ವಿಷಯಕ್ಕೆ ಹೋಗಿ

ಇಂದಿನಿಂದ 'ಸಮಸ್ತ'ದ ಆನ್ ಲೈನ್ ತರಗತಿಗಳು ಆರಂಭ

ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಒಕ್ಕೂಟದ (SKJU)ಅಧೀನದಲ್ಲಿ‌ ಕಾರ್ಯಾಚರಿಸುವ ಸಮಸ್ತ ಕೇರಳ ಇಸ್ಲಾಂ ಮತ ವಿದ್ಯಾಭ್ಯಾಸ ಬೋರ್ಡ್‌ ಅಂಗೀಕೃತ ಮದ್ರಸಗಳ ವಿದ್ಯಾರ್ಥಿಗಳಿಗೆ ನವ ಅಧ್ಯಯನ ವರ್ಷ ಇಂದಿನಿಂದ ಆರಂಭಗೊಂಡಿದೆ. ವಿಶೇಷ ಅಂದ್ರೆ, ಈ ಬಾರಿ ತರಗತಿಗಳ ಪ್ರಾರಂಭೋತ್ಸವದ ಸಂಭ್ರಮಗಳಿಲ್ಲದೆ, ಮದ್ರಸಾ ಕಟ್ಟಡಗಳು ತೆರೆಯದೇ, ಹತ್ತು ಸಾವಿರಕ್ಕೂ ಮಿಕ್ಕ ಮದ್ರಸಗಳ ಹನ್ನೆರಡು ಲಕ್ಷ ವಿದ್ಯಾರ್ಥಿಗಳು ಅವರವರ ಮನೆಗಳಲ್ಲಿಯೇ ಕುಳಿತು ತರಗತಿಗಳಲ್ಲಿ ಪಾಲ್ಗೊಳ್ಳುತ್ತಿರುವುದು ಎಂಬುದು. 
ಆನ್ ಲೈನ್ ತರಗತಿಗಳಿಗಾಗಿ, ಸಮಸ್ತ ಈ ಹಿಂದೆಯೇ ಎಲ್ಲಾ ಸಿದ್ಧತೆಗಳನ್ನು ನಡೆಸಿದ್ದು, ವಿದ್ಯಾಭ್ಯಾಸ ಬೋರ್ಡ್‌ ಅದಕ್ಕಾಗಿ ಆರು ಕ್ಯಾಮರಾ ಯುನಿಟ್ ಗಳ ಕ್ಲಾಸ್ ರೂಂಗಳು ,22 ಪರಿಣತರಾದ ಅಧ್ಯಾಪಕರನ್ನು ನೇಮಕಗೊಳಿಸಿದೆ.  ತರಗತಿ ಆರಂಭದಿಂದ ಕೊನೆಯವರೆಗೂ ವಿದ್ಯಾರ್ಥಿ ಜೊತೆ ಪೋಷಕರು ಕುಳಿತಿರಬೇಕು.