ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ಜೂನ್, 2020 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಕೋವಿಡ್ ಕಾಲದ ಓದು : 'ಅಲೆಮಾರಿಯ ಅಂಡಮಾನ್' ಹಾಗೂ 'ಮಹಾನದಿ ನೈಲ್'

ಕಳೆದ ಕೆಲವು ದಿನಗಳ ಹಿಂದೆ ಅಂಡಮಾನ್ ಸೆಲ್ಲುಲರ್ ಜೈಲಿನ ಬಗ್ಗೆ ಕೆಲವೊಂದು ಚರ್ಚೆಗಳು ನಡೆಯುತ್ತಿರೋದನ್ನ ನೋಡಿದಾಗ, ಗೆಳೆಯನೊಬ್ಬನಲ್ಲಿ ಈ ಬಗ್ಗೆ ತಿಳಿಸುತ್ತಾ, ನಮಗೂ ಅಂಡಮಾನ್ ಗೆ ಒಮ್ಮೆ ಹೋಗಬೇಕಿತ್ತು ಅಂತ ಹೇಳಿದ್ದೆ. ಅವನೂ ಕೂಢಾ ಹೌದಂದಿದ್ದ. ಕಳೆದ ದಿನ ಅಂಡಮಾನ್ ಬಗ್ಗೆ ಓದಿಕೊಳ್ಳಲು ಕನ್ನಡದಲ್ಲಿ ಪುಸ್ತಕಗಳು ಸಿಗುಬಹುದಾ ಅಂತ ವೆಬ್ ತಾಣಗಳೊಳಗೆ ಜಾಲಾಡಿದ್ದೆ. ಹಾಗೆ ಸಿಕ್ಕ ಕೃತಿಗಳಲ್ಲಿ ಓದಬೇಕು ಅಂತ ಅನ್ನಿಸಿದ್ದು ಪೂರ್ಣಚಂದ್ರ ತೇಜಸ್ವಿ ಅವರ ಅಲೆಮಾರಿಯ ಅಂಡಮಾನ್. ಈ ಪುಸ್ತಕದ ವಿಶೇಷತೆ ಅಂದರೆ, ಇದರಲ್ಲಿ ಎರಡು ಕೃತಿಗಳಿವೆ. ಒಂದು ಅಂಡಮಾನ್ ಪ್ರವಾಸ ಕಥನವಾದರೆ, ಮಗದೊಂದು ನೈಲ್ ನದಿಯ ಬಗೆಗಿನ ಅಧ್ಯಯನ ಲೇಖನಗಳ ಸಂಗ್ರಹ. ನಿಜಕ್ಕೂ ಎರಡೂ ಕೂಡಾ ಜ್ಞಾನದ ಅದ್ಭುತ ಜಗತ್ತನ್ನು ನಮ್ಮ ಮುಂದೆ ತೆರೆದಿಡುತ್ತದೆ. ಅಂಡಮಾನ್ ಬಗ್ಗೆ ಹೇಳುವಾಗ, ಅಲ್ಲಿನ ಸಮುದ್ರಗಳಿಂದ ತೀರಕ್ಕಪ್ಪಳಿಸುವ ಹೆದ್ದೆರೆಗಳ ಭಯಾಜನಕ ವಾತಾವರಣದ ಬಗ್ಗೆ ಹೇಳುತ್ತಾ, ಲೇಖಕರು ತನ್ನ ಜೊತೆಗಿದ್ದ ತಂಡದೊಂದಿಗೆ ಅಲ್ಲಿ ಸಂದರ್ಶಿಸಿದ ಪ್ರತಿಯೊಂದು ಜಾಗವನ್ನೂ ಅದರ ವೈಶಿಷ್ಟ್ಯವನ್ನೂ ಮನಮುಟ್ಟುವಂತೆ ಚಿತ್ರಿಸಿದ್ದಾರೆ. ನಾನು ಯಾವ ಜೈಲಿನ ಬಗ್ಗೆ ತಿಳಿದುಕೊಳ್ಳಲು ಬಯಸಿದ್ದೆನೋ, ಆ ಜೈಲಿಗೆ ತನ್ನ ತಂಡದವರೂ ಹೋದರೂ, ತಾನು ಹೋಗದಿದ್ದುದಕ್ಕೋ, ಅಥವಾ ಬೇರ್ಯಾವುದೋ ಕಾರಣಕ್ಕೇನೋ ತಿಳಿಯದು ಆ ಬಗ್ಗೆ ಅಲ್ಲಲ್ಲಿ ಅಲ್ಪ ಸ್ವಲ್ಪ ನೆನಪಿಸಿದ್ದು ಬಿಟ್ಟರೆ, ಸ್ಪಷ್ಟವಾಗಿ ಮಾಹಿತಿಗಳನ್...

