ವಿಷಯಕ್ಕೆ ಹೋಗಿ

ಆಹಾರವಿಲ್ಲದೆ ಕಲ್ಲುಗಳನ್ನು ಬೇಯಿಸಿದಳು ಆ ಬಡತಾಯಿ..


ಖಲೀಫ ಉಮರ್ ಆಡಳಿತವನ್ನು ನೆನಪಿಸಿದ ಕೆನ್ಯಾದ ಈ ಘಟನೆ..


ಅದು ಹಝ್ರತ್ ಉಮರ್ (ರ) ರ ಆಡಳಿತ ಕಾಲ. ತನ್ನ ಆಡಳಿತ ಅವಧಿಯಲ್ಲಿ, ರಾಷ್ಟ್ರದ ಯಾರೂ ಕೂಡಾ ಸಂಕಷ್ಟಕ್ಕೆ ಗುರಿಯಾಗಬಾರದೆಂಬ ಮಹತ್ವದ ನಿರ್ಧಾರ ಉಮರ್ ಅವರದ್ದಾಗಿತ್ತು. ಹಾಗಾಗಿ, ಹಗಲು ರಾತ್ರಿಯೆನ್ನದೆ ಜನರಿಗಾಗಿ, ಅವರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಮುಡಿಪಾಗಿಡುತ್ತಿದ್ದರು. ಅದಕ್ಕಾಗಿಯೇ ಸಿಬ್ಬಂದಿಗಳನ್ನು ನೇಮಿಸಿದ್ದರಲ್ಲದೆ, ರಾತ್ರಿ ಪಾಳಿಯಲ್ಲಿ ತಾನೇ ಸ್ವತಃ ಜನರ ಸುಖ ದುಃಖಗಳನ್ನು ಅರಿಯಲೆಂದು ಒಬ್ಬರನ್ನು ಜೊತೆಗೂಡಿಸಿ ಹೊರಟು ಬಿಡುತ್ತಿದ್ದರು.



ಅದೊಂದು ದಿನ ರಾತ್ರಿ, ಇಡೀ ಊರಿಗೆ ಊರೇ ನಿಶ್ಯಬ್ದವಾಗಿದೆ. ಜನರು ಶಾಂತ ನಿದ್ರೆಯಲ್ಲಿ ಮುಳುಗಿದ್ದಾರೆ. ಹಝ್ರತ್ ಉಮರ್ ತನ್ನ ಜೊತೆ ಅಸ್ಲಮ್ ಅವರನ್ನು ಜೊತೆಗೂಡಿಸಿಕೊಂಡು ಅರೇಬಿಯಾ ಮರುಭೂಮಿಯ ಪ್ರತಿಯೊಂದು ಗುಡಿಸಲುಗಳ ಹಾದಿಯಾಗಿ ಸಾಗುತ್ತಲಿದ್ದಾರೆ. ಹೌದು, ರಾಜಠೀವಿಯಲ್ಲಿ ಮೆರೆಯಬೇಕಿದ್ದ, ರಾಜಾತಿಥ್ಯವನ್ನುಂಡು ಮಲಗಬೇಕಾಗಿದ್ದ ಸಮಯವದು. ಇಲ್ಲ ತನ್ನ ಎಂದಿನ ದಿನಚರಿಯಂತೆ ಇದು ನಡೆಯಲೇಬೇಕು. ಪ್ರಜೆಗಳೆಲ್ಲರೂ ಉಮರ್ ನ ಆಡಳಿತದಲ್ಲಿ ಸುಖ ನಿದ್ರೆ ಅನುಭವಿಸಿದರೆ ಮಾತ್ರ ತನಗೂ ನಿದ್ರಿಸಲು ಸಾಧ್ಯ. ಹಾಗಾಗಿ ಉಮರ್ ಖಲೀಫರ ವೇಷ ಕಳಚಿಟ್ಟು ಒಬ್ಬ ಸಾಮಾನ್ಯನಂತೆ ಈಗ ಹೊರಟಿದ್ದಾರೆ.

