ವಿಷಯಕ್ಕೆ ಹೋಗಿ

ಆಹಾರವಿಲ್ಲದೆ ಕಲ್ಲುಗಳನ್ನು ಬೇಯಿಸಿದಳು ಆ ಬಡತಾಯಿ..


ಖಲೀಫ ಉಮರ್ ಆಡಳಿತವನ್ನು ನೆನಪಿಸಿದ ಕೆನ್ಯಾದ ಈ ಘಟನೆ..


ಅದು ಹಝ್ರತ್ ಉಮರ್ (ರ) ರ ಆಡಳಿತ ಕಾಲ. ತನ್ನ ಆಡಳಿತ ಅವಧಿಯಲ್ಲಿ, ರಾಷ್ಟ್ರದ ಯಾರೂ ಕೂಡಾ ಸಂಕಷ್ಟಕ್ಕೆ ಗುರಿಯಾಗಬಾರದೆಂಬ ಮಹತ್ವದ ನಿರ್ಧಾರ ಉಮರ್ ಅವರದ್ದಾಗಿತ್ತು. ಹಾಗಾಗಿ, ಹಗಲು ರಾತ್ರಿಯೆನ್ನದೆ ಜನರಿಗಾಗಿ, ಅವರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಮುಡಿಪಾಗಿಡುತ್ತಿದ್ದರು. ಅದಕ್ಕಾಗಿಯೇ ಸಿಬ್ಬಂದಿಗಳನ್ನು ನೇಮಿಸಿದ್ದರಲ್ಲದೆ, ರಾತ್ರಿ ಪಾಳಿಯಲ್ಲಿ ತಾನೇ ಸ್ವತಃ ಜನರ ಸುಖ ದುಃಖಗಳನ್ನು ಅರಿಯಲೆಂದು ಒಬ್ಬರನ್ನು ಜೊತೆಗೂಡಿಸಿ ಹೊರಟು ಬಿಡುತ್ತಿದ್ದರು.



ಅದೊಂದು ದಿನ ರಾತ್ರಿ, ಇಡೀ ಊರಿಗೆ ಊರೇ ನಿಶ್ಯಬ್ದವಾಗಿದೆ. ಜನರು ಶಾಂತ ನಿದ್ರೆಯಲ್ಲಿ ಮುಳುಗಿದ್ದಾರೆ. ಹಝ್ರತ್ ಉಮರ್ ತನ್ನ ಜೊತೆ ಅಸ್ಲಮ್ ಅವರನ್ನು ಜೊತೆಗೂಡಿಸಿಕೊಂಡು ಅರೇಬಿಯಾ ಮರುಭೂಮಿಯ ಪ್ರತಿಯೊಂದು ಗುಡಿಸಲುಗಳ ಹಾದಿಯಾಗಿ ಸಾಗುತ್ತಲಿದ್ದಾರೆ. ಹೌದು, ರಾಜಠೀವಿಯಲ್ಲಿ ಮೆರೆಯಬೇಕಿದ್ದ, ರಾಜಾತಿಥ್ಯವನ್ನುಂಡು ಮಲಗಬೇಕಾಗಿದ್ದ ಸಮಯವದು. ಇಲ್ಲ ತನ್ನ ಎಂದಿನ ದಿನಚರಿಯಂತೆ ಇದು ನಡೆಯಲೇಬೇಕು. ಪ್ರಜೆಗಳೆಲ್ಲರೂ ಉಮರ್ ನ ಆಡಳಿತದಲ್ಲಿ ಸುಖ ನಿದ್ರೆ ಅನುಭವಿಸಿದರೆ ಮಾತ್ರ ತನಗೂ ನಿದ್ರಿಸಲು ಸಾಧ್ಯ. ಹಾಗಾಗಿ ಉಮರ್ ಖಲೀಫರ ವೇಷ ಕಳಚಿಟ್ಟು ಒಬ್ಬ ಸಾಮಾನ್ಯನಂತೆ ಈಗ ಹೊರಟಿದ್ದಾರೆ.

