ವಿಷಯಕ್ಕೆ ಹೋಗಿ

ಕೋವಿಡ್ ಕಾಲದ ಓದು : ಏರೋಪ್ಲೇನ್ ಚಿಟ್ಟೆ ಮತ್ತು ಇತರ ಕಥೆಗಳು

'ಏರೋಪ್ಲೇನ್ ಚಿಟ್ಟೆ' ಪೂರ್ಣಚಂದ್ರ ತೇಜಸ್ವಿ ಬರೆದ ನಮ್ಮ ಪರಿಸರದ ಜೀವಜಾಲಗಳ ಕುರಿತು ಬರೆದಿರುವ ಕುತೂಹಲಕಾರಿ ಅಂಶಗಳನ್ನೊಳಗೊಂಡ ಕೃತಿ. ನಮ್ಮ ಸುತ್ತಮುತ್ತಲಲ್ಲಿ ಕಂಡು ಬರುವ ಒಂಟಿಹುಳು, ಏರೋಪ್ಲೇನ್ ಚಿಟ್ಟೆ, ಬಾವಲಿ, ಕೀಟ ಶಿಲ್ಪಿಗಳು, ಹಾವು ಮೀನು, ಹಲ್ಲಿ, ಮಲಬಾರ್ ಟ್ರೋಜನ್, ಜೇಡ ಹೀಗೇ ಹಲವು ಜೀವಿಗಳ ಕುರಿತಾದ ವಿಸ್ಮಯ ಪ್ರಪಂಚವನ್ನು ನಮ್ಮ ಮುಂದೆ ತೆರೆದಿಡುತ್ತದೆ.


ಒಂಟಿ ಹುಳು, ಮರದ ಎಲೆಯನ್ನು ಬೀಡಿಯಾಕಾರದಲ್ಲಿ ಸುತ್ತಿ, ಅದರಲ್ಲಿ ಮೊಟ್ಟೆ ಇಟ್ಟು ಭೂಮಿಗೆ ಬಿಸಾಡುವ ಆ ಸಂತಾನೋತ್ಪತ್ತಿ ಪ್ರಕ್ರಿಯೆಯನ್ನು ತೇಜಸ್ವಿಯವರು ಸೂಕ್ಷ್ಮವಾಗಿ ಗಮನಿಸಿ, ಅದರ ಎಲ್ಲಾ ಆಯಾಮಗಳ ಕುರಿತೂ ವಿವರಿಸಿದ್ದಾರೆ.


ಕೃತಿಯ ಶೀರ್ಷಿಕೆಯಂತೆಯೇ ಏರೋಪ್ಲೇನ್ ಚಿಟ್ಟೆಯ ಬಗ್ಗೆಯೂ ಸಾಕಷ್ಟು ಮಾಹಿತಿಗಳಿವೆ. ಅವೆಲ್ಲವುಗಳಿಗಿಂತಲೂ ನನಗೆ ಬಹಳ ಅಚ್ಚರಿ ಮೂಡಿಸಿದುದೆಂದರೆ ಬಾವಲಿ ಎಂಬ ಜೀವಿಯ ಅದ್ಭುತ ಜಗತ್ತು.. ಬಾವಲಿಯ ಬಗ್ಗೆ ಅವರು ಬಾಕಿಯುಳಿಸಿದ ವಿಷಯಗಳೇ ಇಲ್ಲವೆಂದು ಅನಿಸುವಷ್ಟರ ಮಟ್ಟಿಗೆ, ಜಾಗತಿಕ ಮಟ್ಟದಲ್ಲಿ ವಿಜ್ಞಾನಿಗಳು, ಪ್ರಾಣಿಶಾಸ್ತ್ರ ಪರಿಣತರು ಬಾವಲಿಗಳ ಶ್ರವಣಾತೀತ ಶಬ್ದಗಳನ್ನು ಆಲಿಸುವ ಸಾಮರ್ಥ್ಯವನ್ನು ಕಂಡು ಹಿಡಿಯುವ ಪ್ರಯತ್ನದಲ್ಲಿ ಅವರು ಮಾಡಿದಂತಹ ಸಂಶೋಧನೆಗಳು, ಅಧ್ಯಯನಗಳು ಹಂತ ಹಂತವಾಗಿ ತಿಳಿಯುವಾಗ ನಾವೆಲ್ಲಾ ಸಾಮಾನ್ಯವೆಂದೇ ಕಾಣುವ, ಒಂದು ಜೀವಿಯಲ್ಲಿ ಇಷ್ಟೊಂದು ಕೌತುಕ, ಕುತೂಹಲಗಳಿಗೆ ಎಡೆಮಾಡಿಕೊಡುವಂತಹ ವಿಷಯಗಳಿವೆ ಅಂತ ತಿಳಿಯುವಾಗ, ನಿಜಕ್ಕೂ ಆ ವಿಷಯದಲ್ಲಿ ನಾವೆಷ್ಟು ಅಜ್ಞಾನಿಗಳು ಎಂಬುದು ಸ್ಟಷ್ಟವಾಗಿ ಮನವರಿಕೆಯಾಗುತ್ತದೆ. ಆ ಪ್ರಯೋಗಗಳನ್ನು ನಾನು ಹೇಳುತ್ತಾ ಹೋದರೆ, ಪುಟಗಟ್ಟಲೆ ಬರೆಯಬೇಕಾಗಬಹುದು ಎಂಬ ಕಾರಣದಲ್ಲಿ ಆ ಕುತೂಹಲಗಳನ್ನು ಮಾತ್ರ ನಿಮ್ಮೊಂದಿಗೆ ಹಂಚುತ್ತಿದ್ದೇನೆ.