ಅವರಿಬ್ಬರೂ ಈಗ ಮದೀನದ ಪ್ರ್ಯಾಂತ್ಯ ಪ್ರದೇಶವನ್ನು ತಲುಪಿದ್ದಾರೆ. ನಡೆಯುತ್ತಿದ್ದಂತೆಯೇ ದೂರದ ಒಂದು ಗುಡಿಸಲಿನಿಂದ ಪುಟ್ಟ ಕಂದಮ್ಮಗಳ ಅಳು ಕೇಳಿ ಬರುತ್ತಿದೆ. ಗುಡಿಸಲಿಗೆ ಹತ್ತಿರವಾದಂತೆ ಅಳು ಇನ್ನಷ್ಟು ಜೋರಾಗಿ ಕೇಳಿ ಬಂತು. ಹತ್ತಿರ ಧಾವಿಸಿ ನೋಡಿದಾಗ ಹೆಂಗಸೊಬ್ಬಳು ತನ್ನ ಮಕ್ಕಳನ್ನು ಸುತ್ತಲೂ ಕೂರಿಸಿ, ಒಲೆಯಲ್ಲಿಟ್ಟ ಪಾತ್ರೆಗೆ ಸೌಟು ಹಿಡಿದು ಕೈಯಾಡಿಸುತ್ತಿದ್ದಾಳೆ. ಒಲೆಯ ಮೇಲಿನ ಪಾತ್ರದಲ್ಲಿನ ನೀರು ಕೊತಕೊತನೆ ಕುದಿಯುತ್ತಿತ್ತು. ಆಹಾರವೇನೋ ಅಂದುಕೊಂಡ ಉಮರ್, ಸೂಕ್ಷವಾಗಿ ನೋಡಿದಾಗ ಆದೃಶ್ಯವನ್ನು ನಂಬಲಾಗದೆ ಹೋದರು. ಹೌದು, ಬರೀ ಕಲ್ಲುಗಳು ಅವು.! ಕುದಿಯುವ ನೀರಿನಲ್ಲಿ ಅತ್ತಿಂದಿತ್ತ ಹೊರಳಾಡುತ್ತಿವೆ. ಮಕ್ಕಳ ರೋದನ ಮುಗಿಲು ಮುಟ್ಟುವಂತಿತ್ತು. ಇನ್ನೇನು ನಮಗೆಲ್ಲರಿಗೂ ಅಮ್ಮ ಉಣಬಡಿಸುವಳೆಂಬ ನಿರೀಕ್ಷೆ ಮಾತ್ರ ಕಣ್ಣೀರಿನಲ್ಲಿ ತೋಯ್ದ ಆ ಮುದ್ದು ಕಣ್ಣುಗಳಲ್ಲಿ. ಉಮರ್ ಮೂಕ ವಿಸ್ಮಿತರಾದರು. ತಕ್ಷಣ ಗುಡಿಸಲೊಳಗೆ ಹೋದರು. ಮಹಿಳೆಯನ್ನು ಯಾಕೆ ಈ ರೀತಿ ಮಾಡುತ್ತಿದ್ದೀರಿ ಅಂತ ವಿಚಾರಿಸಿದರು. ಆಗ " ಮಕ್ಕಳು ಹಸಿವಿನಿಂದ ಅಳುತ್ತಿದ್ದಾರೆ. ನನ್ನ ಬಳಿಯೋ ಆಹಾರ ತಯಾರಿಸಲು ಒಂದು ಕಾಳು ಧಾನ್ಯವೂ ಇಲ್ಲ. ಹಾಗಾಗಿ, ಅವರು ಅಳುತ್ತಲೇ ನಿದ್ದೆಗೆ ಜಾರುವ ತನಕ ಆಹಾರ ಬೇಯಿಸುವಂತೆ ಒಲೆಯಲ್ಲಿ ಕಲ್ಲುಗಳನ್ನು ಹಾಕಿ ಕೈಯಾಡಿಸುವಂತೆ ಮಾಡುತ್ತಿರುತ್ತೇನೆ. ನನ್ನ ಮಕ್ಕಳನ್ನು ಸಮಾಧಾನ ಪಡಿಸಲು ಬೇರೆ ದಾರಿಯಿರಲಿಲ್ಲ ಎಂದು ಆ ಮಹಿಳೆ ಹೇಳಿದಾಗ, ಅವರನ್ನು ಸಾಂತ್ವನ ಪಡಿಸಿ, ಅಸ್ಲಮ್ ಅವರನ್ನು ಕರೆದುಕೊಂಡು ನೇರ ಬೈತುಲ್ ಮಾಲ್ ನಿಂದ ಆಹಾರಕ್ಕೆ ಬೇಕಾದ ಸಾಮಗ್ರಿಗಳನ್ನು ಹೊತ್ತು ತರುತ್ತಾರೆ. ನಂತರ ಖಲೀಫ ಉಮರ್ ತನ್ನ ಕೈಯಾರೆ ಅವರಿಗೆ ರೊಟ್ಟಿ ತಯಾರಿಸಿ ಉಣಬಡಿಸುತ್ತಾರೆ. ಆ ಮಹಿಳೆ ಹಾಗೂ ಮಕ್ಕಳು ಸಂತೃಪ್ತರು ಎಂದೆನಿಸಿದಾಗಲೇ, ಮರುದಿನ ಖಲೀಫರ ಸನ್ನಿಧಿಗೆ ಬಂದು ತಮ್ಮ ಬೇಡಿಕೆಗಳನ್ನು ತಿಳಿಸಿ ಎನ್ನುತ್ತಾ ಖಲೀಫ ಉಮರ್ ಅಲ್ಲಿಂದ ಹೊರಡುವುದು. ಆ ಮಹಿಳೆ ಮರುದಿನ ಖಲೀಫರ ಸನ್ನಿಧಿಗೆ ತಲುಪುವ ವರೆಗೂ ನಿನ್ನೆಯ ರಾತ್ರಿ ನಮಗೆ ಆಹಾರ ನೀಡಿದ್ದು ಹಝ್ರತ್ ಉಮರ್ ಅವರೆಂದು ತಿಳಿದಿರಲಿಲ್ಲ.

