ವಿಷಯಕ್ಕೆ ಹೋಗಿ

ಕೋವಿಡ್ ಕಾಲದ ಓದು: ಚಂದ್ರನ ಚೂರು

'ಚಂದ್ರನ ಚೂರು' ಕೃತಿಯ ಹೆಸರು ಕೇಳಿದಾಗ ನಿಜವಾಗಿಯೂ ಅದೊಂದು ಕಾದಂಬರಿಯಾಗಿರಬಹುದು ಎಂದು ಭಾವಿಸಿದ್ದೆ. ಆದರೆ, ಪುಸ್ತಕ ಕೈಗೆ ತಲುಪಿದಾಗಲೇ ಗೊತ್ತಾಗಿದ್ದು, ಅದೊಂದು ಚಂದ್ರಲೋಕಕ್ಕೆ ಕೊಂಡೊಯ್ಯುವ ಅದ್ಭುತ ಕೃತಿ ಅಂತ. ತಂದೆ ಕುವೆಂಪು ಅವರ ಸಾಹಿತ್ಯದ ಹಾದಿಯಲ್ಲೇ ನಡೆದರೂ, ತೇಜಸ್ವಿಯವರ ಸಾಹಿತ್ಯವು ನಿಸರ್ಗ ವಿಸ್ಮಯ, ಭೂಗೋಳ, ಜೀವಶಾಸ್ತ್ರ, ಭತಶಾಸ್ತ್ರ, ಇತಿಹಾಸ ಹೀಗೇ ಎಲ್ಲಾ ಶಾಸ್ತ್ರಗಳ ಮಿಶ್ರಣ ರಸಾಯನ ಎಂದೇ ಹೇಳಬಹುದು.


ಚಂದ್ರನ ಚೂರು ಚಂದ್ರ ಲೋಕದ ವಿಸ್ಮಯ ದೃಶ್ಯಗಳನ್ನು ಕಟ್ಟಿಕೊಡುವ ಚೊಚ್ಚಲ ಕೃತಿ. ಬಾಹ್ಯಾಕಾಶ, ಖಗೋಳ ಶಾಸ್ತ್ರ ವಿಷಯದಲ್ಲಿ ಆಸಕ್ತಿ ಇಲ್ಲದ ನನ್ನಂತವರನ್ನೂ ಇದು ಸರಾಗವಾಗಿ ಓದಿಸಿಕೊಂಡು ಹೋಗುವಂತೆ ಮಾಡುತ್ತದೆ, ಅದಕ್ಕೆ ಕಾರಣ, ತೇಜಸ್ವಿ ಅವರ ಬರವಣಿಗೆ ಹಾಗೂ ವಿವರಣೆಯ ಶೈಲಿ..


ಜಗತ್ತಿನಲ್ಲಿ ಮನುಷ್ಯನು ಚಂದ್ರನಲ್ಲಿಗೆ ಕಾಲಿಡುವುದಕ್ಕೂ ಮುನ್ನ, ಯಾವುದೆಲ್ಲಾ ರೀತಿಯ ಪರಿಶ್ರಮಗಳು ನಡೆದಿದ್ದವು ಹಾಗೂ ಭೂಮಂಡಲ ಮತ್ತು ಚಂದ್ರನ ಕುರಿತಾಘಿ ಯಾವುದೆಲ್ಲಾ ಆಯಾಮಗಳಲ್ಲಿ ಅಧ್ಯಯನಗಳಾಗಿದ್ದುವು ಎಂಬುದರ ಸಂಪೂರ್ಣ ವಿಷಯಗಳಿವೆ. ಚಂದ್ರನಲ್ಲಿ ತಲುಪಿದ ಮನುಷ್ಯನಿಗೆ ಆದ ಅನುಭವಗಳೇನು? ನೀಲ್ ಆಮ್Fಸ್ಟ್ರಾಂಗ್ ತಂಡದ ಚಂದ್ರಯಾನದ ರಸವತ್ತಾದ ಅನುಭವಗಳು, ಚಂದಿರನ ಮಣ್ಣಲ್ಲಿ ಅಮೇರಿಕದ ಫ್ಲಾಗ್ ಮತ್ತು ಬೋಡ್F ಸ್ಥಾಪಿಸಿ ಬಂದ ಆ ಧೀರ ತಂಡದ ಬೆರಗಾಗಿಸುವ ಕ್ಷಣ ಕ್ಷಣದ ವರದಿಗಳು ಈ ಕೃತಿಯ ಲೇಖನಗಳಲ್ಲಿ ಅಡಗಿದೆ.