ಅಂತೆಯೇ, ಹಲ್ಲಿ ತನ್ನ ಬಾಲವನ್ನು ತನ್ನ ಪ್ರಾಣರಕ್ಷಣೆಗೆ ಬಳಸುತ್ತದೆಯೋ, ಜೇಡ ಯಾವ ರೀತಿಯಲ್ಲೆಲ್ಲಾ ಬಲೆ ಕಟ್ಟುತ್ತದೆ ಎಂಬುದೆಲ್ಲಾ ಕಣ್ಣರಳಿಸಿ ಓದುವಂತೆ ಮಾಡುತ್ತದೆ. ಅದರಲ್ಲೂ, ಆಮೆ, ಹಾವು ಮೀನು ಮತ್ತು ಅದರ ಅಪಾಯಗಳು, ಅದು ತನಗೆ ತಿಳಿದ ಬಗೆಯನ್ನು ತೇಜಸ್ವಿಯವರು ಕಥೆಯಂತೆ ಹೇಳುತ್ತಾ ಹೋಗೋದು ಈ ಕೃತಿಯನ್ನು ಕಾದಂಬರಿಯಂತಾಗಿಸಿದೆ.


ಒಟ್ಟಿನಲ್ಲಿ, ಲೇಖಕರು ಜೀವವೈವಿಧ್ಯತೆಯ ಮೇಲಿಟ್ಟಿರುವ ಅಪಾರವಾದ ಕಾಳಜಿ, ಪ್ರೀತಿ ಎಲ್ಲವೂ ಇಲ್ಲಿ ಅದರ ಸಂದರ್ಭ ಸಹಿತವಾಗಿ ಓದುಗರಿಗೆ ವಿವರಿಸಿಕೊಟ್ಟಿದ್ದಾರೆ ತೇಜಸ್ವಿಯವರು. ಓದಿನ ಕೊನೆಯಲ್ಲಿ, ನಿಸರ್ಗದ ಜಲಚರ , ಗೋಚರ, ಅಗೋಚರ ಪ್ರಾಣಿಗಳ ಕುರಿತು ಇನ್ನಷ್ಟು ಓದಬೇಕು, ಆ ಮೂಲಕ ಪ್ರಾಣಿ, ಪಕ್ಷಿಗಳ ಭಾಷೆಯನ್ನು ಕಲಿತು, ಅವುಗಳನ್ನು ದೂರವಿಟ್ಟುಕೊಂಡೇ ಬಾಳಲು ಬಿಡಬೇಕು ಎಂಬ ಯೋಚನೆ ಮೂಡುವುದಂತೂ ಖಂಡಿತ...