ನಿಜಕ್ಕೂ ಈ ಒಂದು ಘಟನೆ ಜಗತ್ತಿನ ಎಲ್ಲಾ ಆಡಳಿತಗಾರಿಗೂ ಒಬ್ಬ ನಿಷ್ಟಾವಂತ ಆಡಳಿತಕಾರ ಹೇಗಿರಬೇಕು ಎಂಬುದನ್ನು ತಿಳಿಸಿಕೊಡುತ್ತದೆ. ಕಳೆದ ದಿನ ಕೆನ್ಯಾದ ಮೊಂಬಾಸ ಎಂಬಲ್ಲಿ ನಡೆದ ಮನಕಲಕುವ ಒಂದು ಘಟನೆಯ, ಖಲೀಫ ಉಮರ್ ಆಡಳಿತದ ಇದೇ ಘಟನೆಯನ್ನು ಕಣ್ಣ ಮುಂದೆ ಕಟ್ಟಿಕೊಡುವಂತೆ ಮಾಡಿತು. ಎಂಟು ಮಕ್ಕಳ ವಿಧವೆ ತಾಯೊಯೊಬ್ಬರು ಆಹಾರವಿಲ್ಲದೆ ಕಲ್ಲುಗಳನ್ನು ಬೇಯಿಸಿದ ದೃಶ್ಯಗಳು ಟ್ವಿಟರ್ ಸೇರಿದಂತೆ ಮಾಧ್ಯಮಗಳಲ್ಲಿ ವರದಿಯಾಗಿದೆ. ಇದೀಗ ಅಂತರರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗುತ್ತಿದ್ದಂತೆ ಕೆನ್ಯಾದ ನಾಗರಿಕರು ಆ ಮಹಿಳೆಯ ನೆರವಿಗೆ ಬಂದಿದ್ದಾರೆ.
*******************************************************************************





ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂದಿನಿಂದ 'ಸಮಸ್ತ'ದ ಆನ್ ಲೈನ್ ತರಗತಿಗಳು ಆರಂಭ

ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಒಕ್ಕೂಟದ (SKJU)ಅಧೀನದಲ್ಲಿ‌ ಕಾರ್ಯಾಚರಿಸುವ ಸಮಸ್ತ ಕೇರಳ ಇಸ್ಲಾಂ ಮತ ವಿದ್ಯಾಭ್ಯಾಸ ಬೋರ್ಡ್‌ ಅಂಗೀಕೃತ ಮದ್ರಸಗಳ ವಿದ್ಯಾರ್ಥಿಗಳಿಗೆ ನವ ಅಧ್ಯಯನ ವರ್ಷ ಇಂದಿನಿಂದ ಆರಂಭಗೊಂಡಿದೆ. ವಿಶೇಷ ಅಂದ್ರೆ, ಈ ಬಾರಿ ತರಗತಿಗಳ ಪ್ರಾರಂಭೋತ್ಸವದ ಸಂಭ್ರಮಗಳಿಲ್ಲದೆ, ಮದ್ರಸಾ ಕಟ್ಟಡಗಳು ತೆರೆಯದೇ, ಹತ್ತು ಸಾವಿರಕ್ಕೂ ಮಿಕ್ಕ ಮದ್ರಸಗಳ ಹನ್ನೆರಡು ಲಕ್ಷ ವಿದ್ಯಾರ್ಥಿಗಳು ಅವರವರ ಮನೆಗಳಲ್ಲಿಯೇ ಕುಳಿತು ತರಗತಿಗಳಲ್ಲಿ ಪಾಲ್ಗೊಳ್ಳುತ್ತಿರುವುದು ಎಂಬುದು.  ಆನ್ ಲೈನ್ ತರಗತಿಗಳಿಗಾಗಿ, ಸಮಸ್ತ ಈ ಹಿಂದೆಯೇ ಎಲ್ಲಾ ಸಿದ್ಧತೆಗಳನ್ನು ನಡೆಸಿದ್ದು, ವಿದ್ಯಾಭ್ಯಾಸ ಬೋರ್ಡ್‌ ಅದಕ್ಕಾಗಿ ಆರು ಕ್ಯಾಮರಾ ಯುನಿಟ್ ಗಳ ಕ್ಲಾಸ್ ರೂಂಗಳು ,22 ಪರಿಣತರಾದ ಅಧ್ಯಾಪಕರನ್ನು ನೇಮಕಗೊಳಿಸಿದೆ.  ತರಗತಿ ಆರಂಭದಿಂದ ಕೊನೆಯವರೆಗೂ ವಿದ್ಯಾರ್ಥಿ ಜೊತೆ ಪೋಷಕರು ಕುಳಿತಿರಬೇಕು.ಹೋಂ ವರ್ಕ್ ನೀಡಿದರೆ, ಅದನ್ನು ಮಾಡಿ, ಮುಂದೆ ಮದ್ರಸಗಳಲ್ಲಿ ತರಗತಿ ಆರಂಭಗೊಳ್ಳುವಾಗ ಮೌಲ್ಯಮಾಪನಕ್ಕಾಗಿ ಅಧ್ಯಾಪಕರಿಗೆ ತೋರಿಸಬೇಕು. ಮನೆಯಲ್ಲಿ ತರಗತಿಯ ವಾತಾವರಣವನ್ನು ಒದಗಿಸಿಕೊಟ್ಟು,ವಿದ್ಯಾರ್ಥಿಗಳಿಗೆ ಮನೆಯವರು ಸಹಕರಿಸಬೇಕು. ಅಲ್ಲದೇ, ಮದ್ರಸಾ ಹಾಗೂ ಜಮಾಅತ್ ಕಮಿಟಿಗಳು ಸೇರಿ, ಆನ್‌ಲೈನ್ ತರಗತಿಗಳು ಆಯಾ ಮದ್ರಸಗಳ ವಿದ್ಯಾರ್ಥಿಗಳಿಗೆ ಅವರವರ ಮನೆಗಳಲ್ಲಿಯೇ ಸುಲಭವಾಗಿ ತಲುಪುವಂತೆ ಎಲ್ಲಾ ರೀತಿಯಲ್ಲಿ ಸಹಕಾರವನ್ನು ನೀಡಬೇಕು. ಮದ್ರಸಗಳು ತ...

