ವಿಷಯಕ್ಕೆ ಹೋಗಿ

ಕೋವಿಡ್ ಕಾಲದ ಓದು : ಏರೋಪ್ಲೇನ್ ಚಿಟ್ಟೆ ಮತ್ತು ಇತರ ಕಥೆಗಳು

'ಏರೋಪ್ಲೇನ್ ಚಿಟ್ಟೆ' ಪೂರ್ಣಚಂದ್ರ ತೇಜಸ್ವಿ ಬರೆದ ನಮ್ಮ ಪರಿಸರದ ಜೀವಜಾಲಗಳ ಕುರಿತು ಬರೆದಿರುವ ಕುತೂಹಲಕಾರಿ ಅಂಶಗಳನ್ನೊಳಗೊಂಡ ಕೃತಿ. ನಮ್ಮ ಸುತ್ತಮುತ್ತಲಲ್ಲಿ ಕಂಡು ಬರುವ ಒಂಟಿಹುಳು, ಏರೋಪ್ಲೇನ್ ಚಿಟ್ಟೆ, ಬಾವಲಿ, ಕೀಟ ಶಿಲ್ಪಿಗಳು, ಹಾವು ಮೀನು, ಹಲ್ಲಿ, ಮಲಬಾರ್ ಟ್ರೋಜನ್, ಜೇಡ ಹೀಗೇ ಹಲವು ಜೀವಿಗಳ ಕುರಿತಾದ ವಿಸ್ಮಯ ಪ್ರಪಂಚವನ್ನು ನಮ್ಮ ಮುಂದೆ ತೆರೆದಿಡುತ್ತದೆ.


ಒಂಟಿ ಹುಳು, ಮರದ ಎಲೆಯನ್ನು ಬೀಡಿಯಾಕಾರದಲ್ಲಿ ಸುತ್ತಿ, ಅದರಲ್ಲಿ ಮೊಟ್ಟೆ ಇಟ್ಟು ಭೂಮಿಗೆ ಬಿಸಾಡುವ ಆ ಸಂತಾನೋತ್ಪತ್ತಿ ಪ್ರಕ್ರಿಯೆಯನ್ನು ತೇಜಸ್ವಿಯವರು ಸೂಕ್ಷ್ಮವಾಗಿ ಗಮನಿಸಿ, ಅದರ ಎಲ್ಲಾ ಆಯಾಮಗಳ ಕುರಿತೂ ವಿವರಿಸಿದ್ದಾರೆ.


ಕೃತಿಯ ಶೀರ್ಷಿಕೆಯಂತೆಯೇ ಏರೋಪ್ಲೇನ್ ಚಿಟ್ಟೆಯ ಬಗ್ಗೆಯೂ ಸಾಕಷ್ಟು ಮಾಹಿತಿಗಳಿವೆ. ಅವೆಲ್ಲವುಗಳಿಗಿಂತಲೂ ನನಗೆ ಬಹಳ ಅಚ್ಚರಿ ಮೂಡಿಸಿದುದೆಂದರೆ ಬಾವಲಿ ಎಂಬ ಜೀವಿಯ ಅದ್ಭುತ ಜಗತ್ತು.. ಬಾವಲಿಯ ಬಗ್ಗೆ ಅವರು ಬಾಕಿಯುಳಿಸಿದ ವಿಷಯಗಳೇ ಇಲ್ಲವೆಂದು ಅನಿಸುವಷ್ಟರ ಮಟ್ಟಿಗೆ, ಜಾಗತಿಕ ಮಟ್ಟದಲ್ಲಿ ವಿಜ್ಞಾನಿಗಳು, ಪ್ರಾಣಿಶಾಸ್ತ್ರ ಪರಿಣತರು ಬಾವಲಿಗಳ ಶ್ರವಣಾತೀತ ಶಬ್ದಗಳನ್ನು ಆಲಿಸುವ ಸಾಮರ್ಥ್ಯವನ್ನು ಕಂಡು ಹಿಡಿಯುವ ಪ್ರಯತ್ನದಲ್ಲಿ ಅವರು ಮಾಡಿದಂತಹ ಸಂಶೋಧನೆಗಳು, ಅಧ್ಯಯನಗಳು ಹಂತ ಹಂತವಾಗಿ ತಿಳಿಯುವಾಗ ನಾವೆಲ್ಲಾ ಸಾಮಾನ್ಯವೆಂದೇ ಕಾಣುವ, ಒಂದು ಜೀವಿಯಲ್ಲಿ ಇಷ್ಟೊಂದು ಕೌತುಕ, ಕುತೂಹಲಗಳಿಗೆ ಎಡೆಮಾಡಿಕೊಡುವಂತಹ ವಿಷಯಗಳಿವೆ ಅಂತ ತಿಳಿಯುವಾಗ, ನಿಜಕ್ಕೂ ಆ ವಿಷಯದಲ್ಲಿ ನಾವೆಷ್ಟು ಅಜ್ಞಾನಿಗಳು ಎಂಬುದು ಸ್ಟಷ್ಟವಾಗಿ ಮನವರಿಕೆಯಾಗುತ್ತದೆ. ಆ ಪ್ರಯೋಗಗಳನ್ನು ನಾನು ಹೇಳುತ್ತಾ ಹೋದರೆ, ಪುಟಗಟ್ಟಲೆ ಬರೆಯಬೇಕಾಗಬಹುದು ಎಂಬ ಕಾರಣದಲ್ಲಿ ಆ ಕುತೂಹಲಗಳನ್ನು ಮಾತ್ರ ನಿಮ್ಮೊಂದಿಗೆ ಹಂಚುತ್ತಿದ್ದೇನೆ.


