ವಿಷಯಕ್ಕೆ ಹೋಗಿ

ಇಂದಿನಿಂದ 'ಸಮಸ್ತ'ದ ಆನ್ ಲೈನ್ ತರಗತಿಗಳು ಆರಂಭ

ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಒಕ್ಕೂಟದ (SKJU)ಅಧೀನದಲ್ಲಿ‌ ಕಾರ್ಯಾಚರಿಸುವ ಸಮಸ್ತ ಕೇರಳ ಇಸ್ಲಾಂ ಮತ ವಿದ್ಯಾಭ್ಯಾಸ ಬೋರ್ಡ್‌ ಅಂಗೀಕೃತ ಮದ್ರಸಗಳ ವಿದ್ಯಾರ್ಥಿಗಳಿಗೆ ನವ ಅಧ್ಯಯನ ವರ್ಷ ಇಂದಿನಿಂದ ಆರಂಭಗೊಂಡಿದೆ. ವಿಶೇಷ ಅಂದ್ರೆ, ಈ ಬಾರಿ ತರಗತಿಗಳ ಪ್ರಾರಂಭೋತ್ಸವದ ಸಂಭ್ರಮಗಳಿಲ್ಲದೆ, ಮದ್ರಸಾ ಕಟ್ಟಡಗಳು ತೆರೆಯದೇ, ಹತ್ತು ಸಾವಿರಕ್ಕೂ ಮಿಕ್ಕ ಮದ್ರಸಗಳ ಹನ್ನೆರಡು ಲಕ್ಷ ವಿದ್ಯಾರ್ಥಿಗಳು ಅವರವರ ಮನೆಗಳಲ್ಲಿಯೇ ಕುಳಿತು ತರಗತಿಗಳಲ್ಲಿ ಪಾಲ್ಗೊಳ್ಳುತ್ತಿರುವುದು ಎಂಬುದು. 
ಆನ್ ಲೈನ್ ತರಗತಿಗಳಿಗಾಗಿ, ಸಮಸ್ತ ಈ ಹಿಂದೆಯೇ ಎಲ್ಲಾ ಸಿದ್ಧತೆಗಳನ್ನು ನಡೆಸಿದ್ದು, ವಿದ್ಯಾಭ್ಯಾಸ ಬೋರ್ಡ್‌ ಅದಕ್ಕಾಗಿ ಆರು ಕ್ಯಾಮರಾ ಯುನಿಟ್ ಗಳ ಕ್ಲಾಸ್ ರೂಂಗಳು ,22 ಪರಿಣತರಾದ ಅಧ್ಯಾಪಕರನ್ನು ನೇಮಕಗೊಳಿಸಿದೆ.  ತರಗತಿ ಆರಂಭದಿಂದ ಕೊನೆಯವರೆಗೂ ವಿದ್ಯಾರ್ಥಿ ಜೊತೆ ಪೋಷಕರು ಕುಳಿತಿರಬೇಕು.