀರ ತಂಡದ ಬೆರಗಾಗಿಸುವ ಕ್ಷಣ ಕ್ಷಣದ ವರದಿಗಳು ಈ ಕೃತಿಯ ಲೇಖನಗಳಲ್ಲಿ ಅಡಗಿದೆ. ಒಟ್ಟಿನಲ...