ಇಂದಿನಿಂದ 'ಸಮಸ್ತ'ದ ಆನ್ ಲೈನ್ ತರಗತಿಗಳು ಆರಂಭ

ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಒಕ್ಕೂಟದ (SKJU)ಅಧೀನದಲ್ಲಿ‌ ಕಾರ್ಯಾಚರಿಸುವ ಸಮಸ್ತ ಕೇರಳ ಇಸ್ಲಾಂ ಮತ ವಿದ್ಯಾಭ್ಯಾಸ ಬೋರ್ಡ್‌ ಅಂಗೀಕೃತ ಮದ್ರಸಗಳ ವಿದ್ಯಾರ್ಥಿಗಳಿಗೆ ನವ ಅಧ್ಯಯನ ವರ್ಷ ಇಂದಿನಿಂದ ಆರಂಭಗೊಂಡಿದೆ. ವಿಶೇಷ ಅಂದ್ರೆ, ಈ ಬಾರಿ ತರಗತಿಗಳ ಪ್ರಾರಂಭೋತ್ಸವದ ಸಂಭ್ರಮಗಳಿಲ್ಲದೆ, ಮದ್ರಸಾ ಕಟ್ಟಡಗಳು ತೆರೆಯದೇ, ಹತ್ತು ಸಾವಿರಕ್ಕೂ ಮಿಕ್ಕ ಮದ್ರಸಗಳ ಹನ್ನೆರಡು ಲಕ್ಷ ವಿದ್ಯಾರ್ಥಿಗಳು ಅವರವರ ಮನೆಗಳಲ್ಲಿಯೇ ಕುಳಿತು ತರಗತಿಗಳಲ್ಲಿ ಪಾಲ್ಗೊಳ್ಳುತ್ತಿರುವುದು ಎಂಬುದು.  ಆನ್ ಲೈನ್ ತರಗತಿಗಳಿಗಾಗಿ, ಸಮಸ್ತ ಈ ಹಿಂದೆಯೇ ಎಲ್ಲಾ ಸಿದ್ಧತೆಗಳನ್ನು ನಡೆಸಿದ್ದು, ವಿದ್ಯಾಭ್ಯಾಸ ಬೋರ್ಡ್‌ ಅದಕ್ಕಾಗಿ ಆರು ಕ್ಯಾಮರಾ ಯುನಿಟ್ ಗಳ ಕ್ಲಾಸ್ ರೂಂಗಳು ,22 ಪರಿಣತರಾದ ಅಧ್ಯಾಪಕರನ್ನು ನೇಮಕಗೊಳಿಸಿದೆ.  ತರಗತಿ ಆರಂಭದಿಂದ ಕೊನೆಯವರೆಗೂ ವಿದ್ಯಾರ್ಥಿ ಜೊತೆ ಪೋಷಕರು ಕುಳಿತಿರಬೇಕು.ಹೋಂ ವರ್ಕ್ ನೀಡಿದರೆ, ಅದನ್ನು ಮಾಡಿ, ಮುಂದೆ ಮದ್ರಸಗಳಲ್ಲಿ ತರಗತಿ ಆರಂಭಗೊಳ್ಳುವಾಗ ಮೌಲ್ಯಮಾಪನಕ್ಕಾಗಿ ಅಧ್ಯಾಪಕರಿಗೆ ತೋರಿಸಬೇಕು. ಮನೆಯಲ್ಲಿ ತರಗತಿಯ ವಾತಾವರಣವನ್ನು ಒದಗಿಸಿಕೊಟ್ಟು,ವಿದ್ಯಾರ್ಥಿಗಳಿಗೆ ಮನೆಯವರು ಸಹಕರಿಸಬೇಕು. ಅಲ್ಲದೇ, ಮದ್ರಸಾ ಹಾಗೂ ಜಮಾಅತ್ ಕಮಿಟಿಗಳು ಸೇರಿ, ಆನ್‌ಲೈನ್ ತರಗತಿಗಳು ಆಯಾ ಮದ್ರಸಗಳ ವಿದ್ಯಾರ್ಥಿಗಳಿಗೆ ಅವರವರ ಮನೆಗಳಲ್ಲಿಯೇ ಸುಲಭವಾಗಿ ತಲುಪುವಂತೆ ಎಲ್ಲಾ ರೀತಿಯಲ್ಲಿ ಸಹಕಾರವನ್ನು ನೀಡಬೇಕು. ಮದ್ರಸಗಳು ತ...