ಹೋಂ ವರ್ಕ್ ನೀಡಿದರೆ, ಅದನ್ನು ಮಾಡಿ, ಮುಂದೆ ಮದ್ರಸಗಳಲ್ಲಿ ತರಗತಿ ಆರಂಭಗೊಳ್ಳುವಾಗ ಮೌಲ್ಯಮಾಪನಕ್ಕಾಗಿ ಅಧ್ಯಾಪಕರಿಗೆ ತೋರಿಸಬೇಕು. ಮನೆಯಲ್ಲಿ ತರಗತಿಯ ವಾತಾವರಣವನ್ನು ಒದಗಿಸಿಕೊಟ್ಟು,ವಿದ್ಯಾರ್ಥಿಗಳಿಗೆ ಮನೆಯವರು ಸಹಕರಿಸಬೇಕು. ಅಲ್ಲದೇ, ಮದ್ರಸಾ ಹಾಗೂ ಜಮಾಅತ್ ಕಮಿಟಿಗಳು ಸೇರಿ, ಆನ್‌ಲೈನ್ ತರಗತಿಗಳು ಆಯಾ ಮದ್ರಸಗಳ ವಿದ್ಯಾರ್ಥಿಗಳಿಗೆ ಅವರವರ ಮನೆಗಳಲ್ಲಿಯೇ ಸುಲಭವಾಗಿ ತಲುಪುವಂತೆ ಎಲ್ಲಾ ರೀತಿಯಲ್ಲಿ ಸಹಕಾರವನ್ನು ನೀಡಬೇಕು. ಮದ್ರಸಗಳು ತೆರೆಯುವ ವರೆಗೆ ಮಾತ್ರ ಆನ್ ಲೈನ್ ತರಗತಿಗಳು ನಡೆಯಲಿದೆ ಎಂದು ಬೋರ್ಡ್ ಹೇಳಿದೆ. 
ಶುಕ್ರವಾರ ಅಲ್ಲದ ಎಲ್ಲಾ ದಿನಗಳಲ್ಲಿ ಬೆಳಿಗ್ಗೆ 7:30 ರಿಂದ 8:30 ರ ವರೆಗೆ ಒಂದು ಗಂಟೆಯ ಕಾಲ ತರಗತಿ ನಡೆಯಲಿದೆ. ಒಂದನೆಯ ತರಗತಿಯಿಂದ +2 ತನಕ ಇರುವ ವಿದ್ಯಾರ್ಥಿಗಳಿಗೆ ತರಗತಿಗಳು ಇರಲಿವೆ. ಪ್ರತಿಯೊಂದು ಕ್ಲಾಸ್ ಗಳಿಗೂ ಬೇರೆ ಬೇರೆ ಲಿಂಕ್ ಇರುತ್ತದೆ. ಅವುಗಳನ್ನು ಸಮಸ್ತ ಆನ್ ಲೈನ್ ಎಂಬ ಯೂಟೂಬ್ ಚಾನೆಲ್ ನಿಂದ ಪಡೆಯಬಹುದಾಗಿದೆ.
ಭಾರತದಾಚೆ ಯು.ಎ.ಇ, ಸೌದಿ ಅರೇಬಿಯಾ, ಒಮಾನ್,ಕತಾರ್,ಕುವೈತ್,ಬಹರೈನ್, ಮಲೇಷ್ಯಾ ಗಳಲ್ಲೂ ಸಮಸ್ತ ವಿದ್ಯಾಭ್ಯಾಸ ಬೋರ್ಡ್ ನ ಮದ್ರಸಗಳಿವೆ. ಸಮಸ್ತ ಆನ್ ಲೈನ್ ಚಾನಲ್ ನ ಉದ್ಘಾಟನೆಯನ್ನು ಸಯ್ಯಿದ್ ಹೈದರಲಿ ಶಿಹಾಬ್ ತಂಗಳ್ ಪಾಣಕ್ಕಾಡ್ ಅವರು ಇತ್ತೀಚಿಗೆ ನೆರವೇರಿಸಿದ್ದರು.