ಅವರಿಬ್ಬರೂ ಈಗ ಮದೀನದ ಪ್ರ್ಯಾಂತ್ಯ ಪ್ರದೇಶವನ್ನು ತಲುಪಿದ್ದಾರೆ. ನಡೆಯುತ್ತಿದ್ದಂತೆಯೇ ದೂರದ ಒಂದು ಗುಡಿಸಲಿನಿಂದ ಪುಟ್ಟ ಕಂದಮ್ಮಗಳ ಅಳು ಕೇಳಿ ಬರುತ್ತಿದೆ. ಗುಡಿಸಲಿಗೆ ಹತ್ತಿರವಾದಂತೆ ಅಳು ಇನ್ನಷ್ಟು ಜೋರಾಗಿ ಕೇಳಿ ಬಂತು. ಹತ್ತಿರ ಧಾವಿಸಿ ನೋಡಿದಾಗ ಹೆಂಗಸೊಬ್ಬಳು ತನ್ನ ಮಕ್ಕಳನ್ನು ಸುತ್ತಲೂ ಕೂರಿಸಿ, ಒಲೆಯಲ್ಲಿಟ್ಟ ಪಾತ್ರೆಗೆ ಸೌಟು ಹಿಡಿದು ಕೈಯಾಡಿಸುತ್ತಿದ್ದಾಳೆ. ಒಲೆಯ ಮೇಲಿನ ಪಾತ್ರದಲ್ಲಿನ ನೀರು ಕೊತಕೊತನೆ ಕುದಿಯುತ್ತಿತ್ತು. ಆಹಾರವೇನೋ ಅಂದುಕೊಂಡ ಉಮರ್, ಸೂಕ್ಷವಾಗಿ ನೋಡಿದಾಗ ಆದೃಶ್ಯವನ್ನು ನಂಬಲಾಗದೆ ಹೋದರು. ಹೌದು, ಬರೀ ಕಲ್ಲುಗಳು ಅವು.! ಕುದಿಯುವ ನೀರಿನಲ್ಲಿ ಅತ್ತಿಂದಿತ್ತ ಹೊರಳಾಡುತ್ತಿವೆ. ಮಕ್ಕಳ ರೋದನ ಮುಗಿಲು ಮುಟ್ಟುವಂತಿತ್ತು. ಇನ್ನೇನು ನಮಗೆಲ್ಲರಿಗೂ ಅಮ್ಮ ಉಣಬಡಿಸುವಳೆಂಬ ನಿರೀಕ್ಷೆ ಮಾತ್ರ ಕಣ್ಣೀರಿನಲ್ಲಿ ತೋಯ್ದ ಆ ಮುದ್ದು ಕಣ್ಣುಗಳಲ್ಲಿ. ಉಮರ್ ಮೂಕ ವಿಸ್ಮಿತರಾದರು. ತಕ್ಷಣ ಗುಡಿಸಲೊಳಗೆ ಹೋದರು. ಮಹಿಳೆಯನ್ನು ಯಾಕೆ ಈ ರೀತಿ ಮಾಡುತ್ತಿದ್ದೀರಿ ಅಂತ ವಿಚಾರಿಸಿದರು. ಆಗ " ಮಕ್ಕಳು ಹಸಿವಿನಿಂದ ಅಳುತ್ತಿದ್ದಾರೆ. ನನ್ನ ಬಳಿಯೋ ಆಹಾರ ತಯಾರಿಸಲು ಒಂದು ಕಾಳು ಧಾನ್ಯವೂ ಇಲ್ಲ. ಹಾಗಾಗಿ, ಅವರು ಅಳುತ್ತಲೇ ನಿದ್ದೆಗೆ ಜಾರುವ ತನಕ ಆಹಾರ ಬೇಯಿಸುವಂತೆ ಒಲೆಯಲ್ಲಿ ಕಲ್ಲುಗಳನ್ನು ಹಾಕಿ ಕೈಯಾಡಿಸುವಂತೆ ಮಾಡುತ್ತಿರುತ್ತೇನೆ. ನನ್ನ ಮಕ್ಕಳನ್ನು ಸಮಾಧಾನ ಪಡಿಸಲು ಬೇರೆ ದಾರಿಯಿರಲಿಲ್ಲ ಎಂದು ಆ ಮಹಿಳೆ ಹೇಳಿದಾಗ, ಅವರನ್ನು ಸಾಂತ್ವನ ಪಡಿಸಿ, ಅಸ್ಲಮ್ ಅವರನ್ನು ಕರೆದುಕೊಂಡು ನೇರ ಬೈತುಲ್ ಮಾಲ್ ನಿಂದ ಆಹಾರಕ್ಕೆ ಬೇಕಾದ ಸಾಮಗ್ರಿಗಳನ್ನು ಹೊತ್ತು ತರುತ್ತಾರೆ. ನಂತರ ಖಲೀಫ ಉಮರ್ ತನ್ನ ಕೈಯಾರೆ ಅವರಿಗೆ ರೊಟ್ಟಿ ತಯಾರಿಸಿ ಉಣಬಡಿಸುತ್ತಾರೆ. ಆ ಮಹಿಳೆ ಹಾಗೂ ಮಕ್ಕಳು ಸಂತೃಪ್ತರು ಎಂದೆನಿಸಿದಾಗಲೇ, ಮರುದಿನ ಖಲೀಫರ ಸನ್ನಿಧಿಗೆ ಬಂದು ತಮ್ಮ ಬೇಡಿಕೆಗಳನ್ನು ತಿಳಿಸಿ ಎನ್ನುತ್ತಾ ಖಲೀಫ ಉಮರ್ ಅಲ್ಲಿಂದ ಹೊರಡುವುದು. ಆ ಮಹಿಳೆ ಮರುದಿನ ಖಲೀಫರ ಸನ್ನಿಧಿಗೆ ತಲುಪುವ ವರೆಗೂ ನಿನ್ನೆಯ ರಾತ್ರಿ ನಮಗೆ ಆಹಾರ ನೀಡಿದ್ದು ಹಝ್ರತ್ ಉಮರ್ ಅವರೆಂದು ತಿಳಿದಿರಲಿಲ್ಲ.