ನಿಝಾಮ್ ಅನ್ಸಾರಿ ಕಲ್ಲಡ್ಕ



ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಅಳಿವಿನಂಚಿನಲ್ಲಿರುವ ಸಾಂಪ್ರದಾಯಿಕ ಕೃಷಿ ಪರಂಪರೆ-* ನಿಝಾಮ್ ಅನ್ಸಾರಿ

ಭಾರತವು ಕೃಷಿ ಅವಲಂಬಿತ ಹಳ್ಳಿಗಳನ್ನೊಳಗೊಂಡ ಸಮೃದ್ಧ ದೇಶ. ದೇಶದ ಬೆಳವಣಿಗೆಯಲ್ಲಿ ವ್ಯವಸಾಯದ ಪಾತ್ರ ಬಹುಮುಖ್ಯವಾದುದು. ತಂತ್ರಜ್ಞಾನವು ದೇಶಕ್ಕೆ ಯಾವ ರೀತಿಯಲ್ಲಿ ಕೊಡುಗೆಗಳನ್ನು ನೀಡುತ್ತವೆಯೋ ಅದೇ ರೀತಿಯಲ್ಲಿ ಕೃಷಿಯ ಕೊಡುಗೆಯೂ ಕೂಡಾ ಅಪಾರವಾದುದು. ಆದರೆ ಇತ್ತೀಚಿನ ದಿನಗಳಲ್ಲಿ ಹಳ್ಳಿಗಳಲ್ಲಿ ವ್ಯವಸಾಯವು ಇಳಿಮುಖವಾಗುತ್ತಿದೆ. ಕೇವಲ ಬೆರಳೆಣಿಕೆಯಷ್ಟು ಮಂದಿ ಮಾತ್ರ ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವವರನ್ನು ಕಾಣಬಹುದಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿನ ಜನರು ವಿದ್ಯಾವಂತರಾಗುತ್ತಲೇ ತಮ್ಮ ಪಾರಂಪರಿಕ ಕುಲ ಕಸುಬನ್ನು ನಿರ್ಲಕ್ಷಿಸಿ ನಗರಗಳತ್ತ ವಲಸೆ ಹೋಗುತ್ತಿದ್ದಾರೆ.ಕೈ ಕೆಸರು ಮಾಡಿಕೊಂಡು ದುಡಿಯುವವರ ಕೊರತೆ ಅಗಾಧವಾಗಿ ಎದ್ದು ಕಾಣುತ್ತಿದೆ. ಇಂದಿನ ನವ ತಲೆಮಾರು ಹಳ್ಳಿಗಳು ಕೇವಲ ವೃದ್ಧರಿಗೆ ಮಾತ್ರ ಯೋಗ್ಯವಾದುದು ಎಂದು ತಿಳಿದಂತಿದೆ. `ನೇಗಿಲಾ ಹಿಡಿದಾ ಹೊಲದಲಿ ಹಾಡುತ ಉಳುವಾ ಯೋಗಿಯ ನೋಡಲ್ಲಿ’ ಎಂದು ಕುವೆಂಪುರಂತಹ ಖ್ಯಾತ ಕವಿಗಳಿಂದ ಕೊಂಡಾಡಲ್ಪಟ್ಟ ಕೃಷಿ ಚಟುವಟಿಕೆಗಳಿಂದು ಕಣ್ಮರೆಯಾಗಿದೆ. ನೇಗಿಲಿನಂತಹ ಕೃಷಿ ಸಲಕರಣೆಗಳು ಇಂದು ಮ್ಯೂಸಿಯಂ ಸೇರಿಬಿಟ್ಟಿವೆ. ಇದರೊಂದಿಗೆ ಅತ್ಯಂತ ಸುಂದರವಾದ ಕೃಷಿ ಪರಂಪರೆ ಮೂಲೆಗುಂಪಾಗುತ್ತಿದೆ. ಹಳೆಯ ಕಾಲದ ಸಾಂಪ್ರದಾಯಿಕ ಬೇಸಾಯಕ್ಕೆ ಉಪಯೋಗವಾಗುತ್ತಿದ್ದ ಪರಿಕರಗಳ ಸ್ಥಾನವನ್ನು ಟ್ರಾಕ್ಟರ್,ಟಿಲ್ಲರ್ ಗಳಂತಹ ಯಂತ್ರಗಳು ಆಕ್ರಮಿಸಿಕೊಂಡಿವೆ. ಭತ್ತ ನಾಟಿ ಮಾಡುವ ಮಹಿಳೆಯರಿಂದ ಕೇಳಿ ಬರು...