ಆನ್ ಲೈನ್ ಶಿಕ್ಷಣ ಸುಲಭವೇ..?
ಆನ್ ಲೈನ್ ಶಿಕ್ಷಣ ದ ಬಗ್ಗೆ ಹಲವರಿಗೆ ಗೊಂದಲಗಳು ಸಹಜ. ಏಕೆಂದರೆ, ಕ್ಲಾಸ್ ಕೇಳಲು ಮೊಬೈಲ್,ಟ್ಯಾಬ್, ಲಾಪ್ ಟಾಪ್ ಗಳಂತಹ ಸೂಕ್ತವಾದ ಉಪಕರಣಗಳಿಲ್ಲದೆ ಹೋದರೆ ಅಥವಾ ನೆಟ್ ವರ್ಕ್ ಸಮಸ್ಯೆಗಳು ಇರುವಲ್ಲಿ ವಾಸಿಸುವ ವಿದ್ಯಾರ್ಥಿಗಳಿಗೆ ಇದು ಕಷ್ಟ ಸಾಧ್ಯ ಅನ್ನುವ ವಿಷಯದಲ್ಲಿ ಎರಡು ಮಾತಿಲ್ಲ. ಹಾಗಂತ ಸಮಸ್ತ ಸಂಪೂರ್ಣವಾಗಿ ಆನ್ಲೈನೀಕರಣ ಮಾಡುವುದಾಗಿಯೂ ಹೇಳಿಲ್ಲ. ಸದ್ಯದ ಮಟ್ಟಿಗೆ ತಿಂಗಳುಗಳ ಕಾಲ ನಮ್ಮ ಮಕ್ಕಳು ಧಾರ್ಮಿಕ ಶಿಕ್ಷಣದಿಂದ ದೂರ ಉಳಿಯದಿರಲಿ ಎಂಬ ಉದ್ದೇಶದಿಂದ ಇದೊಂದು ತಾತ್ಕಾಲಿಕ ಪರಿಹಾರವನ್ನು ಕಂಡುಕೊಳ್ಳಲಾಗಿದೆ. ಇತ್ತೀಚಿಗೆ ಕೇರಳದ ಸಮೀಕ್ಷೆಯೊಂದು ಹೇಳಿದಂತೆ, ಕೇರಳದಲ್ಲಿ ವಿಶ್ವವಿದ್ಯಾಲಯ ಮಟ್ಟದಲ್ಲಿ ಸಂಪೂರ್ಣವಾಗಿ ಆನ್ ಲೈನ್ ಶಿಕ್ಷಣ ಜಾರಿಗೆ ತರುವುದಾದರೆ, ರಾಜ್ಯದ ಶೇ.30 ಕ್ಕಿಂತ ಹೆಚ್ಚು ವಿದ್ಯಾರ್ಥಿಗಳಿಗೆ ಆನ್ ಲೈನ್ ಶಿಕ್ಷಣ ಪಡೆಯಲು ಆಗಲ್ಲ. ಕರ್ನಾಟಕದ ಪರಿಸ್ಥಿತಿಯೂ ಕೂಡಾ ಇದಕ್ಕಿಂತ ಭಿನ್ನವೇನಲ್ಲ. ಅಲ್ಲದೇ, ಅಭಿವೃದ್ಧಿ ಹೊಂದಿದ ರಾಷ್ಟ್ರಗಳಲ್ಲಿ ಕೂಡಾ, ಇದರಿಂದ ವಿದ್ಯಾರ್ಥಿಗಳ ಬೌದ್ಧಿಕ ಬೆಳವಣಿಗೆ ಸಂಪೂರ್ಣವಾಗಿ ಆಗಬೇಕೆಂದಿಲ್ಲ ಎಂದು ಅಲ್ಲಿನ ಸಮೀಕ್ಷೆಗಳು ಹೇಳಿವೆ. ಭಾರತದಂತಹ ದೇಶದಲ್ಲಿ ಈ ಪ್ರಯತ್ನಗಳ ಸಾಧಕ ಬಾಧಕಗಳ ಕುರಿತು ಇನ್ನೂ ಚರ್ಚೆಗಳಾಗಬೇಕಿದೆ. ಅದು ಎಷ್ಟರ ಮಟ್ಟಿಗೆ, ಯಾವ ರೀತಿಯಲ್ಲಿ ಪರಿಣಾಮ ಬೀರಲಿದೆ ಎಂಬುದನ್ನು‌ ಮುಂದಿನ ದಿನಗಳಲ್ಲಿ ಕಾದು ನೋಡಬೇಕಿದೆ. 