ಅಂತೆಯೇ, ಹಲ್ಲಿ ತನ್ನ ಬಾಲವನ್ನು ತನ್ನ ಪ್ರಾಣರಕ್ಷಣೆಗೆ ಬಳಸುತ್ತದೆಯೋ, ಜೇಡ ಯಾವ ರೀತಿಯಲ್ಲೆಲ್ಲಾ ಬಲೆ ಕಟ್ಟುತ್ತದೆ ಎಂಬುದೆಲ್ಲಾ ಕಣ್ಣರಳಿಸಿ ಓದುವಂತೆ ಮಾಡುತ್ತದೆ. ಅದರಲ್ಲೂ, ಆಮೆ, ಹಾವು ಮೀನು ಮತ್ತು ಅದರ ಅಪಾಯಗಳು, ಅದು ತನಗೆ ತಿಳಿದ ಬಗೆಯನ್ನು ತೇಜಸ್ವಿಯವರು ಕಥೆಯಂತೆ ಹೇಳುತ್ತಾ ಹೋಗೋದು ಈ ಕೃತಿಯನ್ನು ಕಾದಂಬರಿಯಂತಾಗಿಸಿದೆ.


ಒಟ್ಟಿನಲ್ಲಿ, ಲೇಖಕರು ಜೀವವೈವಿಧ್ಯತೆಯ ಮೇಲಿಟ್ಟಿರುವ ಅಪಾರವಾದ ಕಾಳಜಿ, ಪ್ರೀತಿ ಎಲ್ಲವೂ ಇಲ್ಲಿ ಅದರ ಸಂದರ್ಭ ಸಹಿತವಾಗಿ ಓದುಗರಿಗೆ ವಿವರಿಸಿಕೊಟ್ಟಿದ್ದಾರೆ ತೇಜಸ್ವಿಯವರು. ಓದಿನ ಕೊನೆಯಲ್ಲಿ, ನಿಸರ್ಗದ ಜಲಚರ , ಗೋಚರ, ಅಗೋಚರ ಪ್ರಾಣಿಗಳ ಕುರಿತು ಇನ್ನಷ್ಟು ಓದಬೇಕು, ಆ ಮೂಲಕ ಪ್ರಾಣಿ, ಪಕ್ಷಿಗಳ ಭಾಷೆಯನ್ನು ಕಲಿತು, ಅವುಗಳನ್ನು ದೂರವಿಟ್ಟುಕೊಂಡೇ ಬಾಳಲು ಬಿಡಬೇಕು ಎಂಬ ಯೋಚನೆ ಮೂಡುವುದಂತೂ ಖಂಡಿತ...


ನಿಝಾಮ್ ಅನ್ಸಾರಿ ಕಲ್ಲಡ್ಕ



ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ರಂಝಾನ್ ನೀಡುವ ಒಳಿತಿನ ಸಂದೇಶ...