ಹೋಂ ವರ್ಕ್ ನೀಡಿದರೆ, ಅದನ್ನು ಮಾಡಿ, ಮುಂದೆ ಮದ್ರಸಗಳಲ್ಲಿ ತರಗತಿ ಆರಂಭಗೊಳ್ಳುವಾಗ ಮೌಲ್ಯಮಾಪನಕ್ಕಾಗಿ ಅಧ್ಯಾಪಕರಿಗೆ ತೋರಿಸಬೇಕು. ಮನೆಯಲ್ಲಿ ತರಗತಿಯ ವಾತಾವರಣವನ್ನು ಒದಗಿಸಿಕೊಟ್ಟು,ವಿದ್ಯಾರ್ಥಿಗಳಿಗೆ ಮನೆಯವರು ಸಹಕರಿಸಬೇಕು. ಅಲ್ಲದೇ, ಮದ್ರಸಾ ಹಾಗೂ ಜಮಾಅತ್ ಕಮಿಟಿಗಳು ಸೇರಿ, ಆನ್‌ಲೈನ್ ತರಗತಿಗಳು ಆಯಾ ಮದ್ರಸಗಳ ವಿದ್ಯಾರ್ಥಿಗಳಿಗೆ ಅವರವರ ಮನೆಗಳಲ್ಲಿಯೇ ಸುಲಭವಾಗಿ ತಲುಪುವಂತೆ ಎಲ್ಲಾ ರೀತಿಯಲ್ಲಿ ಸಹಕಾರವನ್ನು ನೀಡಬೇಕು. ಮದ್ರಸಗಳು ತೆರೆಯುವ ವರೆಗೆ ಮಾತ್ರ ಆನ್ ಲೈನ್ ತರಗತಿಗಳು ನಡೆಯಲಿದೆ ಎಂದು ಬೋರ್ಡ್ ಹೇಳಿದೆ. 
ಶುಕ್ರವಾರ ಅಲ್ಲದ ಎಲ್ಲಾ ದಿನಗಳಲ್ಲಿ ಬೆಳಿಗ್ಗೆ 7:30 ರಿಂದ 8:30 ರ ವರೆಗೆ ಒಂದು ಗಂಟೆಯ ಕಾಲ ತರಗತಿ ನಡೆಯಲಿದೆ. ಒಂದನೆಯ ತರಗತಿಯಿಂದ +2 ತನಕ ಇರುವ ವಿದ್ಯಾರ್ಥಿಗಳಿಗೆ ತರಗತಿಗಳು ಇರಲಿವೆ. ಪ್ರತಿಯೊಂದು ಕ್ಲಾಸ್ ಗಳಿಗೂ ಬೇರೆ ಬೇರೆ ಲಿಂಕ್ ಇರುತ್ತದೆ. ಅವುಗಳನ್ನು ಸಮಸ್ತ ಆನ್ ಲೈನ್ ಎಂಬ ಯೂಟೂಬ್ ಚಾನೆಲ್ ನಿಂದ ಪಡೆಯಬಹುದಾಗಿದೆ.
ಭಾರತದಾಚೆ ಯು.ಎ.ಇ, ಸೌದಿ ಅರೇಬಿಯಾ, ಒಮಾನ್,ಕತಾರ್,ಕುವೈತ್,ಬಹರೈನ್, ಮಲೇಷ್ಯಾ ಗಳಲ್ಲೂ ಸಮಸ್ತ ವಿದ್ಯಾಭ್ಯಾಸ ಬೋರ್ಡ್ ನ ಮದ್ರಸಗಳಿವೆ. ಸಮಸ್ತ ಆನ್ ಲೈನ್ ಚಾನಲ್ ನ ಉದ್ಘಾಟನೆಯನ್ನು ಸಯ್ಯಿದ್ ಹೈದರಲಿ ಶಿಹಾಬ್ ತಂಗಳ್ ಪಾಣಕ್ಕಾಡ್ ಅವರು ಇತ್ತೀಚಿಗೆ ನೆರವೇರಿಸಿದ್ದರು.