ಚಾನೆಲ್ ಲಿಂಕ್:

-ನಿಝಾಮ್ ಅನ್ಸಾರಿ ಕಲ್ಲಡ್ಕ

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಅಳಿವಿನಂಚಿನಲ್ಲಿರುವ ಸಾಂಪ್ರದಾಯಿಕ ಕೃಷಿ ಪರಂಪರೆ-* ನಿಝಾಮ್ ಅನ್ಸಾರಿ

ಭಾರತವು ಕೃಷಿ ಅವಲಂಬಿತ ಹಳ್ಳಿಗಳನ್ನೊಳಗೊಂಡ ಸಮೃದ್ಧ ದೇಶ. ದೇಶದ ಬೆಳವಣಿಗೆಯಲ್ಲಿ ವ್ಯವಸಾಯದ ಪಾತ್ರ ಬಹುಮುಖ್ಯವಾದುದು. ತಂತ್ರಜ್ಞಾನವು ದೇಶಕ್ಕೆ ಯಾವ ರೀತಿಯಲ್ಲಿ ಕೊಡುಗೆಗಳನ್ನು ನೀಡುತ್ತವೆಯೋ ಅದೇ ರೀತಿಯಲ್ಲಿ ಕೃಷಿಯ ಕೊಡುಗೆಯೂ ಕೂಡಾ ಅಪಾರವಾದುದು. ಆದರೆ ಇತ್ತೀಚಿನ ದಿನಗಳಲ್ಲಿ ಹಳ್ಳಿಗಳಲ್ಲಿ ವ್ಯವಸಾಯವು ಇಳಿಮುಖವಾಗುತ್ತಿದೆ. ಕೇವಲ ಬೆರಳೆಣಿಕೆಯಷ್ಟು ಮಂದಿ ಮಾತ್ರ ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವವರನ್ನು ಕಾಣಬಹುದಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿನ ಜನರು ವಿದ್ಯಾವಂತರಾಗುತ್ತಲೇ ತಮ್ಮ ಪಾರಂಪರಿಕ ಕುಲ ಕಸುಬನ್ನು ನಿರ್ಲಕ್ಷಿಸಿ ನಗರಗಳತ್ತ ವಲಸೆ ಹೋಗುತ್ತಿದ್ದಾರೆ.ಕೈ ಕೆಸರು ಮಾಡಿಕೊಂಡು ದುಡಿಯುವವರ ಕೊರತೆ ಅಗಾಧವಾಗಿ ಎದ್ದು ಕಾಣುತ್ತಿದೆ. ಇಂದಿನ ನವ ತಲೆಮಾರು ಹಳ್ಳಿಗಳು ಕೇವಲ ವೃದ್ಧರಿಗೆ ಮಾತ್ರ ಯೋಗ್ಯವಾದುದು ಎಂದು ತಿಳಿದಂತಿದೆ. `ನೇಗಿಲಾ ಹಿಡಿದಾ ಹೊಲದಲಿ ಹಾಡುತ ಉಳುವಾ ಯೋಗಿಯ ನೋಡಲ್ಲಿ’ ಎಂದು ಕುವೆಂಪುರಂತಹ ಖ್ಯಾತ ಕವಿಗಳಿಂದ ಕೊಂಡಾಡಲ್ಪಟ್ಟ ಕೃಷಿ ಚಟುವಟಿಕೆಗಳಿಂದು ಕಣ್ಮರೆಯಾಗಿದೆ. ನೇಗಿಲಿನಂತಹ ಕೃಷಿ ಸಲಕರಣೆಗಳು ಇಂದು ಮ್ಯೂಸಿಯಂ ಸೇರಿಬಿಟ್ಟಿವೆ. ಇದರೊಂದಿಗೆ ಅತ್ಯಂತ ಸುಂದರವಾದ ಕೃಷಿ ಪರಂಪರೆ ಮೂಲೆಗುಂಪಾಗುತ್ತಿದೆ. ಹಳೆಯ ಕಾಲದ ಸಾಂಪ್ರದಾಯಿಕ ಬೇಸಾಯಕ್ಕೆ ಉಪಯೋಗವಾಗುತ್ತಿದ್ದ ಪರಿಕರಗಳ ಸ್ಥಾನವನ್ನು ಟ್ರಾಕ್ಟರ್,ಟಿಲ್ಲರ್ ಗಳಂತಹ ಯಂತ್ರಗಳು ಆಕ್ರಮಿಸಿಕೊಂಡಿವೆ. ಭತ್ತ ನಾಟಿ ಮಾಡುವ ಮಹಿಳೆಯರಿಂದ ಕೇಳಿ ಬರು...