ನಿಜಕ್ಕೂ ಈ ಒಂದು ಘಟನೆ ಜಗತ್ತಿನ ಎಲ್ಲಾ ಆಡಳಿತಗಾರಿಗೂ ಒಬ್ಬ ನಿಷ್ಟಾವಂತ ಆಡಳಿತಕಾರ ಹೇಗಿರಬೇಕು ಎಂಬುದನ್ನು ತಿಳಿಸಿಕೊಡುತ್ತದೆ. ಕಳೆದ ದಿನ ಕೆನ್ಯಾದ ಮೊಂಬಾಸ ಎಂಬಲ್ಲಿ ನಡೆದ ಮನಕಲಕುವ ಒಂದು ಘಟನೆಯ, ಖಲೀಫ ಉಮರ್ ಆಡಳಿತದ ಇದೇ ಘಟನೆಯನ್ನು ಕಣ್ಣ ಮುಂದೆ ಕಟ್ಟಿಕೊಡುವಂತೆ ಮಾಡಿತು. ಎಂಟು ಮಕ್ಕಳ ವಿಧವೆ ತಾಯೊಯೊಬ್ಬರು ಆಹಾರವಿಲ್ಲದೆ ಕಲ್ಲುಗಳನ್ನು ಬೇಯಿಸಿದ ದೃಶ್ಯಗಳು ಟ್ವಿಟರ್ ಸೇರಿದಂತೆ ಮಾಧ್ಯಮಗಳಲ್ಲಿ ವರದಿಯಾಗಿದೆ. ಇದೀಗ ಅಂತರರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗುತ್ತಿದ್ದಂತೆ ಕೆನ್ಯಾದ ನಾಗರಿಕರು ಆ ಮಹಿಳೆಯ ನೆರವಿಗೆ ಬಂದಿದ್ದಾರೆ.
*******************************************************************************





ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಅಳಿವಿನಂಚಿನಲ್ಲಿರುವ ಸಾಂಪ್ರದಾಯಿಕ ಕೃಷಿ ಪರಂಪರೆ-* ನಿಝಾಮ್ ಅನ್ಸಾರಿ