ಅರಬಿ ಭಾಷೆ : ಇತಿಹಾಸ ಮತ್ತು ವರ್ತಮಾನ

✒ ನಿಝಾಮ್ ಅನ್ಸಾರಿ ಭಾಷೆ ಮನುಷ್ಯನ ಸವಿಶೇಷತೆಗಳಲ್ಲೊಂದು. ಚಿಂತನೆಗಳು ಮತ್ತು ಅಭಿರುಚಿಗಳ ಆಶಯವನ್ನು ಅಭಿವ್ಯಕ್ತಿಗೊಳಿಸುವ ಅಥವಾ ಹೊರ ಹಾಕುವ ಶಬ್ದಗಳ ಒಂದು ಸಮೂಹವಾಗಿದೆ ಇದು. ಪ್ರಪಂಚದಲ್ಲಿ ಇಂದು ಹಲವು ಅಧಿಕೃತವಾಗಿರುವ ಭಾಷೆಗಳು ಅಸ್ತಿತ್ವದಲ್ಲಿವೆ.ಅದರಲ್ಲೂ ಪ್ರಾದೇಶಿಕ ಭಾಷೆಗಳು ಬೇರೇನೆ. ಆದರೆ ಈ ಎಲ್ಲಾ ಭಾಷೆಗಳ ಪೈಕಿ ರಾಜನಂತೆ ಇರೋದು ಅರಬಿ ಭಾಷೆ ಮಾತ್ರ . ಒಂದು ಕಾಲದಲ್ಲಿ ಇಡೀ ಜಗತ್ತನ್ನೇ ನಿಯಂತ್ರಿಸುವ ತಾಕತ್ತಿದ್ದ ಭಾಷೆಯಾಗಿತ್ತು ಅರಬಿ. ಯಾವ ರೀತಿಯಲ್ಲಿ ಈಗ ಆಂಗ್ಲ ಭಾಷೆಗೆ ಪ್ರಾಧಾನ್ಯತೆ, ಜಾಗತಿಕ ಅಂಗೀಕಾರ ಇದೆಯೋ ಅದೇ ರೀತಿಯಲ್ಲಿ ಅಂದು ಅರಬಿ ಭಾಷೆ ಸ್ಥಾನ ಪಡೆದಿತ್ತು. ಬಲದಿಂದ ಎಡಕ್ಕೆ ಇರುವ ಕೆಲವೊಂದು ಭಾಷೆಗಳಲ್ಲಿ ಅರಬೀ ಕೂಡಾ ಒಂದು. ಸೈಮಟಿಕ್ ಭಾಷೆಗಳಲ್ಲೊಂದಾದ ಅರಬಿ ಜಗತ್ತಿನ ಅತ್ಯಂತ ಪುರಾತನ ಭಾಷೆಗಳ ಪೈಕಿ ಒಂದು ಕೂಡಾ . ಐಕ್ಯ ರಾಷ್ಟ್ರ ಸಂಘದ ಅಂಗೀಕೃತ ಭಾಷೆಯಾದ ಅರಬಿ, 26 ದೇಶಗಳ ಅಧಿಕೃತ ಭಾಷೆಯಾಗಿದೆ‌. ಆಫ್ರಿಕನ್ ಯೂನಿಯನ್ ಆರ್ಗನೈಸೇಷನ್ ಇಸ್ಲಾಮಿಕ್ ಕಾನ್ಫೆರನ್ಸ್ ನಂತಹ ಹಲವು ಅಂತಾರಾಷ್ಟ್ರೀಯ ಸಂಸ್ಥೆಗಳು ಅರಬಿ ಭಾಷೆಯನ್ನು ಅಧಿಕೃತ ಭಾಷೆಯಾಗಿ ಅಂಗೀಕರಿಸಿದೆ. ಅರಬಿ ಭಾಷೆ: ಹುಟ್ಟು ಮತ್ತು ಬೆಳವಣಿಗೆ ಬಿ.ಸಿ 1900 ರಲ್ಲಿ ಜೀವಿಸಿದ್ದ 'ಯಅರೂಬ್ ಇಬ್ನ್ ಖಹ್ತಾನ್' ಎಂಬವರನ್ನು ಅರಬಿ ಭಾಷೆಯ ಪಿತಾಮಹ ಎಂದು ಕರೆಯಲಾಗುತ್ತದೆ. ಇವರ ನಾಮಕ್ಕೆ ಹೊಂದಿಕೊಂಡು 'ಅರಬಿ' ಎಂಬ ಹೆಸರು...