-ನಿಝಾಮ್ ಅನ್ಸಾರಿ ಮತ್ತೆ ರಂಝಾನ್ ತಿಂಗಳ ಆಗಮನವಾಗಿದೆ. ಪ್ರತಿ ವರ್ಷವೂ ರಂಝಾನ್ ಬಗ್ಗೆ ಬರೆಯುವಾಗ ಅದರ ಶ್ರೇಷ್ಟತೆ, ವ್ರತಾನುಷ್ಟಾನದ ಪ್ರಾಧಾನ್ಯತೆಯನ್ನೇ ಹೆಚ್ಚಿನವರೂ ಬರೆಯುತ್ತಾರೆ. ಅದನ್ನೇ ಮಸೀದಿಗಳಲ್ಲೂ ಹೇಳುವುದಿದೆ. ಒಳ್ಳೆಯದೇ. ಕಾರಣ ಆಧುನಿಕ ಜನರು ಧರ್ಮದ ಪ್ರತಿಯೊಂದು ವಿಷಯಗಳಲ್ಲೂ ಸಡಿಲಿಕೆ ಬಯಸುತ್ತಾರೆ. ಅಂದರೆ ಅವರವರ ಜೀವನಕ್ರಮಗಳಿಗನುಸಾರವಾಗಿ ಧರ್ಮದ ನಿಯಮಗಳನ್ನು ಗಾಳಿಗೆ ತೂರುವಂತಹ ಕಾರ್ಯಗಳು ಎಲ್ಲಾ ಕಡೆ ನಡೆಯುತ್ತಲಿದೆ. ಹಾಗಿರುವಾಗ ರಂಝಾನ್ ವ್ರತಾಚರಣೆಯ ಮಹತ್ವವನ್ನು ಪ್ರತಿ ಬಾರಿಯೂ ಪ್ರಭಾಷಣ ವೇದಿಕೆಗಳಲ್ಲಿ, ಮಸೀದಿಗಳಲ್ಲಿ ಜನ ಸಾಮಾನ್ಯರಿಗೆ ನೆನಪಿಸುತ್ತಲಿರುವುದು ಸ್ವಾಗತಾರ್ಹವಾದುದು. ಮತ್ತು ಪ್ರಯೋಜನಕಾರಿಯೂ ಕೂಡಾ. ಯಾಕೆ ಈ ರೀತಿ ಬರೆದೆ ಅಂತ ಕೇಳಿದರೆ, ಇತ್ತೀಚೆಗೆ ವಾಟ್ಸಾಪ್ ನೊಳಗೆ ಕಣ್ಣಾಡಿಸಿದಾಗ ಕಂಡ ಕೆಲವೊಂದು ಸಂದೇಶಗಳು ಧರ್ಮದ ಬಗ್ಗೆ ಕೀಳರಿಮೆಯ ಭಾವ ತೋರುವವರಿಗೆ ತಕ್ಕ ಉತ್ತರ ನೀಡುವಂತಿತ್ತು. ಬಡ ಕುಟುಂಬಕ್ಕೆ ಮನೆ ಕಟ್ಟುವ ಸಹಾಯಾರ್ಥ ಕಲೆಕ್ಷನ್, ರಂಝಾನ್ ನಂತರದ ಬಡ ಹೆಣ್ಮಕ್ಕಳ ಮದುವೆಗಾಗಿ, ಮುಅಲ್ಲಿಂಗಳಿಗಾಗಿ ಹೀಗೇ ಹಲವು ರೀತಿಯಲ್ಲಿ ಯುವ-ವಯಸ್ಕರು ಸೇರಿ ಸಮುದಾಯದೊಂದಿಗಿನ ಸಾಮಾಜಿಕ ಕಾಳಜಿಗಾಗಿ ರಂಝಾನ್ ಅನ್ನು ಉಪಯೋಗಿಸುತ್ತಿದ್ದಾರೆನ್ನುವಾಗ ಧರ್ಮದ ಮನದಲ್ಲಿ ಅಭಿಮಾನ ಮೂಡುತ್ತಿದೆ. ಬುರ್ಖಾದ ವಿಚಾರದಲ್ಲಿ ಬಲತ್ಕಾರ ಮಾಡಲಾಗುತ್ತದೆ ಎಂದು ಆರೋಪಿಸುತ್ತಿರುವಾಗ, ಆ ವಾದವನ್ನು ವಿರ...

ನಾನುಗೌರಿ ವೆಬ್ ನಲ್ಲಿ ಪ್ರಕಟಗೊಂಡ ಬರಹಗಳು..ಓದಲು ಈ ಲಿಂಕ್ ಉಪಯೋಗಿಸಿ

-ನಿಝಾಮ್ ಅನ್ಸಾರಿ ಭಾರತದ ಉನ್ನತ ಶಿಕ್ಷಣದ ಮಹಾನ್‌ ಆಶಯಕ್ಕೆ ಎಳ್ಳುನೀರು ಬಿಡುತ್ತಿರುವ ಪ್ರಭುತ್ವ… http://naanugauri.com/indian-higher-education-shrinking-down- **************************************************************** ಲಾಕ್‌ಡೌನ್‌: ತುತ್ತು ಅನ್ನಕ್ಕಾಗಿ ಗುಳೆ ಹೊರಟವರ ಕತೆ http://naanugauri.com/lockdown-story-of-labour/ via @Naanu gauri ***************************************************************** ಪೌರತ್ವ ವಸೂಲಿ – ನಾಝಿ ಜರ್ಮನಿಯಿಂದ ಕಲಿಯಬೇಕಾದುದು… http://naanugauri.com/citizen-amendment-act-same-thing-happen-in-german-80-years-back- ****************************************************************** ಪ್ಲೇಗ್ ಹಾಗೂ ಕೋವಿಡ್ 19 ನಡುವೆ ಕೆಲವು ಹೋಲಿಕೆಗಳು http://naanugauri.com/covid-19-and-bubonic-plague-this-lead-to-renaissance/ via @Naanu gauri