ಆನ್ ಲೈನ್ ಶಿಕ್ಷಣ ಸುಲಭವೇ..?
ಆನ್ ಲೈನ್ ಶಿಕ್ಷಣ ದ ಬಗ್ಗೆ ಹಲವರಿಗೆ ಗೊಂದಲಗಳು ಸಹಜ. ಏಕೆಂದರೆ, ಕ್ಲಾಸ್ ಕೇಳಲು ಮೊಬೈಲ್,ಟ್ಯಾಬ್, ಲಾಪ್ ಟಾಪ್ ಗಳಂತಹ ಸೂಕ್ತವಾದ ಉಪಕರಣಗಳಿಲ್ಲದೆ ಹೋದರೆ ಅಥವಾ ನೆಟ್ ವರ್ಕ್ ಸಮಸ್ಯೆಗಳು ಇರುವಲ್ಲಿ ವಾಸಿಸುವ ವಿದ್ಯಾರ್ಥಿಗಳಿಗೆ ಇದು ಕಷ್ಟ ಸಾಧ್ಯ ಅನ್ನುವ ವಿಷಯದಲ್ಲಿ ಎರಡು ಮಾತಿಲ್ಲ. ಹಾಗಂತ ಸಮಸ್ತ ಸಂಪೂರ್ಣವಾಗಿ ಆನ್ಲೈನೀಕರಣ ಮಾಡುವುದಾಗಿಯೂ ಹೇಳಿಲ್ಲ. ಸದ್ಯದ ಮಟ್ಟಿಗೆ ತಿಂಗಳುಗಳ ಕಾಲ ನಮ್ಮ ಮಕ್ಕಳು ಧಾರ್ಮಿಕ ಶಿಕ್ಷಣದಿಂದ ದೂರ ಉಳಿಯದಿರಲಿ ಎಂಬ ಉದ್ದೇಶದಿಂದ ಇದೊಂದು ತಾತ್ಕಾಲಿಕ ಪರಿಹಾರವನ್ನು ಕಂಡುಕೊಳ್ಳಲಾಗಿದೆ. ಇತ್ತೀಚಿಗೆ ಕೇರಳದ ಸಮೀಕ್ಷೆಯೊಂದು ಹೇಳಿದಂತೆ, ಕೇರಳದಲ್ಲಿ ವಿಶ್ವವಿದ್ಯಾಲಯ ಮಟ್ಟದಲ್ಲಿ ಸಂಪೂರ್ಣವಾಗಿ ಆನ್ ಲೈನ್ ಶಿಕ್ಷಣ ಜಾರಿಗೆ ತರುವುದಾದರೆ, ರಾಜ್ಯದ ಶೇ.30 ಕ್ಕಿಂತ ಹೆಚ್ಚು ವಿದ್ಯಾರ್ಥಿಗಳಿಗೆ ಆನ್ ಲೈನ್ ಶಿಕ್ಷಣ ಪಡೆಯಲು ಆಗಲ್ಲ. ಕರ್ನಾಟಕದ ಪರಿಸ್ಥಿತಿಯೂ ಕೂಡಾ ಇದಕ್ಕಿಂತ ಭಿನ್ನವೇನಲ್ಲ. ಅಲ್ಲದೇ, ಅಭಿವೃದ್ಧಿ ಹೊಂದಿದ ರಾಷ್ಟ್ರಗಳಲ್ಲಿ ಕೂಡಾ, ಇದರಿಂದ ವಿದ್ಯಾರ್ಥಿಗಳ ಬೌದ್ಧಿಕ ಬೆಳವಣಿಗೆ ಸಂಪೂರ್ಣವಾಗಿ ಆಗಬೇಕೆಂದಿಲ್ಲ ಎಂದು ಅಲ್ಲಿನ ಸಮೀಕ್ಷೆಗಳು ಹೇಳಿವೆ. ಭಾರತದಂತಹ ದೇಶದಲ್ಲಿ ಈ ಪ್ರಯತ್ನಗಳ ಸಾಧಕ ಬಾಧಕಗಳ ಕುರಿತು ಇನ್ನೂ ಚರ್ಚೆಗಳಾಗಬೇಕಿದೆ. ಅದು ಎಷ್ಟರ ಮಟ್ಟಿಗೆ, ಯಾವ ರೀತಿಯಲ್ಲಿ ಪರಿಣಾಮ ಬೀರಲಿದೆ ಎಂಬುದನ್ನು‌ ಮುಂದಿನ ದಿನಗಳಲ್ಲಿ ಕಾದು ನೋಡಬೇಕಿದೆ. 