ಅರಬಿ ಭಾಷೆ : ಇತಿಹಾಸ ಮತ್ತು ವರ್ತಮಾನ

✒ ನಿಝಾಮ್ ಅನ್ಸಾರಿ ಭಾಷೆ ಮನುಷ್ಯನ ಸವಿಶೇಷತೆಗಳಲ್ಲೊಂದು. ಚಿಂತನೆಗಳು ಮತ್ತು ಅಭಿರುಚಿಗಳ ಆಶಯವನ್ನು ಅಭಿವ್ಯಕ್ತಿಗೊಳಿಸುವ ಅಥವಾ ಹೊರ ಹಾಕುವ ಶಬ್ದಗಳ ಒಂದು ಸಮೂಹವಾಗಿದೆ ಇದು. ಪ್ರಪಂಚದಲ್ಲಿ ಇಂದು ಹಲವು ಅಧಿಕೃತವಾಗಿರುವ ಭಾಷೆಗಳು ಅಸ್ತಿತ್ವದಲ್ಲಿವೆ.ಅದರಲ್ಲೂ ಪ್ರಾದೇಶಿಕ ಭಾಷೆಗಳು ಬೇರೇನೆ. ಆದರೆ ಈ ಎಲ್ಲಾ ಭಾಷೆಗಳ ಪೈಕಿ ರಾಜನಂತೆ ಇರೋದು ಅರಬಿ ಭಾಷೆ ಮಾತ್ರ . ಒಂದು ಕಾಲದಲ್ಲಿ ಇಡೀ ಜಗತ್ತನ್ನೇ ನಿಯಂತ್ರಿಸುವ ತಾಕತ್ತಿದ್ದ ಭಾಷೆಯಾಗಿತ್ತು ಅರಬಿ. ಯಾವ ರೀತಿಯಲ್ಲಿ ಈಗ ಆಂಗ್ಲ ಭಾಷೆಗೆ ಪ್ರಾಧಾನ್ಯತೆ, ಜಾಗತಿಕ ಅಂಗೀಕಾರ ಇದೆಯೋ ಅದೇ ರೀತಿಯಲ್ಲಿ ಅಂದು ಅರಬಿ ಭಾಷೆ ಸ್ಥಾನ ಪಡೆದಿತ್ತು. ಬಲದಿಂದ ಎಡಕ್ಕೆ ಇರುವ ಕೆಲವೊಂದು ಭಾಷೆಗಳಲ್ಲಿ ಅರಬೀ ಕೂಡಾ ಒಂದು. ಸೈಮಟಿಕ್ ಭಾಷೆಗಳಲ್ಲೊಂದಾದ ಅರಬಿ ಜಗತ್ತಿನ ಅತ್ಯಂತ ಪುರಾತನ ಭಾಷೆಗಳ ಪೈಕಿ ಒಂದು ಕೂಡಾ . ಐಕ್ಯ ರಾಷ್ಟ್ರ ಸಂಘದ ಅಂಗೀಕೃತ ಭಾಷೆಯಾದ ಅರಬಿ, 26 ದೇಶಗಳ ಅಧಿಕೃತ ಭಾಷೆಯಾಗಿದೆ‌. ಆಫ್ರಿಕನ್ ಯೂನಿಯನ್ ಆರ್ಗನೈಸೇಷನ್ ಇಸ್ಲಾಮಿಕ್ ಕಾನ್ಫೆರನ್ಸ್ ನಂತಹ ಹಲವು ಅಂತಾರಾಷ್ಟ್ರೀಯ ಸಂಸ್ಥೆಗಳು ಅರಬಿ ಭಾಷೆಯನ್ನು ಅಧಿಕೃತ ಭಾಷೆಯಾಗಿ ಅಂಗೀಕರಿಸಿದೆ. ಅರಬಿ ಭಾಷೆ: ಹುಟ್ಟು ಮತ್ತು ಬೆಳವಣಿಗೆ ಬಿ.ಸಿ 1900 ರಲ್ಲಿ ಜೀವಿಸಿದ್ದ 'ಯಅರೂಬ್ ಇಬ್ನ್ ಖಹ್ತಾನ್' ಎಂಬವರನ್ನು ಅರಬಿ ಭಾಷೆಯ ಪಿತಾಮಹ ಎಂದು ಕರೆಯಲಾಗುತ್ತದೆ. ಇವರ ನಾಮಕ್ಕೆ ಹೊಂದಿಕೊಂಡು 'ಅರಬಿ' ಎಂಬ ಹೆಸರು...