ಒಟ್ಟಿನಲ್ಲಿ, ನಾವು ಚಂದ್ರನ ಬಗ್ಗೆ ಇಷ್ಟಾದರೂ ತಿಳಿದುಕೊಳ್ಳುವಂತದ್ದಿದೆ ಅನ್ನುವ ಪ್ರಜ್ಞೆಯನ್ನು ಮೂಡಿಸುವುದರಲ್ಲಿ ಕೃತಿಯ ಪಾತ್ರ ಮಹತ್ತರವಾದದ್ದು. ಕಲ್ಪನಾ ಚಾವ್ಲಾ, ಸುನಿತಾ ವಿಲಿಯಮ್ಸ್ ಗಳಂತಹ ಬಾಹ್ಯಾಕಾಶ ವಿಜ್ಞಾನ ಪರಿಣತರ ಬಗ್ಗೆ ಇದರಲ್ಲಿ ಪರಾಮರ್ಶೆಗಳು ಇಲ್ಲದಿದ್ದರೂ, ಅವರ ಕುರಿತು ತಿಳಿದುಕೊಳ್ಳಲು ಸಾಕಷ್ಟಿದೆ ಎಂಬ ಯೋಚನೆ ಮೂಡಿಸುವುದರಲ್ಲಿ ಸಂದೇಹವಿಲ್ಲ.


ನಿಝಾಮ್ ಅನ್ಸಾರಿ ಕಲ್ಲಡ್ಕ

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ರಂಝಾನ್ ನೀಡುವ ಒಳಿತಿನ ಸಂದೇಶ...