ಚಾನೆಲ್ ಲಿಂಕ್:

-ನಿಝಾಮ್ ಅನ್ಸಾರಿ ಕಲ್ಲಡ್ಕ

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ರಂಝಾನ್ ನೀಡುವ ಒಳಿತಿನ ಸಂದೇಶ...

-ನಿಝಾಮ್ ಅನ್ಸಾರಿ ಮತ್ತೆ ರಂಝಾನ್ ತಿಂಗಳ ಆಗಮನವಾಗಿದೆ. ಪ್ರತಿ ವರ್ಷವೂ ರಂಝಾನ್ ಬಗ್ಗೆ ಬರೆಯುವಾಗ ಅದರ ಶ್ರೇಷ್ಟತೆ, ವ್ರತಾನುಷ್ಟಾನದ ಪ್ರಾಧಾನ್ಯತೆಯನ್ನೇ ಹೆಚ್ಚಿನವರೂ ಬರೆಯುತ್ತಾರೆ. ಅದನ್ನೇ ಮಸೀದಿಗಳಲ್ಲೂ ಹೇಳುವುದಿದೆ. ಒಳ್ಳೆಯದೇ. ಕಾರಣ ಆಧುನಿಕ ಜನರು ಧರ್ಮದ ಪ್ರತಿಯೊಂದು ವಿಷಯಗಳಲ್ಲೂ ಸಡಿಲಿಕೆ ಬಯಸುತ್ತಾರೆ. ಅಂದರೆ ಅವರವರ ಜೀವನಕ್ರಮಗಳಿಗನುಸಾರವಾಗಿ ಧರ್ಮದ ನಿಯಮಗಳನ್ನು ಗಾಳಿಗೆ ತೂರುವಂತಹ ಕಾರ್ಯಗಳು ಎಲ್ಲಾ ಕಡೆ ನಡೆಯುತ್ತಲಿದೆ. ಹಾಗಿರುವಾಗ ರಂಝಾನ್ ವ್ರತಾಚರಣೆಯ ಮಹತ್ವವನ್ನು ಪ್ರತಿ ಬಾರಿಯೂ ಪ್ರಭಾಷಣ ವೇದಿಕೆಗಳಲ್ಲಿ, ಮಸೀದಿಗಳಲ್ಲಿ ಜನ ಸಾಮಾನ್ಯರಿಗೆ ನೆನಪಿಸುತ್ತಲಿರುವುದು ಸ್ವಾಗತಾರ್ಹವಾದುದು. ಮತ್ತು ಪ್ರಯೋಜನಕಾರಿಯೂ ಕೂಡಾ. ಯಾಕೆ ಈ ರೀತಿ ಬರೆದೆ ಅಂತ ಕೇಳಿದರೆ, ಇತ್ತೀಚೆಗೆ ವಾಟ್ಸಾಪ್ ನೊಳಗೆ ಕಣ್ಣಾಡಿಸಿದಾಗ ಕಂಡ ಕೆಲವೊಂದು ಸಂದೇಶಗಳು ಧರ್ಮದ ಬಗ್ಗೆ ಕೀಳರಿಮೆಯ ಭಾವ ತೋರುವವರಿಗೆ ತಕ್ಕ ಉತ್ತರ ನೀಡುವಂತಿತ್ತು. ಬಡ ಕುಟುಂಬಕ್ಕೆ ಮನೆ ಕಟ್ಟುವ ಸಹಾಯಾರ್ಥ ಕಲೆಕ್ಷನ್, ರಂಝಾನ್ ನಂತರದ ಬಡ ಹೆಣ್ಮಕ್ಕಳ ಮದುವೆಗಾಗಿ, ಮುಅಲ್ಲಿಂಗಳಿಗಾಗಿ ಹೀಗೇ ಹಲವು ರೀತಿಯಲ್ಲಿ ಯುವ-ವಯಸ್ಕರು ಸೇರಿ ಸಮುದಾಯದೊಂದಿಗಿನ ಸಾಮಾಜಿಕ ಕಾಳಜಿಗಾಗಿ ರಂಝಾನ್ ಅನ್ನು ಉಪಯೋಗಿಸುತ್ತಿದ್ದಾರೆನ್ನುವಾಗ ಧರ್ಮದ ಮನದಲ್ಲಿ ಅಭಿಮಾನ ಮೂಡುತ್ತಿದೆ. ಬುರ್ಖಾದ ವಿಚಾರದಲ್ಲಿ ಬಲತ್ಕಾರ ಮಾಡಲಾಗುತ್ತದೆ ಎಂದು ಆರೋಪಿಸುತ್ತಿರುವಾಗ, ಆ ವಾದವನ್ನು ವಿರ...

ನಾನುಗೌರಿ ವೆಬ್ ನಲ್ಲಿ ಪ್ರಕಟಗೊಂಡ ಬರಹಗಳು..ಓದಲು ಈ ಲಿಂಕ್ ಉಪಯೋಗಿಸಿ

-ನಿಝಾಮ್ ಅನ್ಸಾರಿ ಭಾರತದ ಉನ್ನತ ಶಿಕ್ಷಣದ ಮಹಾನ್‌ ಆಶಯಕ್ಕೆ ಎಳ್ಳುನೀರು ಬಿಡುತ್ತಿರುವ ಪ್ರಭುತ್ವ… http://naanugauri.com/indian-higher-education-shrinking-down- **************************************************************** ಲಾಕ್‌ಡೌನ್‌: ತುತ್ತು ಅನ್ನಕ್ಕಾಗಿ ಗುಳೆ ಹೊರಟವರ ಕತೆ http://naanugauri.com/lockdown-story-of-labour/ via @Naanu gauri ***************************************************************** ಪೌರತ್ವ ವಸೂಲಿ – ನಾಝಿ ಜರ್ಮನಿಯಿಂದ ಕಲಿಯಬೇಕಾದುದು… http://naanugauri.com/citizen-amendment-act-same-thing-happen-in-german-80-years-back- ****************************************************************** ಪ್ಲೇಗ್ ಹಾಗೂ ಕೋವಿಡ್ 19 ನಡುವೆ ಕೆಲವು ಹೋಲಿಕೆಗಳು http://naanugauri.com/covid-19-and-bubonic-plague-this-lead-to-renaissance/ via @Naanu gauri