ಕೋವಿಡ್ ಕಾಲದ ಓದು: ಚಂದ್ರನ ಚೂರು

'ಚಂದ್ರನ ಚೂರು' ಕೃತಿಯ ಹೆಸರು ಕೇಳಿದಾಗ ನಿಜವಾಗಿಯೂ ಅದೊಂದು ಕಾದಂಬರಿಯಾಗಿರಬಹುದು ಎಂದು ಭಾವಿಸಿದ್ದೆ. ಆದರೆ, ಪುಸ್ತಕ ಕೈಗೆ ತಲುಪಿದಾಗಲೇ ಗೊತ್ತಾಗಿದ್ದು, ಅದೊಂದು ಚಂದ್ರಲೋಕಕ್ಕೆ ಕೊಂಡೊಯ್ಯುವ ಅದ್ಭುತ ಕೃತಿ ಅಂತ. ತಂದೆ ಕುವೆಂಪು ಅವರ ಸಾಹಿತ್ಯದ ಹಾದಿಯಲ್ಲೇ ನಡೆದರೂ, ತೇಜಸ್ವಿಯವರ ಸಾಹಿತ್ಯವು ನಿಸರ್ಗ ವಿಸ್ಮಯ, ಭೂಗೋಳ, ಜೀವಶಾಸ್ತ್ರ, ಭತಶಾಸ್ತ್ರ, ಇತಿಹಾಸ ಹೀಗೇ ಎಲ್ಲಾ ಶಾಸ್ತ್ರಗಳ ಮಿಶ್ರಣ ರಸಾಯನ ಎಂದೇ ಹೇಳಬಹುದು. ಚಂದ್ರನ ಚೂರು ಚಂದ್ರ ಲೋಕದ ವಿಸ್ಮಯ ದೃಶ್ಯಗಳನ್ನು ಕಟ್ಟಿಕೊಡುವ ಚೊಚ್ಚಲ ಕೃತಿ. ಬಾಹ್ಯಾಕಾಶ, ಖಗೋಳ ಶಾಸ್ತ್ರ ವಿಷಯದಲ್ಲಿ ಆಸಕ್ತಿ ಇಲ್ಲದ ನನ್ನಂತವರನ್ನೂ ಇದು ಸರಾಗವಾಗಿ ಓದಿಸಿಕೊಂಡು ಹೋಗುವಂತೆ ಮಾಡುತ್ತದೆ, ಅದಕ್ಕೆ ಕಾರಣ, ತೇಜಸ್ವಿ ಅವರ ಬರವಣಿಗೆ ಹಾಗೂ ವಿವರಣೆಯ ಶೈಲಿ.. ಜಗತ್ತಿನಲ್ಲಿ ಮನುಷ್ಯನು ಚಂದ್ರನಲ್ಲಿಗೆ ಕಾಲಿಡುವುದಕ್ಕೂ ಮುನ್ನ, ಯಾವುದೆಲ್ಲಾ ರೀತಿಯ ಪರಿಶ್ರಮಗಳು ನಡೆದಿದ್ದವು ಹಾಗೂ ಭೂಮಂಡಲ ಮತ್ತು ಚಂದ್ರನ ಕುರಿತಾಘಿ ಯಾವುದೆಲ್ಲಾ ಆಯಾಮಗಳಲ್ಲಿ ಅಧ್ಯಯನಗಳಾಗಿದ್ದುವು ಎಂಬುದರ ಸಂಪೂರ್ಣ ವಿಷಯಗಳಿವೆ. ಚಂದ್ರನಲ್ಲಿ ತಲುಪಿದ ಮನುಷ್ಯನಿಗೆ ಆದ ಅನುಭವಗಳೇನು? ನೀಲ್ ಆಮ್Fಸ್ಟ್ರಾಂಗ್ ತಂಡದ ಚಂದ್ರಯಾನದ ರಸವತ್ತಾದ ಅನುಭವಗಳು, ಚಂದಿರನ ಮಣ್ಣಲ್ಲಿ ಅಮೇರಿಕದ ಫ್ಲಾಗ್ ಮತ್ತು ಬೋಡ್F ಸ್ಥಾಪಿಸಿ ಬಂದ ಆ ಧೀರ ತಂಡದ ಬೆರಗಾಗಿಸುವ ಕ್ಷಣ ಕ್ಷಣದ ವರದಿಗಳು ಈ ಕೃತಿಯ ಲೇಖನಗಳಲ್ಲಿ ಅಡಗಿದೆ. ಒಟ್ಟಿನಲ...