-ನಿಝಾಮ್ ಅನ್ಸಾರಿ ಮತ್ತೆ ರಂಝಾನ್ ತಿಂಗಳ ಆಗಮನವಾಗಿದೆ. ಪ್ರತಿ ವರ್ಷವೂ ರಂಝಾನ್ ಬಗ್ಗೆ ಬರೆಯುವಾಗ ಅದರ ಶ್ರೇಷ್ಟತೆ, ವ್ರತಾನುಷ್ಟಾನದ ಪ್ರಾಧಾನ್ಯತೆಯನ್ನೇ ಹೆಚ್ಚಿನವರೂ ಬರೆಯುತ್ತಾರೆ. ಅದನ್ನೇ ಮಸೀದಿಗಳಲ್ಲೂ ಹೇಳುವುದಿದೆ. ಒಳ್ಳೆಯದೇ. ಕಾರಣ ಆಧುನಿಕ ಜನರು ಧರ್ಮದ ಪ್ರತಿಯೊಂದು ವಿಷಯಗಳಲ್ಲೂ ಸಡಿಲಿಕೆ ಬಯಸುತ್ತಾರೆ. ಅಂದರೆ ಅವರವರ ಜೀವನಕ್ರಮಗಳಿಗನುಸಾರವಾಗಿ ಧರ್ಮದ ನಿಯಮಗಳನ್ನು ಗಾಳಿಗೆ ತೂರುವಂತಹ ಕಾರ್ಯಗಳು ಎಲ್ಲಾ ಕಡೆ ನಡೆಯುತ್ತಲಿದೆ. ಹಾಗಿರುವಾಗ ರಂಝಾನ್ ವ್ರತಾಚರಣೆಯ ಮಹತ್ವವನ್ನು ಪ್ರತಿ ಬಾರಿಯೂ ಪ್ರಭಾಷಣ ವೇದಿಕೆಗಳಲ್ಲಿ, ಮಸೀದಿಗಳಲ್ಲಿ ಜನ ಸಾಮಾನ್ಯರಿಗೆ ನೆನಪಿಸುತ್ತಲಿರುವುದು ಸ್ವಾಗತಾರ್ಹವಾದುದು. ಮತ್ತು ಪ್ರಯೋಜನಕಾರಿಯೂ ಕೂಡಾ. ಯಾಕೆ ಈ ರೀತಿ ಬರೆದೆ ಅಂತ ಕೇಳಿದರೆ, ಇತ್ತೀಚೆಗೆ ವಾಟ್ಸಾಪ್ ನೊಳಗೆ ಕಣ್ಣಾಡಿಸಿದಾಗ ಕಂಡ ಕೆಲವೊಂದು ಸಂದೇಶಗಳು ಧರ್ಮದ ಬಗ್ಗೆ ಕೀಳರಿಮೆಯ ಭಾವ ತೋರುವವರಿಗೆ ತಕ್ಕ ಉತ್ತರ ನೀಡುವಂತಿತ್ತು. ಬಡ ಕುಟುಂಬಕ್ಕೆ ಮನೆ ಕಟ್ಟುವ ಸಹಾಯಾರ್ಥ ಕಲೆಕ್ಷನ್, ರಂಝಾನ್ ನಂತರದ ಬಡ ಹೆಣ್ಮಕ್ಕಳ ಮದುವೆಗಾಗಿ, ಮುಅಲ್ಲಿಂಗಳಿಗಾಗಿ ಹೀಗೇ ಹಲವು ರೀತಿಯಲ್ಲಿ ಯುವ-ವಯಸ್ಕರು ಸೇರಿ ಸಮುದಾಯದೊಂದಿಗಿನ ಸಾಮಾಜಿಕ ಕಾಳಜಿಗಾಗಿ ರಂಝಾನ್ ಅನ್ನು ಉಪಯೋಗಿಸುತ್ತಿದ್ದಾರೆನ್ನುವಾಗ ಧರ್ಮದ ಮನದಲ್ಲಿ ಅಭಿಮಾನ ಮೂಡುತ್ತಿದೆ. ಬುರ್ಖಾದ ವಿಚಾರದಲ್ಲಿ ಬಲತ್ಕಾರ ಮಾಡಲಾಗುತ್ತದೆ ಎಂದು ಆರೋಪಿಸುತ್ತಿರುವಾಗ, ಆ ವಾದವನ್ನು ವಿರ...

ನಾನುಗೌರಿ ವೆಬ್ ನಲ್ಲಿ ಪ್ರಕಟಗೊಂಡ ಬರಹಗಳು..ಓದಲು ಈ ಲಿಂಕ್ ಉಪಯೋಗಿಸಿ

-ನಿಝಾಮ್ ಅನ್ಸಾರಿ ಭಾರತದ ಉನ್ನತ ಶಿಕ್ಷಣದ ಮಹಾನ್‌ ಆಶಯಕ್ಕೆ ಎಳ್ಳುನೀರು ಬಿಡುತ್ತಿರುವ ಪ್ರಭುತ್ವ… http://naanugauri.com/indian-higher-education-shrinking-down- **************************************************************** ಲಾಕ್‌ಡೌನ್‌: ತುತ್ತು ಅನ್ನಕ್ಕಾಗಿ ಗುಳೆ ಹೊರಟವರ ಕತೆ http://naanugauri.com/lockdown-story-of-labour/ via @Naanu gauri ***************************************************************** ಪೌರತ್ವ ವಸೂಲಿ – ನಾಝಿ ಜರ್ಮನಿಯಿಂದ ಕಲಿಯಬೇಕಾದುದು… http://naanugauri.com/citizen-amendment-act-same-thing-happen-in-german-80-years-back- ****************************************************************** ಪ್ಲೇಗ್ ಹಾಗೂ ಕೋವಿಡ್ 19 ನಡುವೆ ಕೆಲವು ಹೋಲಿಕೆಗಳು http://naanugauri.com/covid-19-and-bubonic-plague-this-lead-to-renaissance/ via @Naanu gauri