ಭಾರತವು ಕೃಷಿ ಅವಲಂಬಿತ ಹಳ್ಳಿಗಳನ್ನೊಳಗೊಂಡ ಸಮೃದ್ಧ ದೇಶ. ದೇಶದ ಬೆಳವಣಿಗೆಯಲ್ಲಿ ವ್ಯವಸಾಯದ ಪಾತ್ರ ಬಹುಮುಖ್ಯವಾದುದು. ತಂತ್ರಜ್ಞಾನವು ದೇಶಕ್ಕೆ ಯಾವ ರೀತಿಯಲ್ಲಿ ಕೊಡುಗೆಗಳನ್ನು ನೀಡುತ್ತವೆಯೋ ಅದೇ ರೀತಿಯಲ್ಲಿ ಕೃಷಿಯ ಕೊಡುಗೆಯೂ ಕೂಡಾ ಅಪಾರವಾದುದು. ಆದರೆ ಇತ್ತೀಚಿನ ದಿನಗಳಲ್ಲಿ ಹಳ್ಳಿಗಳಲ್ಲಿ ವ್ಯವಸಾಯವು ಇಳಿಮುಖವಾಗುತ್ತಿದೆ. ಕೇವಲ ಬೆರಳೆಣಿಕೆಯಷ್ಟು ಮಂದಿ ಮಾತ್ರ ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವವರನ್ನು ಕಾಣಬಹುದಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿನ ಜನರು ವಿದ್ಯಾವಂತರಾಗುತ್ತಲೇ ತಮ್ಮ ಪಾರಂಪರಿಕ ಕುಲ ಕಸುಬನ್ನು ನಿರ್ಲಕ್ಷಿಸಿ ನಗರಗಳತ್ತ ವಲಸೆ ಹೋಗುತ್ತಿದ್ದಾರೆ.ಕೈ ಕೆಸರು ಮಾಡಿಕೊಂಡು ದುಡಿಯುವವರ ಕೊರತೆ ಅಗಾಧವಾಗಿ ಎದ್ದು ಕಾಣುತ್ತಿದೆ. ಇಂದಿನ ನವ ತಲೆಮಾರು ಹಳ್ಳಿಗಳು ಕೇವಲ ವೃದ್ಧರಿಗೆ ಮಾತ್ರ ಯೋಗ್ಯವಾದುದು ಎಂದು ತಿಳಿದಂತಿದೆ. `ನೇಗಿಲಾ ಹಿಡಿದಾ ಹೊಲದಲಿ ಹಾಡುತ ಉಳುವಾ ಯೋಗಿಯ ನೋಡಲ್ಲಿ’ ಎಂದು ಕುವೆಂಪುರಂತಹ ಖ್ಯಾತ ಕವಿಗಳಿಂದ ಕೊಂಡಾಡಲ್ಪಟ್ಟ ಕೃಷಿ ಚಟುವಟಿಕೆಗಳಿಂದು ಕಣ್ಮರೆಯಾಗಿದೆ. ನೇಗಿಲಿನಂತಹ ಕೃಷಿ ಸಲಕರಣೆಗಳು ಇಂದು ಮ್ಯೂಸಿಯಂ ಸೇರಿಬಿಟ್ಟಿವೆ. ಇದರೊಂದಿಗೆ ಅತ್ಯಂತ ಸುಂದರವಾದ ಕೃಷಿ ಪರಂಪರೆ ಮೂಲೆಗುಂಪಾಗುತ್ತಿದೆ. ಹಳೆಯ ಕಾಲದ ಸಾಂಪ್ರದಾಯಿಕ ಬೇಸಾಯಕ್ಕೆ ಉಪಯೋಗವಾಗುತ್ತಿದ್ದ ಪರಿಕರಗಳ ಸ್ಥಾನವನ್ನು ಟ್ರಾಕ್ಟರ್,ಟಿಲ್ಲರ್ ಗಳಂತಹ ಯಂತ್ರಗಳು ಆಕ್ರಮಿಸಿಕೊಂಡಿವೆ. ಭತ್ತ ನಾಟಿ ಮಾಡುವ ಮಹಿಳೆಯರಿಂದ ಕೇಳಿ ಬರು...