ಅರಬಿ ಭಾಷೆ : ಇತಿಹಾಸ ಮತ್ತು ವರ್ತಮಾನ

✒ ನಿಝಾಮ್ ಅನ್ಸಾರಿ ಭಾಷೆ ಮನುಷ್ಯನ ಸವಿಶೇಷತೆಗಳಲ್ಲೊಂದು. ಚಿಂತನೆಗಳು ಮತ್ತು ಅಭಿರುಚಿಗಳ ಆಶಯವನ್ನು ಅಭಿವ್ಯಕ್ತಿಗೊಳಿಸುವ ಅಥವಾ ಹೊರ ಹಾಕುವ ಶಬ್ದಗಳ ಒಂದು ಸಮೂಹವಾಗಿದೆ ಇದು. ಪ್ರಪಂಚದಲ್ಲಿ ಇಂದು ಹಲವು ಅಧಿಕೃತವಾಗಿರುವ ಭಾಷೆಗಳು ಅಸ್ತಿತ್ವದಲ್ಲಿವೆ.ಅದರಲ್ಲೂ ಪ್ರಾದೇಶಿಕ ಭಾಷೆಗಳು ಬೇರೇನೆ. ಆದರೆ ಈ ಎಲ್ಲಾ ಭಾಷೆಗಳ ಪೈಕಿ ರಾಜನಂತೆ ಇರೋದು ಅರಬಿ ಭಾಷೆ ಮಾತ್ರ . ಒಂದು ಕಾಲದಲ್ಲಿ ಇಡೀ ಜಗತ್ತನ್ನೇ ನಿಯಂತ್ರಿಸುವ ತಾಕತ್ತಿದ್ದ ಭಾಷೆಯಾಗಿತ್ತು ಅರಬಿ. ಯಾವ ರೀತಿಯಲ್ಲಿ ಈಗ ಆಂಗ್ಲ ಭಾಷೆಗೆ ಪ್ರಾಧಾನ್ಯತೆ, ಜಾಗತಿಕ ಅಂಗೀಕಾರ ಇದೆಯೋ ಅದೇ ರೀತಿಯಲ್ಲಿ ಅಂದು ಅರಬಿ ಭಾಷೆ ಸ್ಥಾನ ಪಡೆದಿತ್ತು. ಬಲದಿಂದ ಎಡಕ್ಕೆ ಇರುವ ಕೆಲವೊಂದು ಭಾಷೆಗಳಲ್ಲಿ ಅರಬೀ ಕೂಡಾ ಒಂದು. ಸೈಮಟಿಕ್ ಭಾಷೆಗಳಲ್ಲೊಂದಾದ ಅರಬಿ ಜಗತ್ತಿನ ಅತ್ಯಂತ ಪುರಾತನ ಭಾಷೆಗಳ ಪೈಕಿ ಒಂದು ಕೂಡಾ . ಐಕ್ಯ ರಾಷ್ಟ್ರ ಸಂಘದ ಅಂಗೀಕೃತ ಭಾಷೆಯಾದ ಅರಬಿ, 26 ದೇಶಗಳ ಅಧಿಕೃತ ಭಾಷೆಯಾಗಿದೆ‌. ಆಫ್ರಿಕನ್ ಯೂನಿಯನ್ ಆರ್ಗನೈಸೇಷನ್ ಇಸ್ಲಾಮಿಕ್ ಕಾನ್ಫೆರನ್ಸ್ ನಂತಹ ಹಲವು ಅಂತಾರಾಷ್ಟ್ರೀಯ ಸಂಸ್ಥೆಗಳು ಅರಬಿ ಭಾಷೆಯನ್ನು ಅಧಿಕೃತ ಭಾಷೆಯಾಗಿ ಅಂಗೀಕರಿಸಿದೆ. ಅರಬಿ ಭಾಷೆ: ಹುಟ್ಟು ಮತ್ತು ಬೆಳವಣಿಗೆ ಬಿ.ಸಿ 1900 ರಲ್ಲಿ ಜೀವಿಸಿದ್ದ 'ಯಅರೂಬ್ ಇಬ್ನ್ ಖಹ್ತಾನ್' ಎಂಬವರನ್ನು ಅರಬಿ ಭಾಷೆಯ ಪಿತಾಮಹ ಎಂದು ಕರೆಯಲಾಗುತ್ತದೆ. ಇವರ ನಾಮಕ್ಕೆ ಹೊಂದಿಕೊಂಡು 'ಅರಬಿ' ಎಂಬ ಹೆಸರು...

Payyakki Usthad Islamic Academy -Ansariya College of Islamic Science10th Anniversary & Convocation Program-#Photo Gallery......