ಅಳಿವಿನಂಚಿನಲ್ಲಿರುವ ಸಾಂಪ್ರದಾಯಿಕ ಕೃಷಿ ಪರಂಪರೆ-* ನಿಝಾಮ್ ಅನ್ಸಾರಿ

ಭಾರತವು ಕೃಷಿ ಅವಲಂಬಿತ ಹಳ್ಳಿಗಳನ್ನೊಳಗೊಂಡ ಸಮೃದ್ಧ ದೇಶ. ದೇಶದ ಬೆಳವಣಿಗೆಯಲ್ಲಿ ವ್ಯವಸಾಯದ ಪಾತ್ರ ಬಹುಮುಖ್ಯವಾದುದು. ತಂತ್ರಜ್ಞಾನವು ದೇಶಕ್ಕೆ ಯಾವ ರೀತಿಯಲ್ಲಿ ಕೊಡುಗೆಗಳನ್ನು ನೀಡುತ್ತವೆಯೋ ಅದೇ ರೀತಿಯಲ್ಲಿ ಕೃಷಿಯ ಕೊಡುಗೆಯೂ ಕೂಡಾ ಅಪಾರವಾದುದು. ಆದರೆ ಇತ್ತೀಚಿನ ದಿನಗಳಲ್ಲಿ ಹಳ್ಳಿಗಳಲ್ಲಿ ವ್ಯವಸಾಯವು ಇಳಿಮುಖವಾಗುತ್ತಿದೆ. ಕೇವಲ ಬೆರಳೆಣಿಕೆಯಷ್ಟು ಮಂದಿ ಮಾತ್ರ ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವವರನ್ನು ಕಾಣಬಹುದಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿನ ಜನರು ವಿದ್ಯಾವಂತರಾಗುತ್ತಲೇ ತಮ್ಮ ಪಾರಂಪರಿಕ ಕುಲ ಕಸುಬನ್ನು ನಿರ್ಲಕ್ಷಿಸಿ ನಗರಗಳತ್ತ ವಲಸೆ ಹೋಗುತ್ತಿದ್ದಾರೆ.ಕೈ ಕೆಸರು ಮಾಡಿಕೊಂಡು ದುಡಿಯುವವರ ಕೊರತೆ ಅಗಾಧವಾಗಿ ಎದ್ದು ಕಾಣುತ್ತಿದೆ. ಇಂದಿನ ನವ ತಲೆಮಾರು ಹಳ್ಳಿಗಳು ಕೇವಲ ವೃದ್ಧರಿಗೆ ಮಾತ್ರ ಯೋಗ್ಯವಾದುದು ಎಂದು ತಿಳಿದಂತಿದೆ. `ನೇಗಿಲಾ ಹಿಡಿದಾ ಹೊಲದಲಿ ಹಾಡುತ ಉಳುವಾ ಯೋಗಿಯ ನೋಡಲ್ಲಿ’ ಎಂದು ಕುವೆಂಪುರಂತಹ ಖ್ಯಾತ ಕವಿಗಳಿಂದ ಕೊಂಡಾಡಲ್ಪಟ್ಟ ಕೃಷಿ ಚಟುವಟಿಕೆಗಳಿಂದು ಕಣ್ಮರೆಯಾಗಿದೆ. ನೇಗಿಲಿನಂತಹ ಕೃಷಿ ಸಲಕರಣೆಗಳು ಇಂದು ಮ್ಯೂಸಿಯಂ ಸೇರಿಬಿಟ್ಟಿವೆ. ಇದರೊಂದಿಗೆ ಅತ್ಯಂತ ಸುಂದರವಾದ ಕೃಷಿ ಪರಂಪರೆ ಮೂಲೆಗುಂಪಾಗುತ್ತಿದೆ. ಹಳೆಯ ಕಾಲದ ಸಾಂಪ್ರದಾಯಿಕ ಬೇಸಾಯಕ್ಕೆ ಉಪಯೋಗವಾಗುತ್ತಿದ್ದ ಪರಿಕರಗಳ ಸ್ಥಾನವನ್ನು ಟ್ರಾಕ್ಟರ್,ಟಿಲ್ಲರ್ ಗಳಂತಹ ಯಂತ್ರಗಳು ಆಕ್ರಮಿಸಿಕೊಂಡಿವೆ. ಭತ್ತ ನಾಟಿ ಮಾಡುವ ಮಹಿಳೆಯರಿಂದ ಕೇಳಿ ಬರು...