ಅರಬಿ ಭಾಷೆ : ಇತಿಹಾಸ ಮತ್ತು ವರ್ತಮಾನ

✒ ನಿಝಾಮ್ ಅನ್ಸಾರಿ ಭಾಷೆ ಮನುಷ್ಯನ ಸವಿಶೇಷತೆಗಳಲ್ಲೊಂದು. ಚಿಂತನೆಗಳು ಮತ್ತು ಅಭಿರುಚಿಗಳ ಆಶಯವನ್ನು ಅಭಿವ್ಯಕ್ತಿಗೊಳಿಸುವ ಅಥವಾ ಹೊರ ಹಾಕುವ ಶಬ್ದಗಳ ಒಂದು ಸಮೂಹವಾಗಿದೆ ಇದು. ಪ್ರಪಂಚದಲ್ಲಿ ಇಂದು ಹಲವು ಅಧಿಕೃತವಾಗಿರುವ ಭಾಷೆಗಳು ಅಸ್ತಿತ್ವದಲ್ಲಿವೆ.ಅದರಲ್ಲೂ ಪ್ರಾದೇಶಿಕ ಭಾಷೆಗಳು ಬೇರೇನೆ. ಆದರೆ ಈ ಎಲ್ಲಾ ಭಾಷೆಗಳ ಪೈಕಿ ರಾಜನಂತೆ ಇರೋದು ಅರಬಿ ಭಾಷೆ ಮಾತ್ರ . ಒಂದು ಕಾಲದಲ್ಲಿ ಇಡೀ ಜಗತ್ತನ್ನೇ ನಿಯಂತ್ರಿಸುವ ತಾಕತ್ತಿದ್ದ ಭಾಷೆಯಾಗಿತ್ತು ಅರಬಿ. ಯಾವ ರೀತಿಯಲ್ಲಿ ಈಗ ಆಂಗ್ಲ ಭಾಷೆಗೆ ಪ್ರಾಧಾನ್ಯತೆ, ಜಾಗತಿಕ ಅಂಗೀಕಾರ ಇದೆಯೋ ಅದೇ ರೀತಿಯಲ್ಲಿ ಅಂದು ಅರಬಿ ಭಾಷೆ ಸ್ಥಾನ ಪಡೆದಿತ್ತು. ಬಲದಿಂದ ಎಡಕ್ಕೆ ಇರುವ ಕೆಲವೊಂದು ಭಾಷೆಗಳಲ್ಲಿ ಅರಬೀ ಕೂಡಾ ಒಂದು. ಸೈಮಟಿಕ್ ಭಾಷೆಗಳಲ್ಲೊಂದಾದ ಅರಬಿ ಜಗತ್ತಿನ ಅತ್ಯಂತ ಪುರಾತನ ಭಾಷೆಗಳ ಪೈಕಿ ಒಂದು ಕೂಡಾ . ಐಕ್ಯ ರಾಷ್ಟ್ರ ಸಂಘದ ಅಂಗೀಕೃತ ಭಾಷೆಯಾದ ಅರಬಿ, 26 ದೇಶಗಳ ಅಧಿಕೃತ ಭಾಷೆಯಾಗಿದೆ‌. ಆಫ್ರಿಕನ್ ಯೂನಿಯನ್ ಆರ್ಗನೈಸೇಷನ್ ಇಸ್ಲಾಮಿಕ್ ಕಾನ್ಫೆರನ್ಸ್ ನಂತಹ ಹಲವು ಅಂತಾರಾಷ್ಟ್ರೀಯ ಸಂಸ್ಥೆಗಳು ಅರಬಿ ಭಾಷೆಯನ್ನು ಅಧಿಕೃತ ಭಾಷೆಯಾಗಿ ಅಂಗೀಕರಿಸಿದೆ. ಅರಬಿ ಭಾಷೆ: ಹುಟ್ಟು ಮತ್ತು ಬೆಳವಣಿಗೆ ಬಿ.ಸಿ 1900 ರಲ್ಲಿ ಜೀವಿಸಿದ್ದ 'ಯಅರೂಬ್ ಇಬ್ನ್ ಖಹ್ತಾನ್' ಎಂಬವರನ್ನು ಅರಬಿ ಭಾಷೆಯ ಪಿತಾಮಹ ಎಂದು ಕರೆಯಲಾಗುತ್ತದೆ. ಇವರ ನಾಮಕ್ಕೆ ಹೊಂದಿಕೊಂಡು 'ಅರಬಿ' ಎಂಬ ಹೆಸರು...