ಅಳಿವಿನಂಚಿನಲ್ಲಿರುವ ಸಾಂಪ್ರದಾಯಿಕ ಕೃಷಿ ಪರಂಪರೆ-* ನಿಝಾಮ್ ಅನ್ಸಾರಿ

ಭಾರತವು ಕೃಷಿ ಅವಲಂಬಿತ ಹಳ್ಳಿಗಳನ್ನೊಳಗೊಂಡ ಸಮೃದ್ಧ ದೇಶ. ದೇಶದ ಬೆಳವಣಿಗೆಯಲ್ಲಿ ವ್ಯವಸಾಯದ ಪಾತ್ರ ಬಹುಮುಖ್ಯವಾದುದು. ತಂತ್ರಜ್ಞಾನವು ದೇಶಕ್ಕೆ ಯಾವ ರೀತಿಯಲ್ಲಿ ಕೊಡುಗೆಗಳನ್ನು ನೀಡುತ್ತವೆಯೋ ಅದೇ ರೀತಿಯಲ್ಲಿ ಕೃಷಿಯ ಕೊಡುಗೆಯೂ ಕೂಡಾ ಅಪಾರವಾದುದು. ಆದರೆ ಇತ್ತೀಚಿನ ದಿನಗಳಲ್ಲಿ ಹಳ್ಳಿಗಳಲ್ಲಿ ವ್ಯವಸಾಯವು ಇಳಿಮುಖವಾಗುತ್ತಿದೆ. ಕೇವಲ ಬೆರಳೆಣಿಕೆಯಷ್ಟು ಮಂದಿ ಮಾತ್ರ ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವವರನ್ನು ಕಾಣಬಹುದಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿನ ಜನರು ವಿದ್ಯಾವಂತರಾಗುತ್ತಲೇ ತಮ್ಮ ಪಾರಂಪರಿಕ ಕುಲ ಕಸುಬನ್ನು ನಿರ್ಲಕ್ಷಿಸಿ ನಗರಗಳತ್ತ ವಲಸೆ ಹೋಗುತ್ತಿದ್ದಾರೆ.ಕೈ ಕೆಸರು ಮಾಡಿಕೊಂಡು ದುಡಿಯುವವರ ಕೊರತೆ ಅಗಾಧವಾಗಿ ಎದ್ದು ಕಾಣುತ್ತಿದೆ. ಇಂದಿನ ನವ ತಲೆಮಾರು ಹಳ್ಳಿಗಳು ಕೇವಲ ವೃದ್ಧರಿಗೆ ಮಾತ್ರ ಯೋಗ್ಯವಾದುದು ಎಂದು ತಿಳಿದಂತಿದೆ. `ನೇಗಿಲಾ ಹಿಡಿದಾ ಹೊಲದಲಿ ಹಾಡುತ ಉಳುವಾ ಯೋಗಿಯ ನೋಡಲ್ಲಿ’ ಎಂದು ಕುವೆಂಪುರಂತಹ ಖ್ಯಾತ ಕವಿಗಳಿಂದ ಕೊಂಡಾಡಲ್ಪಟ್ಟ ಕೃಷಿ ಚಟುವಟಿಕೆಗಳಿಂದು ಕಣ್ಮರೆಯಾಗಿದೆ. ನೇಗಿಲಿನಂತಹ ಕೃಷಿ ಸಲಕರಣೆಗಳು ಇಂದು ಮ್ಯೂಸಿಯಂ ಸೇರಿಬಿಟ್ಟಿವೆ. ಇದರೊಂದಿಗೆ ಅತ್ಯಂತ ಸುಂದರವಾದ ಕೃಷಿ ಪರಂಪರೆ ಮೂಲೆಗುಂಪಾಗುತ್ತಿದೆ. ಹಳೆಯ ಕಾಲದ ಸಾಂಪ್ರದಾಯಿಕ ಬೇಸಾಯಕ್ಕೆ ಉಪಯೋಗವಾಗುತ್ತಿದ್ದ ಪರಿಕರಗಳ ಸ್ಥಾನವನ್ನು ಟ್ರಾಕ್ಟರ್,ಟಿಲ್ಲರ್ ಗಳಂತಹ ಯಂತ್ರಗಳು ಆಕ್ರಮಿಸಿಕೊಂಡಿವೆ. ಭತ್ತ ನಾಟಿ ಮಾಡುವ ಮಹಿಳೆಯರಿಂದ ಕೇಳಿ ಬರು...