ಅಳಿವಿನಂಚಿನಲ್ಲಿರುವ ಸಾಂಪ್ರದಾಯಿಕ ಕೃಷಿ ಪರಂಪರೆ-* ನಿಝಾಮ್ ಅನ್ಸಾರಿ

ಭಾರತವು ಕೃಷಿ ಅವಲಂಬಿತ ಹಳ್ಳಿಗಳನ್ನೊಳಗೊಂಡ ಸಮೃದ್ಧ ದೇಶ. ದೇಶದ ಬೆಳವಣಿಗೆಯಲ್ಲಿ ವ್ಯವಸಾಯದ ಪಾತ್ರ ಬಹುಮುಖ್ಯವಾದುದು. ತಂತ್ರಜ್ಞಾನವು ದೇಶಕ್ಕೆ ಯಾವ ರೀತಿಯಲ್ಲಿ ಕೊಡುಗೆಗಳನ್ನು ನೀಡುತ್ತವೆಯೋ ಅದೇ ರೀತಿಯಲ್ಲಿ ಕೃಷಿಯ ಕೊಡುಗೆಯೂ ಕೂಡಾ ಅಪಾರವಾದುದು. ಆದರೆ ಇತ್ತೀಚಿನ ದಿನಗಳಲ್ಲಿ ಹಳ್ಳಿಗಳಲ್ಲಿ ವ್ಯವಸಾಯವು ಇಳಿಮುಖವಾಗುತ್ತಿದೆ. ಕೇವಲ ಬೆರಳೆಣಿಕೆಯಷ್ಟು ಮಂದಿ ಮಾತ್ರ ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವವರನ್ನು ಕಾಣಬಹುದಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿನ ಜನರು ವಿದ್ಯಾವಂತರಾಗುತ್ತಲೇ ತಮ್ಮ ಪಾರಂಪರಿಕ ಕುಲ ಕಸುಬನ್ನು ನಿರ್ಲಕ್ಷಿಸಿ ನಗರಗಳತ್ತ ವಲಸೆ ಹೋಗುತ್ತಿದ್ದಾರೆ.ಕೈ ಕೆಸರು ಮಾಡಿಕೊಂಡು ದುಡಿಯುವವರ ಕೊರತೆ ಅಗಾಧವಾಗಿ ಎದ್ದು ಕಾಣುತ್ತಿದೆ. ಇಂದಿನ ನವ ತಲೆಮಾರು ಹಳ್ಳಿಗಳು ಕೇವಲ ವೃದ್ಧರಿಗೆ ಮಾತ್ರ ಯೋಗ್ಯವಾದುದು ಎಂದು ತಿಳಿದಂತಿದೆ. `ನೇಗಿಲಾ ಹಿಡಿದಾ ಹೊಲದಲಿ ಹಾಡುತ ಉಳುವಾ ಯೋಗಿಯ ನೋಡಲ್ಲಿ’ ಎಂದು ಕುವೆಂಪುರಂತಹ ಖ್ಯಾತ ಕವಿಗಳಿಂದ ಕೊಂಡಾಡಲ್ಪಟ್ಟ ಕೃಷಿ ಚಟುವಟಿಕೆಗಳಿಂದು ಕಣ್ಮರೆಯಾಗಿದೆ. ನೇಗಿಲಿನಂತಹ ಕೃಷಿ ಸಲಕರಣೆಗಳು ಇಂದು ಮ್ಯೂಸಿಯಂ ಸೇರಿಬಿಟ್ಟಿವೆ. ಇದರೊಂದಿಗೆ ಅತ್ಯಂತ ಸುಂದರವಾದ ಕೃಷಿ ಪರಂಪರೆ ಮೂಲೆಗುಂಪಾಗುತ್ತಿದೆ. ಹಳೆಯ ಕಾಲದ ಸಾಂಪ್ರದಾಯಿಕ ಬೇಸಾಯಕ್ಕೆ ಉಪಯೋಗವಾಗುತ್ತಿದ್ದ ಪರಿಕರಗಳ ಸ್ಥಾನವನ್ನು ಟ್ರಾಕ್ಟರ್,ಟಿಲ್ಲರ್ ಗಳಂತಹ ಯಂತ್ರಗಳು ಆಕ್ರಮಿಸಿಕೊಂಡಿವೆ. ಭತ್ತ ನಾಟಿ ಮಾಡುವ ಮಹಿಳೆಯರಿಂದ ಕೇಳಿ ಬರು...