ಕೋವಿಡ್ ಕಾಲದ ಓದು: ಚಂದ್ರನ ಚೂರು

'ಚಂದ್ರನ ಚೂರು' ಕೃತಿಯ ಹೆಸರು ಕೇಳಿದಾಗ ನಿಜವಾಗಿಯೂ ಅದೊಂದು ಕಾದಂಬರಿಯಾಗಿರಬಹುದು ಎಂದು ಭಾವಿಸಿದ್ದೆ. ಆದರೆ, ಪುಸ್ತಕ ಕೈಗೆ ತಲುಪಿದಾಗಲೇ ಗೊತ್ತಾಗಿದ್ದು, ಅದೊಂದು ಚಂದ್ರಲೋಕಕ್ಕೆ ಕೊಂಡೊಯ್ಯುವ ಅದ್ಭುತ ಕೃತಿ ಅಂತ. ತಂದೆ ಕುವೆಂಪು ಅವರ ಸಾಹಿತ್ಯದ ಹಾದಿಯಲ್ಲೇ ನಡೆದರೂ, ತೇಜಸ್ವಿಯವರ ಸಾಹಿತ್ಯವು ನಿಸರ್ಗ ವಿಸ್ಮಯ, ಭೂಗೋಳ, ಜೀವಶಾಸ್ತ್ರ, ಭತಶಾಸ್ತ್ರ, ಇತಿಹಾಸ ಹೀಗೇ ಎಲ್ಲಾ ಶಾಸ್ತ್ರಗಳ ಮಿಶ್ರಣ ರಸಾಯನ ಎಂದೇ ಹೇಳಬಹುದು. ಚಂದ್ರನ ಚೂರು ಚಂದ್ರ ಲೋಕದ ವಿಸ್ಮಯ ದೃಶ್ಯಗಳನ್ನು ಕಟ್ಟಿಕೊಡುವ ಚೊಚ್ಚಲ ಕೃತಿ. ಬಾಹ್ಯಾಕಾಶ, ಖಗೋಳ ಶಾಸ್ತ್ರ ವಿಷಯದಲ್ಲಿ ಆಸಕ್ತಿ ಇಲ್ಲದ ನನ್ನಂತವರನ್ನೂ ಇದು ಸರಾಗವಾಗಿ ಓದಿಸಿಕೊಂಡು ಹೋಗುವಂತೆ ಮಾಡುತ್ತದೆ, ಅದಕ್ಕೆ ಕಾರಣ, ತೇಜಸ್ವಿ ಅವರ ಬರವಣಿಗೆ ಹಾಗೂ ವಿವರಣೆಯ ಶೈಲಿ.. ಜಗತ್ತಿನಲ್ಲಿ ಮನುಷ್ಯನು ಚಂದ್ರನಲ್ಲಿಗೆ ಕಾಲಿಡುವುದಕ್ಕೂ ಮುನ್ನ, ಯಾವುದೆಲ್ಲಾ ರೀತಿಯ ಪರಿಶ್ರಮಗಳು ನಡೆದಿದ್ದವು ಹಾಗೂ ಭೂಮಂಡಲ ಮತ್ತು ಚಂದ್ರನ ಕುರಿತಾಘಿ ಯಾವುದೆಲ್ಲಾ ಆಯಾಮಗಳಲ್ಲಿ ಅಧ್ಯಯನಗಳಾಗಿದ್ದುವು ಎಂಬುದರ ಸಂಪೂರ್ಣ ವಿಷಯಗಳಿವೆ. ಚಂದ್ರನಲ್ಲಿ ತಲುಪಿದ ಮನುಷ್ಯನಿಗೆ ಆದ ಅನುಭವಗಳೇನು? ನೀಲ್ ಆಮ್Fಸ್ಟ್ರಾಂಗ್ ತಂಡದ ಚಂದ್ರಯಾನದ ರಸವತ್ತಾದ ಅನುಭವಗಳು, ಚಂದಿರನ ಮಣ್ಣಲ್ಲಿ ಅಮೇರಿಕದ ಫ್ಲಾಗ್ ಮತ್ತು ಬೋಡ್F ಸ್ಥಾಪಿಸಿ ಬಂದ ಆ ಧೀರ ತಂಡದ ಬೆರಗಾಗಿಸುವ ಕ್ಷಣ ಕ್ಷಣದ ವರದಿಗಳು ಈ ಕೃತಿಯ ಲೇಖನಗಳಲ್ಲಿ ಅಡಗಿದೆ. ಒಟ್ಟಿನಲ...