ಕೋವಿಡ್ ಕಾಲದ ಓದು: ಚಂದ್ರನ ಚೂರು

'ಚಂದ್ರನ ಚೂರು' ಕೃತಿಯ ಹೆಸರು ಕೇಳಿದಾಗ ನಿಜವಾಗಿಯೂ ಅದೊಂದು ಕಾದಂಬರಿಯಾಗಿರಬಹುದು ಎಂದು ಭಾವಿಸಿದ್ದೆ. ಆದರೆ, ಪುಸ್ತಕ ಕೈಗೆ ತಲುಪಿದಾಗಲೇ ಗೊತ್ತಾಗಿದ್ದು, ಅದೊಂದು ಚಂದ್ರಲೋಕಕ್ಕೆ ಕೊಂಡೊಯ್ಯುವ ಅದ್ಭುತ ಕೃತಿ ಅಂತ. ತಂದೆ ಕುವೆಂಪು ಅವರ ಸಾಹಿತ್ಯದ ಹಾದಿಯಲ್ಲೇ ನಡೆದರೂ, ತೇಜಸ್ವಿಯವರ ಸಾಹಿತ್ಯವು ನಿಸರ್ಗ ವಿಸ್ಮಯ, ಭೂಗೋಳ, ಜೀವಶಾಸ್ತ್ರ, ಭತಶಾಸ್ತ್ರ, ಇತಿಹಾಸ ಹೀಗೇ ಎಲ್ಲಾ ಶಾಸ್ತ್ರಗಳ ಮಿಶ್ರಣ ರಸಾಯನ ಎಂದೇ ಹೇಳಬಹುದು. ಚಂದ್ರನ ಚೂರು ಚಂದ್ರ ಲೋಕದ ವಿಸ್ಮಯ ದೃಶ್ಯಗಳನ್ನು ಕಟ್ಟಿಕೊಡುವ ಚೊಚ್ಚಲ ಕೃತಿ. ಬಾಹ್ಯಾಕಾಶ, ಖಗೋಳ ಶಾಸ್ತ್ರ ವಿಷಯದಲ್ಲಿ ಆಸಕ್ತಿ ಇಲ್ಲದ ನನ್ನಂತವರನ್ನೂ ಇದು ಸರಾಗವಾಗಿ ಓದಿಸಿಕೊಂಡು ಹೋಗುವಂತೆ ಮಾಡುತ್ತದೆ, ಅದಕ್ಕೆ ಕಾರಣ, ತೇಜಸ್ವಿ ಅವರ ಬರವಣಿಗೆ ಹಾಗೂ ವಿವರಣೆಯ ಶೈಲಿ.. ಜಗತ್ತಿನಲ್ಲಿ ಮನುಷ್ಯನು ಚಂದ್ರನಲ್ಲಿಗೆ ಕಾಲಿಡುವುದಕ್ಕೂ ಮುನ್ನ, ಯಾವುದೆಲ್ಲಾ ರೀತಿಯ ಪರಿಶ್ರಮಗಳು ನಡೆದಿದ್ದವು ಹಾಗೂ ಭೂಮಂಡಲ ಮತ್ತು ಚಂದ್ರನ ಕುರಿತಾಘಿ ಯಾವುದೆಲ್ಲಾ ಆಯಾಮಗಳಲ್ಲಿ ಅಧ್ಯಯನಗಳಾಗಿದ್ದುವು ಎಂಬುದರ ಸಂಪೂರ್ಣ ವಿಷಯಗಳಿವೆ. ಚಂದ್ರನಲ್ಲಿ ತಲುಪಿದ ಮನುಷ್ಯನಿಗೆ ಆದ ಅನುಭವಗಳೇನು? ನೀಲ್ ಆಮ್Fಸ್ಟ್ರಾಂಗ್ ತಂಡದ ಚಂದ್ರಯಾನದ ರಸವತ್ತಾದ ಅನುಭವಗಳು, ಚಂದಿರನ ಮಣ್ಣಲ್ಲಿ ಅಮೇರಿಕದ ಫ್ಲಾಗ್ ಮತ್ತು ಬೋಡ್F ಸ್ಥಾಪಿಸಿ ಬಂದ ಆ ಧೀರ ತಂಡದ ಬೆರಗಾಗಿಸುವ ಕ್ಷಣ ಕ್ಷಣದ ವರದಿಗಳು ಈ ಕೃತಿಯ ಲೇಖನಗಳಲ್ಲಿ ಅಡಗಿದೆ. ಒಟ್ಟಿನಲ...